<p><strong>ಕನಕಪುರ</strong>: ರೈತ ಸಂಘ ಬಲಿಷ್ಠಗೊಳ್ಳಬೇಕಾದರೆ ನಿಜವಾದ ರೈತರು ಸಂಘದಲ್ಲಿ ಸದಸ್ಯರಾಗಬೇಕು. ಹೋರಾಟಗಳಲ್ಲಿ ಪಾಲ್ಗೊಳ್ಳಬೇಕು ಎಂದು ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಉಯ್ಯಂಬಳ್ಳಿ ಸತೀಶ್ ತಿಳಿಸಿದರು.</p>.<p>ತಾಲ್ಲೂಕಿನ ಸಾತನೂರು ಮಹದೇಶ್ವರ ದೇವಾಲಯದ ಸಮುದಾಯ ಭವನದಲ್ಲಿ ನಡೆದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಒಂದು ಕಾಲದಲ್ಲಿ ರೈತ ಸಂಘದ ಚಳವಳಿಗೆ ಸರ್ಕಾರವೇ ಭಯ ಬೀಳುತ್ತಿತ್ತು. ಅಧಿಕಾರಿಗಳು ಭಯದಿಂದ ಕಚೇರಿಯಲ್ಲಿ ಕುಳಿತು ಸಾರ್ವಜನಿಕರ ಕೆಲಸ ಮಾಡುತ್ತಿದ್ದರು. ಆದರೆ, ಈಗ ರೈತ ಸಂಘದ ಹೋರಾಟ ಕ್ಷೀಣಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ರೈತ ಸಂಘದ ಯುವ ಮುಖಂಡ ಕಾಡಳ್ಳಿ ಅನುಕುಮಾರ್ ಮಾತನಾಡಿ, ರೈತ ಸಂಘ ಸಕ್ರಿಯವಾಗಿ ಸಂಘಟಿತ ಹೋರಾಟ ನಡೆಸಬೇಕಿದೆ ಎಂದರು.</p>.<p>ರೈತರ ಸಮಸ್ಯೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಸಾರ್ವಜನಿಕರ ಕೆಲಸ ಮಾಡದ ಅಧಿಕಾರಗಳ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಾಗುವುದು ಎಂದರು. </p>.<p>ರೈತ ಸಂಘದ ಸಂಘಟನಾ ಕಾರ್ಯದರ್ಶಿ ಆಂಥೋಣಿರಾಜ್, ಹೋಬಳಿ ಘಟಕದ ಅಧ್ಯಕ್ಷ ರಮೇಶ್, ಸಿದ್ದೇಗೌಡ, ಪದಾಧಿಕಾರಿಗಳಾದ ವೆಂಕಟೇಶ್, ಶಿವಗೂಳಿಗೌಡ, ಪುಟ್ಟಸ್ವಾಮಿಗೌಡ, ಶ್ರೀಕಂಠಸ್ವಾಮಿ, ಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ರೈತ ಸಂಘ ಬಲಿಷ್ಠಗೊಳ್ಳಬೇಕಾದರೆ ನಿಜವಾದ ರೈತರು ಸಂಘದಲ್ಲಿ ಸದಸ್ಯರಾಗಬೇಕು. ಹೋರಾಟಗಳಲ್ಲಿ ಪಾಲ್ಗೊಳ್ಳಬೇಕು ಎಂದು ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಉಯ್ಯಂಬಳ್ಳಿ ಸತೀಶ್ ತಿಳಿಸಿದರು.</p>.<p>ತಾಲ್ಲೂಕಿನ ಸಾತನೂರು ಮಹದೇಶ್ವರ ದೇವಾಲಯದ ಸಮುದಾಯ ಭವನದಲ್ಲಿ ನಡೆದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಒಂದು ಕಾಲದಲ್ಲಿ ರೈತ ಸಂಘದ ಚಳವಳಿಗೆ ಸರ್ಕಾರವೇ ಭಯ ಬೀಳುತ್ತಿತ್ತು. ಅಧಿಕಾರಿಗಳು ಭಯದಿಂದ ಕಚೇರಿಯಲ್ಲಿ ಕುಳಿತು ಸಾರ್ವಜನಿಕರ ಕೆಲಸ ಮಾಡುತ್ತಿದ್ದರು. ಆದರೆ, ಈಗ ರೈತ ಸಂಘದ ಹೋರಾಟ ಕ್ಷೀಣಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ರೈತ ಸಂಘದ ಯುವ ಮುಖಂಡ ಕಾಡಳ್ಳಿ ಅನುಕುಮಾರ್ ಮಾತನಾಡಿ, ರೈತ ಸಂಘ ಸಕ್ರಿಯವಾಗಿ ಸಂಘಟಿತ ಹೋರಾಟ ನಡೆಸಬೇಕಿದೆ ಎಂದರು.</p>.<p>ರೈತರ ಸಮಸ್ಯೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಸಾರ್ವಜನಿಕರ ಕೆಲಸ ಮಾಡದ ಅಧಿಕಾರಗಳ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಾಗುವುದು ಎಂದರು. </p>.<p>ರೈತ ಸಂಘದ ಸಂಘಟನಾ ಕಾರ್ಯದರ್ಶಿ ಆಂಥೋಣಿರಾಜ್, ಹೋಬಳಿ ಘಟಕದ ಅಧ್ಯಕ್ಷ ರಮೇಶ್, ಸಿದ್ದೇಗೌಡ, ಪದಾಧಿಕಾರಿಗಳಾದ ವೆಂಕಟೇಶ್, ಶಿವಗೂಳಿಗೌಡ, ಪುಟ್ಟಸ್ವಾಮಿಗೌಡ, ಶ್ರೀಕಂಠಸ್ವಾಮಿ, ಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>