ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ ಜಿಲ್ಲೆಯಾದ್ಯಂತ ಉತ್ತಮ ವರ್ಷಧಾರೆ

Last Updated 3 ಅಕ್ಟೋಬರ್ 2019, 15:35 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸರಾಸರಿ 33 ಮಿಲಿಮೀಟರ್‌ನಷ್ಟು ಮಳೆ ಸುರಿದಿದ್ದು, ಕೆರೆ ಕಟ್ಟೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದೆ.

ರಾಮನಗರ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಸರಾಸರಿ 55 ಮಿ.ಮೀ. ಮಳೆ ಪ್ರಮಾಣ ದಾಖಲಾಗಿದೆ. ಕನಕಪುರದಲ್ಲಿ 33 ಮಿ.ಮೀ. ಮಾಗಡಿಯಲ್ಲಿ 28 ಹಾಗೂ ಚನ್ನಪಟ್ಟಣದಲ್ಲಿ 18 ಮಿ.ಮೀ. ಸರಾಸರಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ವೃಷಭಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಇದರಿಂದಾಗಿ ಅಕ್ಕಪಕ್ಕದ ಪ್ರದೇಶಗಳಿಗೆ ಹಾನಿಯಾಗಿದೆ.

ಕನಕಪುರ ತಾಲ್ಲೂಕಿನ ಕುರುಬರಹಳ್ಳಿ ಬಳಿ ನದಿಗೆ ಅಡ್ಡಲಾಗಿ ಕಟ್ಟಲಾದ ಕೆಳ ಹಂತದ ಸೇತುವೆ ಮುಳುಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡ ಪರಿಣಾಮ ಜನರು ಪರದಾಡಿದರು. ಬರಡನಹಳ್ಳಿ, ಆನಮಾನಹಳ್ಳಿ ಸಹಿತ ಹಲವು ಕಡೆ ಮರಗಳು, ವಿದ್ಯುತ್‌ ಕಂಬಗಳು ನೆಲಕ್ಕೆ ಉರುಳಿವೆ. ದೊಡ್ಡಮುಡವಾಡಿ ಗ್ರಾಮದಲ್ಲಿ ವಿದ್ಯುತ್‌ ಅವಘಡದಿಂದಾಗಿ ಎಲೆಕ್ಟ್ರಾನಿಕ್‌ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT