ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಅನರ್ಹ ಕಾನೂನು ಪ್ರಕ್ರಿಯೆ ಅಷ್ಟೇ: ಅಶ್ವತ್ಥನಾರಾಯಣ

Last Updated 24 ಮಾರ್ಚ್ 2023, 10:58 IST
ಅಕ್ಷರ ಗಾತ್ರ

ರಾಮನಗರ: ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಂಡಿರುವುದು ಕಾನೂನಿನ ಪ್ರಕ್ರಿಯೆ. ಅದರಲ್ಲಿ ಯಾವ ರಾಜಕೀಯವೂ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಮಾಗಡಿಯಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಬಿಜೆಪಿ ವರಿಷ್ಠರು ಯಡಿಯೂರಪ್ಪ ಅವರನ್ನು ಹೆದರಿಸಿ ಪಕ್ಷದಲ್ಲಿ ಇಟ್ಟುಕೊಂಡಿದ್ದಾರೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಅಂತಹ ಸಂಸ್ಕ್ರತಿ ನಮ್ಮ ಪಕ್ಷದಲ್ಲಿಲ್ಲ. ಹೇಳಿಕೆ ನೀಡಿದವರನ್ನೆ ಈ ಬಗ್ಗೆ ಕೇಳಬೇಕು ಎಂದರು.

ಯಡಿಯೂರಪ್ಪ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ. ಅವರ ಹಾಗೂ ಬಿ.ಎಲ್. ಸಂತೋಷ್ ನಡುವೆ ಯಾವುದೇ ಸ್ಪರ್ಧೆ ಇಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT