<p><strong>ಕನಕಪುರ:</strong> ವಿದ್ಯಾರ್ಥಿಗಳ ಜೀವನದಲ್ಲಿ ಪಿಯು ಅತ್ಯಂತ ನಿರ್ಣಾಯಕ ಘಟ್ಟವಾಗಿದ್ದು ಕಠಿಣ ತಪಸ್ಸು ಮತ್ತು ಏಕಾಗ್ರತೆಯಿಂದ ಉತ್ತಮ ಸಾಧನೆ ಮಾಡಬೇಕು ಎಂದು ಅಬಕಾರಿ ಇಲಾಖೆ ಅಧಿಕ್ಷಕ ಮೋಹನ್ ತಿಳಿಸಿದರು.</p>.<p>ಇಲ್ಲಿನ ರೂರಲ್ ಎಜುಕೇಶನ್ ಸೊಸೈಟಿಯ ದೂಂತೂರು ಮಾರೇಗೌಡ ಸಭಾಂಗಣದಲ್ಲಿ ಶನಿವಾರ ನಡೆದ ರೂರಲ್ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.</p>.<p>ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಕೋರ್ಸಿನ ಬಗ್ಗೆ ಕೀಳರಿಮೆ ಬೇಡ. ಆತ್ಮವಿಶ್ವಾಸ ಬೆಳೆಸಿಕೊಳ್ಳಿ. ಎಂಜಿನಿಯರ್, ಡಾಕ್ಟರ್ ಆದರೆ ಮಾತ್ರ ಭವಿಷ್ಯ ಚೆನ್ನಾಗಿರುತ್ತದೆ ಎಂಬುದು ಸುಳ್ಳು. ಕಠಿಣ ಪರಿಶ್ರಮ, ಅಚಲವಾದ ಶ್ರದ್ಧೆ ಮತ್ತು ನಿರ್ದಿಷ್ಟ ಗುರಿಯಿಂದ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಕಿವಿಮಾತು ಹೇಳಿದರು.</p>.<p>ಸ್ಪರ್ಧಾತ್ಮಕ ಪರೀಕ್ಷೆಗಳು ಜೀವನದ ಗುರಿಯಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕಂಡಿರುವವರು ಬಹುತೇಕರು ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಆಗಿದ್ದಾರೆ. </p>.<p>ಶಿಕ್ಷಣದ ಜೊತೆಗೆ ಅಪ್ಪ, ಅಮ್ಮ ಹಾಗೂ ಗುರು, ಹಿರಿಯರನ್ನು ಗೌರವದಿಂದ ಕಾಣುವ ಸಂಸ್ಕಾರ ಮುಖ್ಯ ಎಂದು ಸಂಸ್ಥೆಯ ಅಧ್ಯಕ್ಷ ಎಚ್.ಕೆ.ಶ್ರೀಕಂಠ ಹೇಳಿದರು.</p>.<p>ಸಂಸ್ಥೆಯ ಉಪಾಧ್ಯಕ್ಷೆ ಪ್ರೊ.ರಂಗನಾಯಕಮ್ಮ, ಕಾರ್ಯದರ್ಶಿ ಪುಟ್ಟಸ್ವಾಮಿ, ಖಜಾಂಚಿ ಎಸ್.ಸಿ.ಮಂಜುನಾಥ್, ನಿರ್ದೇಶಕ ಕೆ.ಬಿ.ನಾಗರಾಜು, ಕೃಷಿ ಕಾಲೇಜಿನ ಡೀನ್ ಡಾ.ಟಿ.ಕೆ. ಸಿದ್ದರಾಮೇಗೌಡ, ಪ್ರೊ.ಡಾ.ಟಿ.ಬಿ.ಪುಟ್ಟರಾಜು, ಶಿಕ್ಷಣ ಇಲಾಖೆಯ ತುಕಾರಾಂ,ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರುದ್ರೇಶ್, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಬಿ.ಕೆ.ಕವಿತ, ಉಷಾರಾಣಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ವಿದ್ಯಾರ್ಥಿಗಳ ಜೀವನದಲ್ಲಿ ಪಿಯು ಅತ್ಯಂತ ನಿರ್ಣಾಯಕ ಘಟ್ಟವಾಗಿದ್ದು ಕಠಿಣ ತಪಸ್ಸು ಮತ್ತು ಏಕಾಗ್ರತೆಯಿಂದ ಉತ್ತಮ ಸಾಧನೆ ಮಾಡಬೇಕು ಎಂದು ಅಬಕಾರಿ ಇಲಾಖೆ ಅಧಿಕ್ಷಕ ಮೋಹನ್ ತಿಳಿಸಿದರು.</p>.<p>ಇಲ್ಲಿನ ರೂರಲ್ ಎಜುಕೇಶನ್ ಸೊಸೈಟಿಯ ದೂಂತೂರು ಮಾರೇಗೌಡ ಸಭಾಂಗಣದಲ್ಲಿ ಶನಿವಾರ ನಡೆದ ರೂರಲ್ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.</p>.<p>ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಕೋರ್ಸಿನ ಬಗ್ಗೆ ಕೀಳರಿಮೆ ಬೇಡ. ಆತ್ಮವಿಶ್ವಾಸ ಬೆಳೆಸಿಕೊಳ್ಳಿ. ಎಂಜಿನಿಯರ್, ಡಾಕ್ಟರ್ ಆದರೆ ಮಾತ್ರ ಭವಿಷ್ಯ ಚೆನ್ನಾಗಿರುತ್ತದೆ ಎಂಬುದು ಸುಳ್ಳು. ಕಠಿಣ ಪರಿಶ್ರಮ, ಅಚಲವಾದ ಶ್ರದ್ಧೆ ಮತ್ತು ನಿರ್ದಿಷ್ಟ ಗುರಿಯಿಂದ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಕಿವಿಮಾತು ಹೇಳಿದರು.</p>.<p>ಸ್ಪರ್ಧಾತ್ಮಕ ಪರೀಕ್ಷೆಗಳು ಜೀವನದ ಗುರಿಯಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕಂಡಿರುವವರು ಬಹುತೇಕರು ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಆಗಿದ್ದಾರೆ. </p>.<p>ಶಿಕ್ಷಣದ ಜೊತೆಗೆ ಅಪ್ಪ, ಅಮ್ಮ ಹಾಗೂ ಗುರು, ಹಿರಿಯರನ್ನು ಗೌರವದಿಂದ ಕಾಣುವ ಸಂಸ್ಕಾರ ಮುಖ್ಯ ಎಂದು ಸಂಸ್ಥೆಯ ಅಧ್ಯಕ್ಷ ಎಚ್.ಕೆ.ಶ್ರೀಕಂಠ ಹೇಳಿದರು.</p>.<p>ಸಂಸ್ಥೆಯ ಉಪಾಧ್ಯಕ್ಷೆ ಪ್ರೊ.ರಂಗನಾಯಕಮ್ಮ, ಕಾರ್ಯದರ್ಶಿ ಪುಟ್ಟಸ್ವಾಮಿ, ಖಜಾಂಚಿ ಎಸ್.ಸಿ.ಮಂಜುನಾಥ್, ನಿರ್ದೇಶಕ ಕೆ.ಬಿ.ನಾಗರಾಜು, ಕೃಷಿ ಕಾಲೇಜಿನ ಡೀನ್ ಡಾ.ಟಿ.ಕೆ. ಸಿದ್ದರಾಮೇಗೌಡ, ಪ್ರೊ.ಡಾ.ಟಿ.ಬಿ.ಪುಟ್ಟರಾಜು, ಶಿಕ್ಷಣ ಇಲಾಖೆಯ ತುಕಾರಾಂ,ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರುದ್ರೇಶ್, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಬಿ.ಕೆ.ಕವಿತ, ಉಷಾರಾಣಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>