ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಆನೆ ದಾಳಿಯಿಂದ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಸಾವು

Last Updated 4 ಆಗಸ್ಟ್ 2021, 11:54 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಬುಧವಾರ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಆನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ.

ಮಾಗಡಿ ತಾಲ್ಲೂಕಿನ ಆಗಲಕೋಟೆ ಹ್ಯಾಂಡ್‌ ಪೋಸ್ಟ್‌ ಬಳಿ ಬೆಳಿಗ್ಗೆ ಆನೆಗಳ ಹಿಂಡು ಕಾಣಿಸಿಕೊಂಡಿತ್ತು. ಇದನ್ನು ಕಾಣಲು ಹೋಗಿದ್ದ ದೋಣಗುಪ್ಪೆ ನಿವಾಸಿ ಗಂಗಾಧರ್ (46) ಆನೆಗೆ ಆಹಾರ ನೀಡಲು ಮುಂದಾದರು. ಈ ಸಂದರ್ಭ ಗಜರಾಜನ ತುಳಿತಕ್ಕೆ ಸಿಕ್ಕು ಮೃತಪಟ್ಟರು.

ಮತ್ತೊಂದು ಪ್ರಕರಣದಲ್ಲಿ ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಸಮೀಪದ ಚಿಕ್ಕಪೇಟೆಹಳ್ಳಿಯಲ್ಲಿ ಜಮೀನಿಗೆ ಹೋಗಿದ್ದ ರೈತ ರುದ್ರೇಗೌಡ (55) ಎಂಬುವರು ಆನೆ ದಾಳಿಗೆ ಒಳಗಾಗಿ ಮೃತಪಟ್ಟರು. ಕಾವೇರಿ ವನ್ಯಜೀವಿ ಧಾಮಕ್ಕೆ ಹೊಂದಿಕೊಂಡಂತೆ ಈ ಗ್ರಾಮವಿದ್ದು, ಮುಂಜಾನೆ ರೈತ ಜಮೀನಿಗೆ ತೆರಳಿದ್ದ ವೇಳೆ ಆನೆ ದಾಳಿ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT