<p><strong>ಮಾಗಡಿ:</strong> ಪಟ್ಟಣದ ಎನ್ಇಎಸ್ ಸರ್ಕಲ್ನಲ್ಲಿ ಮಹಾತ್ಮ ಗಾಂಧಿ ನೂತನ ಪ್ರತಿಮೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಗುರುವಾರ ಅನಾವರಣಗೊಳಿಸಿದರು. </p>.<p>ಮಹಾತ್ಮ ಗಾಂಧಿ ಅವರ ಹೆಸರಿನಲ್ಲಿದ್ದ ನರೇಗಾ ಯೋಜನೆ ಹೆಸರನ್ನು ಬದಲಾಯಿಸುವ ಮೂಲಕ ಬಿಜೆಪಿಯವರು ಮತ್ತೊಮ್ಮೆ ಬಾಪೂ ಕೊಲೆ ಮಾಡಿದ್ದಾರೆ ಎಂದು ಅವರು ಟೀಕಿಸಿದರು.</p>.<p>ಬಾಪೂ ಹತ್ಯೆಗೆ ಆರು ಬಾರಿ ಪ್ರಯತ್ನಿಸಿದ್ದ ಸಂಘ ಪರಿವಾರದ ಸದಸ್ಯ ನಾಥೂರಾಮ ಗೋಡ್ಸೆ ಏಳನೇ ಬಾರಿಗೆ ಅದರಲ್ಲಿ ಯಶಸ್ವಿಯಾದ. ಈಗ ಬಿಜೆಪಿಯವರು ನರೇಗಾ ಹೆಸರು ಬದಲಾವಣೆ ಮೂಲಕ ಮತ್ತೊಮ್ಮೆ ಗಾಂಧೀಜಿ ಅವರನ್ನು ಹತ್ಯೆ ಮಾಡಿದ್ದಾರೆ ಎಂದರು.</p>.<p>ಸೋಮೇಶ್ವರ ದೇವಸ್ಥಾನದ ಮುಂಭಾಗ ಮ್ಯಾರಥಾನ್ಗೆ ಶಾಸಕ ಬಾಲಕೃಷ್ಣ ಚಾಲನೆ ನೀಡಿದರು. ನೂರಾರು ಯುವಕರು ಮ್ಯಾರಥಾನ್ ನಲ್ಲಿ ಭಾಗವಹಿದ್ದರು.</p>.<p>ಮಾಗಡಿ ಕೋಟೆ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ರಾಜ್ಯ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಚ್.ಎನ್.ಅಶೋಕ್, ಬೆಂಗಳೂರು ಗ್ರೇಟರ್ ಪ್ರಾಧಿಕಾರದ ಅಧ್ಯಕ್ಷ ನಟರಾಜು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಪಟ್ಟಣದ ಎನ್ಇಎಸ್ ಸರ್ಕಲ್ನಲ್ಲಿ ಮಹಾತ್ಮ ಗಾಂಧಿ ನೂತನ ಪ್ರತಿಮೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಗುರುವಾರ ಅನಾವರಣಗೊಳಿಸಿದರು. </p>.<p>ಮಹಾತ್ಮ ಗಾಂಧಿ ಅವರ ಹೆಸರಿನಲ್ಲಿದ್ದ ನರೇಗಾ ಯೋಜನೆ ಹೆಸರನ್ನು ಬದಲಾಯಿಸುವ ಮೂಲಕ ಬಿಜೆಪಿಯವರು ಮತ್ತೊಮ್ಮೆ ಬಾಪೂ ಕೊಲೆ ಮಾಡಿದ್ದಾರೆ ಎಂದು ಅವರು ಟೀಕಿಸಿದರು.</p>.<p>ಬಾಪೂ ಹತ್ಯೆಗೆ ಆರು ಬಾರಿ ಪ್ರಯತ್ನಿಸಿದ್ದ ಸಂಘ ಪರಿವಾರದ ಸದಸ್ಯ ನಾಥೂರಾಮ ಗೋಡ್ಸೆ ಏಳನೇ ಬಾರಿಗೆ ಅದರಲ್ಲಿ ಯಶಸ್ವಿಯಾದ. ಈಗ ಬಿಜೆಪಿಯವರು ನರೇಗಾ ಹೆಸರು ಬದಲಾವಣೆ ಮೂಲಕ ಮತ್ತೊಮ್ಮೆ ಗಾಂಧೀಜಿ ಅವರನ್ನು ಹತ್ಯೆ ಮಾಡಿದ್ದಾರೆ ಎಂದರು.</p>.<p>ಸೋಮೇಶ್ವರ ದೇವಸ್ಥಾನದ ಮುಂಭಾಗ ಮ್ಯಾರಥಾನ್ಗೆ ಶಾಸಕ ಬಾಲಕೃಷ್ಣ ಚಾಲನೆ ನೀಡಿದರು. ನೂರಾರು ಯುವಕರು ಮ್ಯಾರಥಾನ್ ನಲ್ಲಿ ಭಾಗವಹಿದ್ದರು.</p>.<p>ಮಾಗಡಿ ಕೋಟೆ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ರಾಜ್ಯ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಚ್.ಎನ್.ಅಶೋಕ್, ಬೆಂಗಳೂರು ಗ್ರೇಟರ್ ಪ್ರಾಧಿಕಾರದ ಅಧ್ಯಕ್ಷ ನಟರಾಜು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>