<p><strong>ಚನ್ನಪಟ್ಟಣ: </strong>ತಾಲ್ಲೂಕಿನ ಪಟ್ಲು ಗ್ರಾಮದ ಮೂಲಕ ಕೋಮನಹಳ್ಳಿ, ದೇವರಹೊಸಹಳ್ಳಿಗೆ ಸಾಗುವ ರಸ್ತೆಯನ್ನು ಮುಚ್ಚಿ ರಸ್ತೆ ಮಧ್ಯೆಯೇ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸಲಾಗುತ್ತಿದೆ. ಇಲ್ಲಿ ಅಂಡರ್ ಪಾಸ್ ರಸ್ತೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಈ ಭಾಗದ ಗ್ರಾಮಸ್ಥರು ಬುಧವಾರ ಕಾಮಗಾರಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.</p>.<p>ನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತವೆ. ಆದರೆ ಇದೀಗ ಈ ರಸ್ತೆಯನ್ನು ಮುಚ್ಚಿ ಹೆದ್ದಾರಿ ಕಾಮಗಾರಿ ನಡೆಸಲಾಗುತ್ತಿದೆ. ಪಟ್ಲು ಭಾಗದಿಂದ ರಾಮನಗರ, ಬೆಂಗಳೂರು ಕಡೆಗೆ ಹೋಗಲು ಈ ರಸ್ತೆ ಬಳಕೆಯಾಗುತ್ತಿದೆ. ರಸ್ತೆ ಇದ್ದರೂ ಯಾವುದೇ ಮುಂದಾಲೋಚನೆ ಇಲ್ಲದೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ರೈತರ ಕೃಷಿಭೂಮಿ ಈ ಭಾಗದಲ್ಲಿ ಹೆಚ್ಚಾಗಿದೆ. ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ನಡೆಸಲು ರಸ್ತೆಯನ್ನು ಹೆಚ್ಚಾಗಿ ಬಳಸುತ್ತಾರೆ. ಈ ರಸ್ತೆಯನ್ನು ಮುಚ್ಚಿದರೆ ನಾಲ್ಕೈದು ಕಿ.ಮೀ. ಬಳಸಿ ಹೋಗಬೇಕಾಗುತ್ತದೆ. ಅಂಡರ್ ಪಾಸ್ ರಸ್ತೆ ನಿರ್ಮಾಣ ಮಾಡಬೇಕು. ಅಂಡರ್ ಪಾಸ್ ರಸ್ತೆ ಸೇರ್ಪಡೆ ಮಾಡಿ ನಂತರ ಕಾಮಗಾರಿ ಮುಂದುವರೆಸಬೇಕು’ ಎಂದು ದೇವರಹೊಸಹಳ್ಳಿ ಚೇತನ್ ಒತ್ತಾಯಿಸಿದರು.</p>.<p>ವಿಷಯ ತಿಳಿದು ಸ್ಥಳಕ್ಕೆ ಬಂದ ಹೆದ್ದಾರಿ ಕಾಮಗಾರಿ ಸಂಸ್ಥೆಯ ವ್ಯವಸ್ಥಾಪಕರು, ಈ ಬಗ್ಗೆ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು. ರಸ್ತೆ ನಿರ್ಮಾಣ ಮಾಡದಿದ್ದರೆ ಶೀಘ್ರದಲ್ಲಿಯೇ ಭಾರಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿ ಪ್ರತಿಭಟನೆ ವಾಪಾಸ್ ಪಡೆದರು.</p>.<p>ಗಿರೀಶ್, ರಾಂಪುರ ರಾಜಣ್ಣ, ಸ್ವಾಮಿ, ಕೋಮನಹಳ್ಳಿ ಜಯರಾಜ್, ಗುರು, ಪಟ್ಲು ನಾಗೇಂದ್ರ, ಕಾಂತರಾಜು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ: </strong>ತಾಲ್ಲೂಕಿನ ಪಟ್ಲು ಗ್ರಾಮದ ಮೂಲಕ ಕೋಮನಹಳ್ಳಿ, ದೇವರಹೊಸಹಳ್ಳಿಗೆ ಸಾಗುವ ರಸ್ತೆಯನ್ನು ಮುಚ್ಚಿ ರಸ್ತೆ ಮಧ್ಯೆಯೇ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸಲಾಗುತ್ತಿದೆ. ಇಲ್ಲಿ ಅಂಡರ್ ಪಾಸ್ ರಸ್ತೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಈ ಭಾಗದ ಗ್ರಾಮಸ್ಥರು ಬುಧವಾರ ಕಾಮಗಾರಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.</p>.<p>ನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತವೆ. ಆದರೆ ಇದೀಗ ಈ ರಸ್ತೆಯನ್ನು ಮುಚ್ಚಿ ಹೆದ್ದಾರಿ ಕಾಮಗಾರಿ ನಡೆಸಲಾಗುತ್ತಿದೆ. ಪಟ್ಲು ಭಾಗದಿಂದ ರಾಮನಗರ, ಬೆಂಗಳೂರು ಕಡೆಗೆ ಹೋಗಲು ಈ ರಸ್ತೆ ಬಳಕೆಯಾಗುತ್ತಿದೆ. ರಸ್ತೆ ಇದ್ದರೂ ಯಾವುದೇ ಮುಂದಾಲೋಚನೆ ಇಲ್ಲದೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ರೈತರ ಕೃಷಿಭೂಮಿ ಈ ಭಾಗದಲ್ಲಿ ಹೆಚ್ಚಾಗಿದೆ. ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ನಡೆಸಲು ರಸ್ತೆಯನ್ನು ಹೆಚ್ಚಾಗಿ ಬಳಸುತ್ತಾರೆ. ಈ ರಸ್ತೆಯನ್ನು ಮುಚ್ಚಿದರೆ ನಾಲ್ಕೈದು ಕಿ.ಮೀ. ಬಳಸಿ ಹೋಗಬೇಕಾಗುತ್ತದೆ. ಅಂಡರ್ ಪಾಸ್ ರಸ್ತೆ ನಿರ್ಮಾಣ ಮಾಡಬೇಕು. ಅಂಡರ್ ಪಾಸ್ ರಸ್ತೆ ಸೇರ್ಪಡೆ ಮಾಡಿ ನಂತರ ಕಾಮಗಾರಿ ಮುಂದುವರೆಸಬೇಕು’ ಎಂದು ದೇವರಹೊಸಹಳ್ಳಿ ಚೇತನ್ ಒತ್ತಾಯಿಸಿದರು.</p>.<p>ವಿಷಯ ತಿಳಿದು ಸ್ಥಳಕ್ಕೆ ಬಂದ ಹೆದ್ದಾರಿ ಕಾಮಗಾರಿ ಸಂಸ್ಥೆಯ ವ್ಯವಸ್ಥಾಪಕರು, ಈ ಬಗ್ಗೆ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು. ರಸ್ತೆ ನಿರ್ಮಾಣ ಮಾಡದಿದ್ದರೆ ಶೀಘ್ರದಲ್ಲಿಯೇ ಭಾರಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿ ಪ್ರತಿಭಟನೆ ವಾಪಾಸ್ ಪಡೆದರು.</p>.<p>ಗಿರೀಶ್, ರಾಂಪುರ ರಾಜಣ್ಣ, ಸ್ವಾಮಿ, ಕೋಮನಹಳ್ಳಿ ಜಯರಾಜ್, ಗುರು, ಪಟ್ಲು ನಾಗೇಂದ್ರ, ಕಾಂತರಾಜು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>