ರಾಮನಗರದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗುಡುಗು ಸಹಿತ ವರ್ಷಧಾರೆ ಆರಂಭಗೊಂಡು ಅರ್ಧ ಗಂಟೆಗೂ ಹೆಚ್ಚು ಕಾಲ ಹನಿಯಿತು. ನಂತರದಲ್ಲೂ ಆಗಾಗ್ಗೆ ಮಳೆಯಾಗುತ್ತಲೇ ಇತ್ತು. ಜಿಲ್ಲೆಯಲ್ಲಿ ವ್ಯಾಪಕವಾಗಿ ಬಿತ್ತನೆ ಆಗಿರುವ ರಾಗಿಯು ಆಗಸ್ಟ್ ತಿಂಗಳಲ್ಲಿ ಮಳೆಯ ಕೊರತೆಯಿಂದಾಗಿ ಒಣಗುವ ಹಂತಕ್ಕೆ ತಲುಪಿತ್ತು. ಕಳೆದ ಮೂರು ದಿನದಿಂದ ಉತ್ತಮ ಮಳೆಯಾಗುತ್ತಿರುವ ಕಾರಣ ಈ ಬೆಳೆಗಳಿಗೆ ಜೀವಕಳೆ ಬಂದಿದೆ.