<p><strong>ರಾಮನಗರ:</strong> ಪೊಲೀಸರ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಎಡಿಜಿಪಿ ಔರದ್ಕರ್ ಸಮಿತಿ ವರದಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇಲ್ಲಿನ ಐಜೂರು ವೃತ್ತದಲ್ಲಿ ಸೋಮವಾರ ಮಾನವ ಸರಪಳಿ ನಿರ್ಮಿಸಿ, ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದವು.</p>.<p>ಎಡಿಜಿಪಿ ಔರದ್ಕರ್ ಸಮಿತಿಯ ವರದಿಯ ಪ್ರಕಾರ ಶೇ 30ರಿಂದ 35ರಷ್ಟು ವೇತನ ಹೆಚ್ಚಳ ಸೇರಿದಂತೆ ಅನೇಕ ಮಹತ್ವದ ವಿಚಾರಗಳನ್ನು ಶಿಫಾರಸ್ಸು ಮಾಡಲಾಗಿದೆ. ಈ ವರದಿ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಗೃಹ ಸಚಿವರು ಸರ್ಕಾರದ ಬೊಕ್ಕಸದ ಮೇಲೆ ಸುಮಾರು ₨600 ಕೋಟಿ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ ಎಂದು ತಿಳಿಸಿದ್ದಾರೆ. ಲಕ್ಷ ಕೋಟಿಗಿಂತ ಹೆಚ್ಚು ವಾರ್ಷಿಕ ಬಜೆಟ್ ಹೊಂದಿರುವ ರಾಜ್ಯ ಸರ್ಕಾರಕ್ಕೆ ಈ ಮೊತ್ತ ದೊಡ್ಡದೇನಲ್ಲ. ಆದ್ದರಿಂದ ಸರ್ಕಾರ ಪೊಲೀಸರ ಕಲ್ಯಾಣಕ್ಕೆ ಔರದ್ಕರ್ ವರದಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ ಎಂದರೆ ಅದಕ್ಕೆ ಪೊಲೀಸರ ಶ್ರಮ ಕಾರಣವಾಗಿದೆ. ಆದರೆ ಅವರಿಗೆ ಉದ್ಯೋಗದಲ್ಲಿ ಒತ್ತಡ, ಕಿರುಕುಳ ಸಾಮಾನ್ಯವಾಗಿದೆ. ವೇತನ ಕಡಿಮೆಯಾಗಿರುವುದರಿಂದ ಭ್ರಷ್ಟಾಚಾರ ಈ ಇಲಾಖೆಯಲ್ಲಿದೆ ಎಂಬ ಆರೋಪವಿದೆ. ಯುವಕರ ಕೊನೆಯ ಆಯ್ಕೆ ಈ ಉದ್ಯೋಗವಾಗಿದೆ ಎಂದರು.</p>.<p>ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿ, ಪೊಲೀಸರ ಕರ್ತವ್ಯ ಒತ್ತಡವನ್ನು ತಗ್ಗಿಸಬೇಕು. ಮಾನವಹಕ್ಕು, ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳು ಸೇರಿದಂತೆ ಕಾನೂನು ಪಾಲನೆ ನೆಲೆಯಲ್ಲಿ ಪೊಲೀಸರನ್ನು ಕಾಲಕಾಲಕ್ಕೆ ಪುನಶ್ಚೇತನ ಗೊಳಿಸಲು ನಿರಂತರ ಕಾರ್ಯಗಾರ ಸಂಘಟಿಸಬೇಕು ಎಂದು ತಿಳಿಸಿದರು.</p>.<p>ಮಾನವಹಕ್ಕು ರಕ್ಷಣೆ ಸಮಿತಿಯ ಅಧ್ಯಕ್ಷ ಚಿಕ್ಕಣ್ಣ, ನವೀನ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತುಂಬೇನಹಳ್ಳಿ ಶಿವಕುಮಾರ್, ಮೆಳೆಹಳ್ಳಿ ಕುಮಾರ್, ದಲಿತ ಸೇನೆಯ ಸಂತೋಷ್, ನರೇಶ್, ನಾರಾಯಣ, ಪುಟ್ಟರಾಜು, ಚಾಮೇಗೌಡ, ರಾಮಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಪೊಲೀಸರ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಎಡಿಜಿಪಿ ಔರದ್ಕರ್ ಸಮಿತಿ ವರದಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇಲ್ಲಿನ ಐಜೂರು ವೃತ್ತದಲ್ಲಿ ಸೋಮವಾರ ಮಾನವ ಸರಪಳಿ ನಿರ್ಮಿಸಿ, ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದವು.</p>.<p>ಎಡಿಜಿಪಿ ಔರದ್ಕರ್ ಸಮಿತಿಯ ವರದಿಯ ಪ್ರಕಾರ ಶೇ 30ರಿಂದ 35ರಷ್ಟು ವೇತನ ಹೆಚ್ಚಳ ಸೇರಿದಂತೆ ಅನೇಕ ಮಹತ್ವದ ವಿಚಾರಗಳನ್ನು ಶಿಫಾರಸ್ಸು ಮಾಡಲಾಗಿದೆ. ಈ ವರದಿ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಗೃಹ ಸಚಿವರು ಸರ್ಕಾರದ ಬೊಕ್ಕಸದ ಮೇಲೆ ಸುಮಾರು ₨600 ಕೋಟಿ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ ಎಂದು ತಿಳಿಸಿದ್ದಾರೆ. ಲಕ್ಷ ಕೋಟಿಗಿಂತ ಹೆಚ್ಚು ವಾರ್ಷಿಕ ಬಜೆಟ್ ಹೊಂದಿರುವ ರಾಜ್ಯ ಸರ್ಕಾರಕ್ಕೆ ಈ ಮೊತ್ತ ದೊಡ್ಡದೇನಲ್ಲ. ಆದ್ದರಿಂದ ಸರ್ಕಾರ ಪೊಲೀಸರ ಕಲ್ಯಾಣಕ್ಕೆ ಔರದ್ಕರ್ ವರದಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ ಎಂದರೆ ಅದಕ್ಕೆ ಪೊಲೀಸರ ಶ್ರಮ ಕಾರಣವಾಗಿದೆ. ಆದರೆ ಅವರಿಗೆ ಉದ್ಯೋಗದಲ್ಲಿ ಒತ್ತಡ, ಕಿರುಕುಳ ಸಾಮಾನ್ಯವಾಗಿದೆ. ವೇತನ ಕಡಿಮೆಯಾಗಿರುವುದರಿಂದ ಭ್ರಷ್ಟಾಚಾರ ಈ ಇಲಾಖೆಯಲ್ಲಿದೆ ಎಂಬ ಆರೋಪವಿದೆ. ಯುವಕರ ಕೊನೆಯ ಆಯ್ಕೆ ಈ ಉದ್ಯೋಗವಾಗಿದೆ ಎಂದರು.</p>.<p>ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿ, ಪೊಲೀಸರ ಕರ್ತವ್ಯ ಒತ್ತಡವನ್ನು ತಗ್ಗಿಸಬೇಕು. ಮಾನವಹಕ್ಕು, ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳು ಸೇರಿದಂತೆ ಕಾನೂನು ಪಾಲನೆ ನೆಲೆಯಲ್ಲಿ ಪೊಲೀಸರನ್ನು ಕಾಲಕಾಲಕ್ಕೆ ಪುನಶ್ಚೇತನ ಗೊಳಿಸಲು ನಿರಂತರ ಕಾರ್ಯಗಾರ ಸಂಘಟಿಸಬೇಕು ಎಂದು ತಿಳಿಸಿದರು.</p>.<p>ಮಾನವಹಕ್ಕು ರಕ್ಷಣೆ ಸಮಿತಿಯ ಅಧ್ಯಕ್ಷ ಚಿಕ್ಕಣ್ಣ, ನವೀನ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತುಂಬೇನಹಳ್ಳಿ ಶಿವಕುಮಾರ್, ಮೆಳೆಹಳ್ಳಿ ಕುಮಾರ್, ದಲಿತ ಸೇನೆಯ ಸಂತೋಷ್, ನರೇಶ್, ನಾರಾಯಣ, ಪುಟ್ಟರಾಜು, ಚಾಮೇಗೌಡ, ರಾಮಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>