ಮೊದಲ ದಿನದಂದು ಕೇವಲ ಬೆಂಗಳೂರಿಗೆ ಮಾತ್ರ ಬಸ್ ಸಂಚಾರದ ವ್ಯವಸ್ಥೆ ಇತ್ತು. ರಾಮನಗರದಿಂದ ಬೆಂಗಳೂರು ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಮೊದಲ ಬಸ್ ಬೆಳಗ್ಗೆ 7.50ರ ವೇಳೆಗೆ ಪ್ರಯಾಣ ಬೆಳೆಸಿದ್ದು, ಕೇವಲ 30 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಲಾಕ್ಡೌನ್ ನಂತರ ಪ್ರಥಮ ಬಾರಿಗೆ ಜಿಲ್ಲೆಯಿಂದ ಬೆಂಗಳೂರಿಗೆ ಬಸ್ ಸಂಚಾರ ಆರಂಭಿಸಿದ್ದರಿಂದ ಉದ್ಯೋಗಿಗಳು ನಿಟ್ಟುಸಿರು ಬಿಟ್ಟರು. ಬೆಳಗ್ಗೆಯೇ ಸರದಿ ಸಾಲಿನಲ್ಲಿ ನಿಂತು ಟಿಕೆಟ್ ಖರೀದಿ ಮಾಡಿ ವಾಹನ ಏರಿದರು. ಆದರೆ, ಮಧ್ಯಾಹ್ನದ ವೇಳೆಗೆ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗಿದ್ದು, ಕೆಎಸ್ಆರ್ಟಿಸಿ ಸಿಬ್ಬಂದಿ ನಿರೀಕ್ಷಿಸಿದಷ್ಟು ಪ್ರಮಾಣದಲ್ಲಿ ಜನರು ಬರಲಿಲ್ಲ.