<p>ಹಾರೋಹಳ್ಳಿ: ಹಳೆ ದ್ವೇಷ ಮತ್ತು ಹಣಕ್ಕಾಗಿ ವ್ಯಕ್ತಿಯೊಬ್ಬನನ್ನು ಅಪಹರಿಸಿದ್ದ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ಕಗ್ಗಲೀಪುರ ಪೊಲೀಸರು 24 ತಾಸಿನಲ್ಲಿ ಬಂಧಿಸಿದ್ದಾರೆ.</p>.<p>ಹಣಕ್ಕಾಗಿ ನರಸಿಂಹ ರೆಡ್ಡಿ ಎಂಬಾತ ತಮ್ಮ ಪತಿ ಕೆರೆ ಚೂಡಹಳ್ಳಿ ಗ್ರಾಮದ ರಾಜಶೇಖರ್ ಅವರನ್ನು ಅಪಹರಿಸಿದ್ದಾನೆ ಎಂದು ಅಪಹೃತರ ಪತ್ನಿ ಕಗ್ಗಲೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು 24 ತಾಸಿನೊಳಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಹೊಸಕೆರೆಹಳ್ಳಿಯ ನರಸಿಂಹ ರೆಡ್ಡಿ, ವಜ್ರ ಅಲಿಯಾಸ್ ಮೂಗಿ, ಕೋರಮಂಗಲದ ಮನೋಹರ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಗುಡಿಪಾಳ್ಯದ ಶಶಿ ಅಲಿಯಾಸ್ ಗಾಗ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.</p>.<p>ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಕಾರು, ಚಾಕು, ಚ್ಚು, ಮಾಸ್ಕ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ರಾಜಶೇಖರ್ ಅವರನ್ನು ಹೆದರಿಸಿ ಎಟಿಎಂ ಪಾಸ್ವರ್ಡ್ ಪಡೆದು ಡ್ರಾ ಮಾಡಿದ್ದ ₹1ಲಕ್ಷದ ಪೈಕಿ ₹39 ಸಾವಿರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ಕಗ್ಗಲೀಪುರ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ವೆಂಕಟೇಶ್, ಪಿಎಸ್ಐ ಲೋಕೇಶ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾರೋಹಳ್ಳಿ: ಹಳೆ ದ್ವೇಷ ಮತ್ತು ಹಣಕ್ಕಾಗಿ ವ್ಯಕ್ತಿಯೊಬ್ಬನನ್ನು ಅಪಹರಿಸಿದ್ದ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ಕಗ್ಗಲೀಪುರ ಪೊಲೀಸರು 24 ತಾಸಿನಲ್ಲಿ ಬಂಧಿಸಿದ್ದಾರೆ.</p>.<p>ಹಣಕ್ಕಾಗಿ ನರಸಿಂಹ ರೆಡ್ಡಿ ಎಂಬಾತ ತಮ್ಮ ಪತಿ ಕೆರೆ ಚೂಡಹಳ್ಳಿ ಗ್ರಾಮದ ರಾಜಶೇಖರ್ ಅವರನ್ನು ಅಪಹರಿಸಿದ್ದಾನೆ ಎಂದು ಅಪಹೃತರ ಪತ್ನಿ ಕಗ್ಗಲೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು 24 ತಾಸಿನೊಳಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಹೊಸಕೆರೆಹಳ್ಳಿಯ ನರಸಿಂಹ ರೆಡ್ಡಿ, ವಜ್ರ ಅಲಿಯಾಸ್ ಮೂಗಿ, ಕೋರಮಂಗಲದ ಮನೋಹರ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಗುಡಿಪಾಳ್ಯದ ಶಶಿ ಅಲಿಯಾಸ್ ಗಾಗ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.</p>.<p>ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಕಾರು, ಚಾಕು, ಚ್ಚು, ಮಾಸ್ಕ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ರಾಜಶೇಖರ್ ಅವರನ್ನು ಹೆದರಿಸಿ ಎಟಿಎಂ ಪಾಸ್ವರ್ಡ್ ಪಡೆದು ಡ್ರಾ ಮಾಡಿದ್ದ ₹1ಲಕ್ಷದ ಪೈಕಿ ₹39 ಸಾವಿರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p>ಕಗ್ಗಲೀಪುರ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ವೆಂಕಟೇಶ್, ಪಿಎಸ್ಐ ಲೋಕೇಶ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>