ರಾಮನಗರ: ನಗರದಿಂದ ಮಾಗಡಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ರೇಡಿಯೇಟರ್ ಸಿಡಿದು ಬಾಲಕಿ ಕಾಲಿಗೆ ಸುಟ್ಟ ಗಾಯವಾಗಿರುವ ಘಟನೆ ಇದೇ 14ರಂದು ನಡೆದಿದೆ. ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ವೆಂಕಟಲಕ್ಷ್ಮಮ್ಮ (8) ಎಂಬ ಬಾಲಕಿ ಗಾಯಗೊಂಡಿದ್ದಾಳೆ. ಆಕೆ ತನ್ನ ತಾಯಿ ಹಾಗೂ ಸಹೋದರನ ಜೊತೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನ ನಡೆದಿದ್ದು, ಕಾಲು ಸುಟ್ಟಿದೆ. ಬಾಲಕಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೂರ್ಣ ಚಿಕಿತ್ಸಾ ವೆಚ್ಚ ಭರಿಸುವಂತೆ ಪಾಲಕರು ಮನವಿ ಮಾಡಿದ್ದಾರೆ.