<p><strong>ಹಾರೋಹಳ್ಳಿ</strong>: ದೇವರಕಗ್ಗಲಹಳ್ಳಿಯಲ್ಲಿ ನಾಗರಿಕರ ಸೌಕರ್ಯಕ್ಕಾಗಿ ಮೀಸಲಾಗಿ ಇಟ್ಟಿದ್ದ ನಿವೇಶನಗಳನ್ನು (ಸಿ.ಎ ಸೈಟ್) ಗುರುವಾರ ಭಾರಿ ಪ್ರತಿರೋಧದ ಮಧ್ಯೆ ತೆರವುಗೊಳಿಸಲಾಯಿತು. </p>.<p>ನಿವೇಶನಗಳನ್ನು ಎರಡು ಕುಟುಂಬಗಳು ಅಕ್ರಮವಾಗಿ ಸ್ವಾಧಿನ ಪಡಿಸಿಕೊಂಡಿದ್ದವು. ತೆರವು ಕಾರ್ಯಾಚರಣೆ ವೇಳೆ ಎರಡೂ ಕುಟುಂಬದವರು ತೀವ್ರ ಪ್ರತಿರೋಧ ಒಡ್ಡಿದ ಕಾರಣ ಹೈಡ್ರಾಮಾ ನಡೆಯಿತು.</p>.<p>ಪೊಲೀಸರು ಹಾಗೂ ಅಧಿಕಾರಿಗಳು ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸದಂತೆ ಕುಟುಂಬ ಸದಸ್ಯರ ಮನವೊಲಿಸಲು ಮುಂದಾದಾಗ ಮಾತಿನ ಚಕಮಕಿ ನಡೆಯಿತು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಕಾಲಾವಕಾಶ ನೀಡಿ ಮರಳಿದರು. </p>.<p>ಚೀಲೂರು ಗ್ರಾ.ಪಂ ಅಧ್ಯಕ್ಷೆ ಸುಧಾ ನಾಗೇಶ್, ಪಿಡಿಒ ಮಹದೇವ್, ಸದಸ್ಯರಾದ ರವಿ ಕುಮಾರ್,ಕೃಷ್ಣಮೂರ್ತಿ ಹಾಜರಿದ್ದರು.</p>.<div><blockquote>ಸಾರ್ವಜನಿಕರ ಸೌಲಭ್ಯಕ್ಕಾಗಿ ಮೀಸಲಿಟ್ಟಿದ್ದ ನಿವೇಶನ ಒತ್ತುವರಿ ಸಂಬಂಧ ಈಗಾಗಲೇ ಒತ್ತುವರಿದಾರರಿಗೆ ಎರಡು ಬಾರಿ ನೊಟೀಸ್ ನೀಡಲಾಗಿತ್ತು. ತೆರವಿಗೆ ಬಂದಾಗ ಹೈಡ್ರಾಮ ನಡೆಸಿದ್ದಾರೆ. ಒಂದಷ್ಟು ದಿನ ಕಾಲಾವಕಾಶ ಕೇಳಿದ್ದಾರೆ. ಯಾರಿಗೂ ತೊಂದರೆಯಾಗದಂತೆ ಒತ್ತುವರಿ ತೆರವುಗೊಳಿಸಲಾಗುವುದು </blockquote><span class="attribution">-ಮಹದೇವ್ ಪಿಡಿಒ ಚೀಲೂರು ಗ್ರಾ.ಪಂ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ</strong>: ದೇವರಕಗ್ಗಲಹಳ್ಳಿಯಲ್ಲಿ ನಾಗರಿಕರ ಸೌಕರ್ಯಕ್ಕಾಗಿ ಮೀಸಲಾಗಿ ಇಟ್ಟಿದ್ದ ನಿವೇಶನಗಳನ್ನು (ಸಿ.ಎ ಸೈಟ್) ಗುರುವಾರ ಭಾರಿ ಪ್ರತಿರೋಧದ ಮಧ್ಯೆ ತೆರವುಗೊಳಿಸಲಾಯಿತು. </p>.<p>ನಿವೇಶನಗಳನ್ನು ಎರಡು ಕುಟುಂಬಗಳು ಅಕ್ರಮವಾಗಿ ಸ್ವಾಧಿನ ಪಡಿಸಿಕೊಂಡಿದ್ದವು. ತೆರವು ಕಾರ್ಯಾಚರಣೆ ವೇಳೆ ಎರಡೂ ಕುಟುಂಬದವರು ತೀವ್ರ ಪ್ರತಿರೋಧ ಒಡ್ಡಿದ ಕಾರಣ ಹೈಡ್ರಾಮಾ ನಡೆಯಿತು.</p>.<p>ಪೊಲೀಸರು ಹಾಗೂ ಅಧಿಕಾರಿಗಳು ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸದಂತೆ ಕುಟುಂಬ ಸದಸ್ಯರ ಮನವೊಲಿಸಲು ಮುಂದಾದಾಗ ಮಾತಿನ ಚಕಮಕಿ ನಡೆಯಿತು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಕಾಲಾವಕಾಶ ನೀಡಿ ಮರಳಿದರು. </p>.<p>ಚೀಲೂರು ಗ್ರಾ.ಪಂ ಅಧ್ಯಕ್ಷೆ ಸುಧಾ ನಾಗೇಶ್, ಪಿಡಿಒ ಮಹದೇವ್, ಸದಸ್ಯರಾದ ರವಿ ಕುಮಾರ್,ಕೃಷ್ಣಮೂರ್ತಿ ಹಾಜರಿದ್ದರು.</p>.<div><blockquote>ಸಾರ್ವಜನಿಕರ ಸೌಲಭ್ಯಕ್ಕಾಗಿ ಮೀಸಲಿಟ್ಟಿದ್ದ ನಿವೇಶನ ಒತ್ತುವರಿ ಸಂಬಂಧ ಈಗಾಗಲೇ ಒತ್ತುವರಿದಾರರಿಗೆ ಎರಡು ಬಾರಿ ನೊಟೀಸ್ ನೀಡಲಾಗಿತ್ತು. ತೆರವಿಗೆ ಬಂದಾಗ ಹೈಡ್ರಾಮ ನಡೆಸಿದ್ದಾರೆ. ಒಂದಷ್ಟು ದಿನ ಕಾಲಾವಕಾಶ ಕೇಳಿದ್ದಾರೆ. ಯಾರಿಗೂ ತೊಂದರೆಯಾಗದಂತೆ ಒತ್ತುವರಿ ತೆರವುಗೊಳಿಸಲಾಗುವುದು </blockquote><span class="attribution">-ಮಹದೇವ್ ಪಿಡಿಒ ಚೀಲೂರು ಗ್ರಾ.ಪಂ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>