<p><strong>ರಾಮನಗರ</strong>: ನಗರದ ಹೊರವಲಯದ ಕೊಂಕಾಣಿದೊಡ್ಡಿ ಬಳಿಯ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಸುಕಿನಲ್ಲಿ ಸರಕು ಸಾಗಣೆ ವಾಹನವು ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ, ವಾಹನದಲ್ಲಿದ್ದ ಹೂವಿನ ವ್ಯಾಪಾರಿ ಮೃತಪಟ್ಟಿದ್ದಾರೆ.</p><p>ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಬಲ್ಲೇನಹಳ್ಳಿಯ ಸೋಮೇಶ್ (36) ಮೃತರು. ಘಟನೆಯಲ್ಲಿ ವಾಹನ ಚಾಲಕ ರಾಜು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಸೋಮೇಶ್ ಅವರು ವಾಹನದಲ್ಲಿ ಹೂ ತೆಗೆದುಕೊಂಡು ಬೆಂಗಳೂರಿನ ಕೆ.ಆರ್. ಮಾರುಕಟ್ಟೆಗೆ ಹೊರಟ್ಟಿದ್ದರು. ವೇಗವಾಗಿ ಹೋಗುತ್ತಿದ್ದ ಚಾಲಕ ರಾಜು ಕೊಂಕಾಣಿದೊಡ್ಡಿ ಬಳಿ ಮುಂದಿರುವ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಗುದ್ದಿದ್ದಾನೆ.</p><p>ಘಟನೆ ಕುರಿತು ಪ್ರಕರಣ<br>ದಾಖಲಿಸಿಕೊಳ್ಳಲಾಗಿದೆ ಎಂದು ರಾಮನಗರ ಸಂಚಾರ ಠಾಣೆ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ನಗರದ ಹೊರವಲಯದ ಕೊಂಕಾಣಿದೊಡ್ಡಿ ಬಳಿಯ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಸುಕಿನಲ್ಲಿ ಸರಕು ಸಾಗಣೆ ವಾಹನವು ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ, ವಾಹನದಲ್ಲಿದ್ದ ಹೂವಿನ ವ್ಯಾಪಾರಿ ಮೃತಪಟ್ಟಿದ್ದಾರೆ.</p><p>ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಬಲ್ಲೇನಹಳ್ಳಿಯ ಸೋಮೇಶ್ (36) ಮೃತರು. ಘಟನೆಯಲ್ಲಿ ವಾಹನ ಚಾಲಕ ರಾಜು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಸೋಮೇಶ್ ಅವರು ವಾಹನದಲ್ಲಿ ಹೂ ತೆಗೆದುಕೊಂಡು ಬೆಂಗಳೂರಿನ ಕೆ.ಆರ್. ಮಾರುಕಟ್ಟೆಗೆ ಹೊರಟ್ಟಿದ್ದರು. ವೇಗವಾಗಿ ಹೋಗುತ್ತಿದ್ದ ಚಾಲಕ ರಾಜು ಕೊಂಕಾಣಿದೊಡ್ಡಿ ಬಳಿ ಮುಂದಿರುವ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಗುದ್ದಿದ್ದಾನೆ.</p><p>ಘಟನೆ ಕುರಿತು ಪ್ರಕರಣ<br>ದಾಖಲಿಸಿಕೊಳ್ಳಲಾಗಿದೆ ಎಂದು ರಾಮನಗರ ಸಂಚಾರ ಠಾಣೆ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>