ಬಿರುಗಾಳಿ ಮಳೆಗೆ ತಾಲ್ಲೂಕಿನ ಬೇವೂರು ಗ್ರಾಮದಲ್ಲಿ ದೊಡ್ಡ ಆಲದಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದ ಪರಿಣಾಮ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಅದನ್ನು ಶುಕ್ರವಾರ ತೆರವುಗೊಳಿಸಲಾಯಿತು. ಹಾಗೆಯೆಕೆಲವೆಡೆ ತೆಂಗಿನ ಮರಗಳು, ವಿದ್ಯುತ್ ಕಂಬಗಳು ಧರೆಗೆ ಉರುಳಿ ಬಿದ್ದ ವರದಿಯಾಗಿದೆ. ಅಲ್ಲದೇ ಗಾಳಿಯಿಂದಾಗಿ ಕೆಲವೆಡೆ ಮಾವಿನ ಕಾಯಿಗಳು ಉದುರಿ ಬಿದ್ದಿದ್ದು, ಇದರಿಂದ ಕೆಲವು ರೈತರು ನಷ್ಟ ಅನುಭವಿಸಿದ್ದಾರೆ. ತಾಲ್ಲೂಕಿನ ಬೇವೂರು, ಕೋಡಂಬಹಳ್ಳಿ, ಹೊಂಗನೂರು ಸೇರಿದಂತೆ ಕೆಲವು ಗ್ರಾಮಗಳಲ್ಲಿ ರೈತರ ಜೋಳದ ಬೆಳೆಗಳು ನೆಲಕಚ್ಚಿವೆ.