ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

Last Updated 7 ನವೆಂಬರ್ 2022, 6:14 IST
ಅಕ್ಷರ ಗಾತ್ರ

ರಾಮನಗರ: ಇಲ್ಲಿನ ಸರ್ಕಾರಿ ಡಿಪ್ಲೊಮಾ ಮತ್ತು ಪಾಲಿಟೆಕ್ನಿಕ್ ಕಾಲೇಜು ಬಳಿ ಬಸ್ ಗಳ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ಸೋಮವಾರ ಇಲ್ಲಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ ಹಾಗೂ ಸಂಜೆ ಕಾಲೇಜು ಬಳಿ ಕೆಎಸ್ ಆರ್ ಟಿಸಿ ಬಸ್ ನಿಲುಗಡೆ‌ ಮಾಡುತ್ತಿಲ್ಲ. ಹೀಗಾಗಿ ಸಮಯಕ್ಕೆ ಸರಿಯಾಗಿ ಕಾಲೇಜು ತಲುಪಲು ಆಗುತ್ತಿಲ್ಲ. ವಿದ್ಯಾರ್ಥಿಗಳು ನಿಲ್ಲಲು ಹೆದ್ದಾರಿಯಲ್ಲಿ ಬಸ್ ಶೆಲ್ಟರ್ ಸಹ ಇಲ್ಲ ಎಂದು ದೂರಿದರು.

ಈ ಹಿಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಸಂದರ್ಭ ಕೆಲ ತಿಂಗಳು ಬಸ್ ನಿಲುಗಡೆ ಮಾಡಿದ್ದರು. ಮತ್ತೆ ಹಳೇ ಪರಿಸ್ಥಿತಿಯೇ ಇದೆ. ಹೀಗಾಗಿ ಕಡ್ಡಾಯವಾಗಿ ಕೆಎಸ್ ಆರ್ ಟಿಸಿ ಬಸ್ ನಿಲುಗಡೆಗೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT