<p><strong>ಕುದೂರು</strong>: ಪುನೀತ್ ರಾಜ್ಕುಮಾರ್ ಅವರ 50ನೇ ಜನ್ಮದಿನಾಚರಣೆ ಅಂಗವಾಗಿ ಕುದೂರು ಬಸ್ ನಿಲ್ದಾಣದ ವೃತ್ತಕ್ಕೆ ಡಾ.ಪುನೀತ್ ರಾಜ್ಕುಮಾರ್ ವೃತ್ತ ಎಂದು ನಾಮಕರಣ ಮಾಡಲಾಯಿತು.</p>.<p>ಈ ವೇಳೆ ಕುದೂರು ಗ್ರಾ.ಪಂ.ಸದಸ್ಯ ಕೆ.ಬಿ.ಬಾಲರಾಜು ಮಾತನಾಡಿ, ಅಪ್ಪು ಇಂದಿಗೂ ಅಜರಾಮರ. ಕಡಿಮೆ ವಯಸ್ಸಿನಲ್ಲಿ ಹೆಚ್ಚು ಸಾಮಾಜಿಕ ಸೇವೆ ಸಲ್ಲಿಸುವ ಮೂಲಕ ಯುವಕರಿಗೆ ಮಾದರಿಯಾಗಿದ್ದಾರೆ ಎಂದರು.</p>.<p>ಪುನೀತ್ ರಾಜ್ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ದೊಡ್ಡ ಕಾಣಿಕೆ ನೀಡಿದ್ದಾರೆ. ಅವರು ಚಿತ್ರರಂಗದಲ್ಲಿ ಮಾತ್ರವಲ್ಲದೆ ನಿಜ ಜೀವನದಲ್ಲೂ ನಾಯಕರಾಗಿದ್ದಾರೆ ಎಂದು ನೆನೆದರು.</p>.<p>ಡಾ.ರಾಜ್ಕುಮಾರ್ ಮತ್ತು ಡಾ.ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗದ ಅಧ್ಯಕ್ಷ ನಾಗೇಶ್ ಕೆ.ಎಚ್ ಮಾತನಾಡಿ, ಚಿಕ್ಕ ವಯಸ್ಸಿನಲ್ಲಿಯೇ ಸಮಾಜಮುಖಿ ಕಾರ್ಯಗಳನ್ನು ಮಾಡುವ ಜನಮಾನಸದಲ್ಲಿ ಉಳಿದಿದ್ದಾರೆ. ಅವರ ಆದರ್ಶಗಳು ಎಲ್ಲರೂ ಸ್ಫೂರ್ತಿದಾಯಕ. ಹಾಗಾಗಿ ಅವರ ಜನ್ಮದಿನಾಚರಣೆಯನ್ನು ಎಲ್ಲರೂ ಆಚರಿಸಬೇಕು ಎಂದು ತಿಳಿಸಿದರು.</p>.<p>ಹುಟ್ಟ ಹಬ್ಬದ ಪ್ರಯುಕ್ತ ಸಿಹಿ ವಿತರಿಸಲಾಯಿತು. ಜತೆಗೆ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.</p>.<p>ಸುಹೇಲ್, ಟಿ.ಹನುಮಂತರಾಯಪ್ಪ, ರೇಖಾಸೋಮೇಶ್, ರಮ್ಯಜ್ಯೋತಿ, ಗೀರೀಶ್, ಮುನಿರಾಜು, ಜಗದೀಶ್, ಸುರೇಶ್, ಚಂದ್ರಶೇಖರ್, ಶಂಕರ್, ಕೇಶವಮೂರ್ತಿ, ಗೋವಿಂದರಾಜು, ಬಾಬು, ಬಾದೇಗೌಡ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುದೂರು</strong>: ಪುನೀತ್ ರಾಜ್ಕುಮಾರ್ ಅವರ 50ನೇ ಜನ್ಮದಿನಾಚರಣೆ ಅಂಗವಾಗಿ ಕುದೂರು ಬಸ್ ನಿಲ್ದಾಣದ ವೃತ್ತಕ್ಕೆ ಡಾ.ಪುನೀತ್ ರಾಜ್ಕುಮಾರ್ ವೃತ್ತ ಎಂದು ನಾಮಕರಣ ಮಾಡಲಾಯಿತು.</p>.<p>ಈ ವೇಳೆ ಕುದೂರು ಗ್ರಾ.ಪಂ.ಸದಸ್ಯ ಕೆ.ಬಿ.ಬಾಲರಾಜು ಮಾತನಾಡಿ, ಅಪ್ಪು ಇಂದಿಗೂ ಅಜರಾಮರ. ಕಡಿಮೆ ವಯಸ್ಸಿನಲ್ಲಿ ಹೆಚ್ಚು ಸಾಮಾಜಿಕ ಸೇವೆ ಸಲ್ಲಿಸುವ ಮೂಲಕ ಯುವಕರಿಗೆ ಮಾದರಿಯಾಗಿದ್ದಾರೆ ಎಂದರು.</p>.<p>ಪುನೀತ್ ರಾಜ್ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ದೊಡ್ಡ ಕಾಣಿಕೆ ನೀಡಿದ್ದಾರೆ. ಅವರು ಚಿತ್ರರಂಗದಲ್ಲಿ ಮಾತ್ರವಲ್ಲದೆ ನಿಜ ಜೀವನದಲ್ಲೂ ನಾಯಕರಾಗಿದ್ದಾರೆ ಎಂದು ನೆನೆದರು.</p>.<p>ಡಾ.ರಾಜ್ಕುಮಾರ್ ಮತ್ತು ಡಾ.ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗದ ಅಧ್ಯಕ್ಷ ನಾಗೇಶ್ ಕೆ.ಎಚ್ ಮಾತನಾಡಿ, ಚಿಕ್ಕ ವಯಸ್ಸಿನಲ್ಲಿಯೇ ಸಮಾಜಮುಖಿ ಕಾರ್ಯಗಳನ್ನು ಮಾಡುವ ಜನಮಾನಸದಲ್ಲಿ ಉಳಿದಿದ್ದಾರೆ. ಅವರ ಆದರ್ಶಗಳು ಎಲ್ಲರೂ ಸ್ಫೂರ್ತಿದಾಯಕ. ಹಾಗಾಗಿ ಅವರ ಜನ್ಮದಿನಾಚರಣೆಯನ್ನು ಎಲ್ಲರೂ ಆಚರಿಸಬೇಕು ಎಂದು ತಿಳಿಸಿದರು.</p>.<p>ಹುಟ್ಟ ಹಬ್ಬದ ಪ್ರಯುಕ್ತ ಸಿಹಿ ವಿತರಿಸಲಾಯಿತು. ಜತೆಗೆ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.</p>.<p>ಸುಹೇಲ್, ಟಿ.ಹನುಮಂತರಾಯಪ್ಪ, ರೇಖಾಸೋಮೇಶ್, ರಮ್ಯಜ್ಯೋತಿ, ಗೀರೀಶ್, ಮುನಿರಾಜು, ಜಗದೀಶ್, ಸುರೇಶ್, ಚಂದ್ರಶೇಖರ್, ಶಂಕರ್, ಕೇಶವಮೂರ್ತಿ, ಗೋವಿಂದರಾಜು, ಬಾಬು, ಬಾದೇಗೌಡ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>