ಚನ್ನಪಟ್ಟಣ: ದೇಶದ ಪ್ರಥಮ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ಆದರ್ಶಗಳನ್ನು ಭಾರತೀಯರು ಪಾಲಿಸಬೇಕು ಎಂದು ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ವಿ. ವೆಂಕಟೇಶ್ ಕರೆ ನೀಡಿದರು.
ಸಾವಿತ್ರಿ ಬಾಯಿ ಫುಲೆ ಅವರ ಜನ್ಮ ದಿನಾಚರಣೆ ಅಂಗವಾಗಿ ಕಾಲೇಜಿನಲ್ಲಿ ಶುಕ್ರವಾರ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡು ನಂತರ ಮಾತನಾಡಿದ ಅವರು, ಆತ್ಮಸ್ಥೈರ್ಯ ಇದ್ದಲ್ಲಿ ಸಮಸ್ಯೆಗಳನ್ನು ಮೆಟ್ಟಿನಿಂತು ಗೆಲ್ಲಲು ಸಾಧ್ಯ ಎಂಬುದನ್ನು ಅವರು ತೋರಿಸಿ ಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು.
ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮಧುಸೂದನಾಚಾರ್ಯ ಜೋಷಿ, ಇತಿಹಾಸ ವಿಭಾಗದ ಡಾ.ಅಣ್ಣಯ್ಯ ತೈಲೂರು, ಗ್ರಂಥಪಾಲಕ ವೆಂಕಟೇಶಯ್ಯ, ಕ್ರೀಡಾ ವಿಭಾಗದ ಮುಖ್ಯಸ್ಥ ನಂಜುಂಡ ಭಾಗವಹಿಸಿದ್ದರು.