ರಾಮನಗರ: ‘ಬಿಜೆಪಿಯವರದ್ದು ಅಯೋಧ್ಯೆ ರಾಮನಾದರೆ, ನಮ್ಮ ಸ್ಥಳೀಯ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಮತ್ತು ಸಂಸದ ಡಿ.ಕೆ. ಸುರೇಶ್ ಅವರದ್ದು ರಾಮನಗರದ ರಾಮ. ಅವರು ಅಲ್ಲಿ ರಾಮಮಂದಿರ ನಿರ್ಮಿಸಿದರೆ, ನಮ್ಮವರು ಇಲ್ಲೊಂದು ಮಂದಿರ ನಿರ್ಮಿಸಲು ಕಂಕಣಬದ್ಧರಾಗಿದ್ದಾರೆ. ಈ ವಿಷಯದಲ್ಲಿ ನಮ್ಮವರು ಬಿಜೆಪಿಗಿಂತಲೂ ಒಂದು ಹೆಜ್ಜೆ ಮುಂದಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.