ಕನಕಪುರ: ರಾಗಿ ಬೆಳೆ ಕಟಾವು ಮಾಡಿ ಒಕ್ಕಣೆ ಮಾಡಿದ್ದ ಹುಲ್ಲಿನ ಮೆದೆಗೆ ದುಷ್ಕರ್ಮಿಗಳು ಜಮೀನು ವ್ಯಾಜ್ಯದ ದ್ವೇಷದಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ತಾಲ್ಲೂಕಿನ ಸಾತನೂರು ಹೋಬಳಿ ಹೊಸಕಬ್ಬಾಳು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿಂಗಣ್ಣ ಅವರಿಗೆ ಸೇರಿದ ಹುಲ್ಲಿನ ಮೆದೆ ನಾಶವಾಗಿದೆ. ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಸುಟ್ಟು ಹಾಕಿರುವುದರಿಂದ ₹35 ಸಾವಿರ ನಷ್ಟವಾಗಿದೆ.
ಕಿಟ್ಟಪ್ಪನದೊಡ್ಡಿ ಕಾಂತರಾಜು, ಅಭಿ, ಕನ್ನೇಗೌಡ ಎಂಬುವರು ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಹಳೆ ದ್ವೇಷದಿಂದ ಹುಲ್ಲಿನ ಮೆದೆಗೆ ಬೆಂಕಿ ಹಾಕಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.