ರಮೇಶ್ ಗೌಡ ಮಾತನಾಡಿ, ಭಗವಾನ್ ಅವರು ತಮ್ಮ ಘನತೆಗೆ ತಕ್ಕ ಹೇಳಿಕೆ ನೀಡಿಲ್ಲ. ಅವರು ಈ ಹಿಂದೆ ಹಿಂದೂ ಧರ್ಮವನ್ನು ಅವಹೇಳನ ಮಾಡಿದ್ದರು. ಶ್ರೀರಾಮನ ಕುರಿತಾಗಿ ವ್ಯಂಗ್ಯ ಮಾಡಿದ್ದರು. ಇದೀಗ ಒಕ್ಕಲಿಗರು ಸಂಸ್ಕೃತಿ ಹೀನರು ಎಂದು ಕುವೆಂಪು ಹೇಳಿದ್ದರು ಎಂದು ಹೇಳಿ ತಮ್ಮ ಒಕ್ಕಲಿಗರ ವಿರೋಧಿತನವನ್ನು ತೋರಿಸಿ, ಇದನ್ನು ಕುವೆಂಪು ಹೇಳಿದ್ದರು ಎಂದು ಬಿಂಬಿಸಿಕೊಂಡಿದ್ದಾರೆ. ಒಕ್ಕಲಿಗರು ವಿಧಾನ ಸೌಧ, ವಿಕಾಸ ಸೌಧ, ಬೆಳಗಾವಿಯ ಸುವರ್ಣ ಸೌಧ, ಹಲವಾರು ಅಣೆಕಟ್ಟು, ಬೃಹತ್ ರಸ್ತೆ ನಿರ್ಮಾಣ ಮಾಡಿದ್ದಾರೆ. ಸರ್ವರಿಗೂ ಸಮ್ಮತವಾಗುವ ಆಡಳಿತ ನೀಡಿದ್ದಾರೆ. ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿರುವ ಭಗವಾನ್ ಅವರಿಗೆ ಮುಂದೆ ಮಸಿ ಬಳಿಯುವ ಕಾರ್ಯಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.