ರಾಮನಗರ: ಡಿ.ಕೆ. ಶಿವಕುಮಾರ್ ಸ್ವಗ್ರಾಮ ದೊಡ್ಡಾಲಹಳ್ಳಿಯ ಅವರ ನಿವಾಸದಿಂದ ಸಿಬಿಐ ಅಧಿಕಾರಿಗಳ ತಂಡ ಶೋಧ ಕಾರ್ಯ ಮುಗಿಸಿ ವಾಪಸ್ ಆಯಿತು.
ಮುಂಜಾನೆ ಮನೆಯ ಬಾಗಿಲು ಒಡೆದು ಒಳ ಪ್ರವೇಶಿಸಿದ್ದ ಅಧಿಕಾರಿಗಳ ತಂಡವು ಮಧ್ಯಾಹ್ನ 12 ಗಂಟೆಯವರೆಗೂ ಪರಿಶೀಲಿಸಿ ಕೆಲವು ದಾಖಲೆಗಳನ್ನು ವಶಕ್ಕೆ ಪಡೆಯಿತು. ಬಳಿಕ ಎರಡು ಕಾರುಗಳಲ್ಲಿ ಎಂಟು ಅಧಿಕಾರಿಗಳ ತಂಡ ಅಲ್ಲಿಂದ ಹಿಂತಿರುಗಿತು.
ಕನಕಪುರದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತವರ ಕುಟುಂಬದವರ ಮೇಲೆ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕನಕಪುರದಲ್ಲಿ ಪ್ರತಿಭಟನೆ ನಡೆಸಿದರು.
ಕನಕಪುರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬಳಿಕ ಚನ್ನಬಸಪ್ಪ ವೃತ್ತದಲ್ಲಿ ಧರಣಿ ಕುಳಿತರು. ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.