<p><strong>ಚನ್ನಪಟ್ಟಣ: </strong>ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಗ್ರಾಮದಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ ಖಂಡಿಸಿ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಘಟಕ ಹಾಗೂ ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿಗಳು ಪಟ್ಟಣದ ಅಂಬೇಡ್ಕರ್ ಪ್ರತಿಮೆ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ರಮೇಶ್ ಗೌಡ ಮಾತನಾಡಿ, ಇದು ನಾಗರಿಕ ಸಮಾಜ ತಲೆತಗ್ಗಿಸುವಂತದ್ದು. ಯುವಕ ಮಾಡಿರುವ ತಪ್ಪು ಸತ್ಯವಾಗಿದ್ದರೆ ಆತನನ್ನು ಶಿಕ್ಷಿಸಲು ಕಾನೂನಿನಲ್ಲಿ ಸಾಕಷ್ಟು ಅವಕಾಶಗಳಿವೆ. ಆದರೆ, ಮೂತ್ರ ಕುಡಿಸುವ ಮೂಲಕ ಅನಾಗರಿಕ ಶಿಕ್ಷೆ ನೀಡಿರುವುದು ಅಕ್ಷಮ್ಯ ಅಪರಾಧ. ಈ ಅಪರಾಧ ಎಸಗಿರುವ ಸಬ್ ಇನ್ಸ್ಪೆಕ್ಟರ್ ಅನ್ನು ಕಾಯಂ ಆಗಿ ಸೇವೆಯಿಂದ ವಜಾ ಮಾಡಬೇಕು. ಆತ ಕಾನೂನು ರಕ್ಷಕನಾಗಿರಲು ಯೋಗ್ಯತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ದಲಿತಪರ ಹೋರಾಟಗಾರ ಪಟ್ಲು ಗೋವಿಂದರಾಜು ಮಾತನಾಡಿ, ಸಂವಿಧಾನದ ಆಶಯಗಳಿಗೆ ಗೌರವ ನೀಡದ ಅಲ್ಲಿನ ಸಬ್ ಇನ್ಸ್ಪೆಕ್ಟರ್ ನಡವಳಿಕೆ ಖಂಡನೀಯ ಎಂದು ಹೇಳಿದರು.</p>.<p>ಮುಖಂಡರಾದ ಕುಮಾರ್ ಜಯಕಾಂತ್, ಮತ್ತೀಕೆರೆ ಹನುಮಂತು, ವೆಂಕಟೇಶ್, ನೀಲಸಂದ್ರ ಸಿದ್ಧರಾಮು, ಕೋಡಂಬಳ್ಳಿ ಹನುಮಂತು, ಬಿ.ವಿ.ಎಸ್. ಕುಮಾರ್, ಚಿಕ್ಕೇನಹಳ್ಳಿ ಸ್ವಾಮಿ, ಶಿವಪ್ಪ, ಕೋಟೆ ಶ್ರೀನಿವಾಸ್, ಶ್ರೀನಿವಾಸ್ ಮೂರ್ತಿ, ಸುರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ: </strong>ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಗ್ರಾಮದಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ ಖಂಡಿಸಿ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಘಟಕ ಹಾಗೂ ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿಗಳು ಪಟ್ಟಣದ ಅಂಬೇಡ್ಕರ್ ಪ್ರತಿಮೆ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ರಮೇಶ್ ಗೌಡ ಮಾತನಾಡಿ, ಇದು ನಾಗರಿಕ ಸಮಾಜ ತಲೆತಗ್ಗಿಸುವಂತದ್ದು. ಯುವಕ ಮಾಡಿರುವ ತಪ್ಪು ಸತ್ಯವಾಗಿದ್ದರೆ ಆತನನ್ನು ಶಿಕ್ಷಿಸಲು ಕಾನೂನಿನಲ್ಲಿ ಸಾಕಷ್ಟು ಅವಕಾಶಗಳಿವೆ. ಆದರೆ, ಮೂತ್ರ ಕುಡಿಸುವ ಮೂಲಕ ಅನಾಗರಿಕ ಶಿಕ್ಷೆ ನೀಡಿರುವುದು ಅಕ್ಷಮ್ಯ ಅಪರಾಧ. ಈ ಅಪರಾಧ ಎಸಗಿರುವ ಸಬ್ ಇನ್ಸ್ಪೆಕ್ಟರ್ ಅನ್ನು ಕಾಯಂ ಆಗಿ ಸೇವೆಯಿಂದ ವಜಾ ಮಾಡಬೇಕು. ಆತ ಕಾನೂನು ರಕ್ಷಕನಾಗಿರಲು ಯೋಗ್ಯತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ದಲಿತಪರ ಹೋರಾಟಗಾರ ಪಟ್ಲು ಗೋವಿಂದರಾಜು ಮಾತನಾಡಿ, ಸಂವಿಧಾನದ ಆಶಯಗಳಿಗೆ ಗೌರವ ನೀಡದ ಅಲ್ಲಿನ ಸಬ್ ಇನ್ಸ್ಪೆಕ್ಟರ್ ನಡವಳಿಕೆ ಖಂಡನೀಯ ಎಂದು ಹೇಳಿದರು.</p>.<p>ಮುಖಂಡರಾದ ಕುಮಾರ್ ಜಯಕಾಂತ್, ಮತ್ತೀಕೆರೆ ಹನುಮಂತು, ವೆಂಕಟೇಶ್, ನೀಲಸಂದ್ರ ಸಿದ್ಧರಾಮು, ಕೋಡಂಬಳ್ಳಿ ಹನುಮಂತು, ಬಿ.ವಿ.ಎಸ್. ಕುಮಾರ್, ಚಿಕ್ಕೇನಹಳ್ಳಿ ಸ್ವಾಮಿ, ಶಿವಪ್ಪ, ಕೋಟೆ ಶ್ರೀನಿವಾಸ್, ಶ್ರೀನಿವಾಸ್ ಮೂರ್ತಿ, ಸುರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>