ರಾಮನಗರ: ಜಿಲ್ಲೆಯಲ್ಲಿ ಭಾನುವಾರ ಮತ್ತೊಂದು ಕೋವಿಡ್-19 ಪ್ರಕರಣ ವರದಿಯಾಗಿದ್ದು, ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಸೋಂಕಿತೆ ಚನ್ನಪಟ್ಟಣ ತಾಲ್ಲೂಕಿನ ಬಾಣಂತಹಳ್ಳಿ ಗ್ರಾಮದವರು.
ಚನ್ನಪಟ್ಟಣ ತಾಲೂಕಿನ ವೈ.ಟಿ. ಹಳ್ಳಿಯವರಾದ ಮಹಿಳೆ ಅನಾರೋಗ್ಯದ ಕಾರಣಕ್ಕೆ 10 ದಿನಗಳಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಯೇ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಅದೇ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.