ರಾಮನಗರದಲ್ಲಿ ದಿನವಿಡೀ ಮಳೆ
ರಾಮನಗರ: ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಬುಧವಾರ ದಿನವಿಡೀ ಜಿಟಿಜಿಟಿ ಮಳೆಯಾಯಿತು.
ರಾಮನಗರದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗುಡುಗು ಸಹಿತ ವರ್ಷಧಾರೆ ಆರಂಭಗೊಂಡು ಅರ್ಧ ಗಂಟೆಗೂ ಹೆಚ್ಚು ಕಾಲ ಹನಿಯಿತು. ನಂತರದಲ್ಲೂ ಆಗಾಗ್ಗೆ ಮಳೆಯಾಗುತ್ತಲೇ ಇತ್ತು. ಜಿಲ್ಲೆಯಲ್ಲಿ ವ್ಯಾಪಕವಾಗಿ ಬಿತ್ತನೆ ಆಗಿರುವ ರಾಗಿಯು ಆಗಸ್ಟ್ ತಿಂಗಳಲ್ಲಿ ಮಳೆಯ ಕೊರತೆಯಿಂದಾಗಿ ಒಣಗುವ ಹಂತಕ್ಕೆ ತಲುಪಿತ್ತು. ಕಳೆದ ಮೂರು ದಿನದಿಂದ ಉತ್ತಮ ಮಳೆಯಾಗುತ್ತಿರುವ ಕಾರಣ ಈ ಬೆಳೆಗಳಿಗೆ ಜೀವಕಳೆ ಬಂದಿದೆ.
ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನಲ್ಲಿ 20, ಕನಕಪುರದಲ್ಲಿ 10 ಹಾಗೂ ರಾಮನಗರದಲ್ಲಿ 12 ಮಿ.ಮೀ. ಮಳೆ ಪ್ರಮಾಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.