ರಾಕೇಶ್ ಈ ಹಿಂದೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿ ಸೇವೆಯಲ್ಲಿದ್ದು, ಅದಕ್ಕೂ ಮುನ್ನ ತುಮಕೂರು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಜಮಖಂಡಿ ಉಪವಿಭಾಗಾಧಿಕಾರಿ, ಶಿವಮೊಗ್ಗ ಶಿವಮೊಗ್ಗ ಜಿ.ಪಂ. ಆಗಿಯೂ ಅವರು ಈ ಹಿಂದೆ ಕಾರ್ಯ ನಿರ್ವಹಿಸಿದ್ದಾರೆ.
ಅರ್ಚನಾ ಅವರು ಕಳೆದೊಂದು ವರ್ಷಕ್ಕೂ ಹೆಚ್ಚು ಕಾಲ ರಾಮನಗರ ಜಿಲ್ಲಾಧಿಕಾರಿ ಹುದ್ದೆಯಲ್ಲಿ ಇದ್ದರು. ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಅವರಿಗೆ ಸರ್ಕಾರ ಯಾವುದೇ ಹುದ್ದೆಗೆ ನಿಯೋಜನೆ ಮಾಡಿಲ್ಲ.