<p><strong>ರಾಮನಗರ:</strong> ಸೇವೆ ಕಾಯಂಗೊಳಿಸುವುದು, ಗೌರವಧನವನ್ನು ₹15 ಸಾವಿರಕ್ಕೆ ಹೆಚ್ಚಳ ಮಾಡುವುದು, ಗ್ರಾಚ್ಯುಯಿಟಿ ಹಣ ಬಿಡುಗಡೆ, ನಿವೃತ್ತ ನೌಕರರಿಗೆ ಮಾಸಿಕ ₹10 ಸಾವಿರ ಪಿಂಚಣಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಮಂಗಳವಾರ ಧರಣಿ ನಡೆಸಿದರು.</p>.<p>ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ನೌಕರರು, ಜಿಲ್ಲಾಧಿಕಾರಿ ಕಚೇರಿ ಸಮೀಪ ನಿಗದಿಪಡಿಸಿರುವ ಸ್ಥಳದಲ್ಲಿ ಬೆಳಿಗ್ಗೆ ಜಮಾಯಿಸಿ ಧರಣಿ ನಡೆಸಿದರು. ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು.</p>.<p>ಕೇಂದ್ರ ಸರ್ಕಾರ 2018ರಿಂದ ಗೌರವ ಧನ ಹೆಚ್ಚಳ ಮಡಿಲ್ಲ. ಕುಡಲೇ ಗೌರವ ಧನವನ್ನು ₹26 ಸಾವಿರಕ್ಕೆ ಹೆಚ್ಚಿಸಬೇಕು. ಶಿಕ್ಷಣ ಇಲಾಖೆಯು ಎಲ್ಕೆಜಿ ಮತ್ತು ಯುಕೆಜಿ ಆರಂಭಿಸಿರುವ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು, ಐಸಿಡಿಎಸ್ ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸಬೇಕು, ಮತದಾನಕ್ಕೆ ಸಂಬಂಧಿಸಿದಂತೆ ಬಿಎಲ್ಒ ಕೆಲಸದಿಂದ ನೌಕರರನ್ನು ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ನೌಕರರಿಗೆ ಸಾಮೂಹಿಕ ಆರೋಗ್ಯ ವಿಮೆ ಜಾರಿಗೊಳಿಸಬೇಕು. ಅಂಗನವಾಡಿಗಳಿಗೆ ಕೊಡುವ ಪೌಷ್ಠಿಕ ಆಹಾರಕ್ಕೆ ಜಿಎಸ್ಟಿ ಹಾಕಬಾರದು. ಜಿಲ್ಲಾಧಿಕಾರಿ ಅಧ್ಯಕ್ಷತೆಯನ್ನು ಆಹಾರದ ಮೆನು ಅಂತಿಮಗೊಳ್ಳುವ ವ್ಯವಸ್ಥೆ ಜಾರಿಯಾಗಬೇಕು. ಅಂಗನವಾಡಿಗಳಿಗೆ ಮೂಲಸೌಕರ್ಯ ಒದಗಿಸಬೇಕು. ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ಮಾಡಬೇಕು. ಸಹಾಯಕಿಯರು ಇಲ್ಲದಿರುವ ಕಡೆ ತಾತ್ಕಾಲಿಕ ಸಹಾಯಕಿಯರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.</p>.<p>ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸುವ ತನಕ ಸಹಾಯಕಿಯರನ್ನು ಕೊಡಬೇಕು. ಪೂರ್ಣ ಕಾರ್ಯಕರ್ತೆಯರಿಗೆ ಕೊಡುವಷ್ಟು ಗೌರವಧನ ಹೆಚ್ಚಿಸಬೇಕು. ಅಂಗನವಾಡಿ ಕೇಂದ್ರದ ಚಟುವಟಿಕೆಗಳನ್ನು ಮೊಬೈಲ್ನಲ್ಲಿ ದಾಖಲೆ ನಿರ್ವಹಣೆ ಮಾಡಿದರೆ, ಪುಸ್ತಕದಲ್ಲಿ<br />ಬರೆಯುವುದನ್ನು ನಿಲ್ಲಿಸಬೇಕು.ಇಲಾಖೆ ನಡೆಸುವ ಮಾಸಿಕ ಮತ್ತು ಗೌರವಧನದ ಸಭೆಗಳಲ್ಲಿ ನೌಕರರಿಗೆ ಕುರ್ಚಿ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಸಂಜೆ ಧರಣಿನಿರತರ ಸ್ಥಳಕ್ಕೆ ಭೇಟಿ ನೀಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಚಂದ್ರಯ್ಯ, ಬೇಡಿಕೆಗಳನ್ನ ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.</p>.<p>ಸಂಘದ ಜಿಲ್ಲಾಧ್ಯಕ್ಷೆ ಪುಷ್ಪಲತಾ, ಗೌರವ ಅಧ್ಯಕ್ಷೆ ಸಿ. ಜಯಲಕ್ಷ್ಮಮ್ಮ, ಖಜಾಂಚಿ ಶಾರದಾ, ಪ್ರಧಾನ ಕಾರ್ಯದರ್ಶಿ ಭಾಗ್ಯಮ್ಮ, ಸಿಐಟಿಯು ರಾಘವೇಂದ್ರ, ಚಂದ್ರಶೇಖರ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಸೇವೆ ಕಾಯಂಗೊಳಿಸುವುದು, ಗೌರವಧನವನ್ನು ₹15 ಸಾವಿರಕ್ಕೆ ಹೆಚ್ಚಳ ಮಾಡುವುದು, ಗ್ರಾಚ್ಯುಯಿಟಿ ಹಣ ಬಿಡುಗಡೆ, ನಿವೃತ್ತ ನೌಕರರಿಗೆ ಮಾಸಿಕ ₹10 ಸಾವಿರ ಪಿಂಚಣಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಮಂಗಳವಾರ ಧರಣಿ ನಡೆಸಿದರು.</p>.<p>ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ನೌಕರರು, ಜಿಲ್ಲಾಧಿಕಾರಿ ಕಚೇರಿ ಸಮೀಪ ನಿಗದಿಪಡಿಸಿರುವ ಸ್ಥಳದಲ್ಲಿ ಬೆಳಿಗ್ಗೆ ಜಮಾಯಿಸಿ ಧರಣಿ ನಡೆಸಿದರು. ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು.</p>.<p>ಕೇಂದ್ರ ಸರ್ಕಾರ 2018ರಿಂದ ಗೌರವ ಧನ ಹೆಚ್ಚಳ ಮಡಿಲ್ಲ. ಕುಡಲೇ ಗೌರವ ಧನವನ್ನು ₹26 ಸಾವಿರಕ್ಕೆ ಹೆಚ್ಚಿಸಬೇಕು. ಶಿಕ್ಷಣ ಇಲಾಖೆಯು ಎಲ್ಕೆಜಿ ಮತ್ತು ಯುಕೆಜಿ ಆರಂಭಿಸಿರುವ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು, ಐಸಿಡಿಎಸ್ ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸಬೇಕು, ಮತದಾನಕ್ಕೆ ಸಂಬಂಧಿಸಿದಂತೆ ಬಿಎಲ್ಒ ಕೆಲಸದಿಂದ ನೌಕರರನ್ನು ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ನೌಕರರಿಗೆ ಸಾಮೂಹಿಕ ಆರೋಗ್ಯ ವಿಮೆ ಜಾರಿಗೊಳಿಸಬೇಕು. ಅಂಗನವಾಡಿಗಳಿಗೆ ಕೊಡುವ ಪೌಷ್ಠಿಕ ಆಹಾರಕ್ಕೆ ಜಿಎಸ್ಟಿ ಹಾಕಬಾರದು. ಜಿಲ್ಲಾಧಿಕಾರಿ ಅಧ್ಯಕ್ಷತೆಯನ್ನು ಆಹಾರದ ಮೆನು ಅಂತಿಮಗೊಳ್ಳುವ ವ್ಯವಸ್ಥೆ ಜಾರಿಯಾಗಬೇಕು. ಅಂಗನವಾಡಿಗಳಿಗೆ ಮೂಲಸೌಕರ್ಯ ಒದಗಿಸಬೇಕು. ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ಮಾಡಬೇಕು. ಸಹಾಯಕಿಯರು ಇಲ್ಲದಿರುವ ಕಡೆ ತಾತ್ಕಾಲಿಕ ಸಹಾಯಕಿಯರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.</p>.<p>ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಕೇಂದ್ರಗಳನ್ನಾಗಿ ಪರಿವರ್ತಿಸುವ ತನಕ ಸಹಾಯಕಿಯರನ್ನು ಕೊಡಬೇಕು. ಪೂರ್ಣ ಕಾರ್ಯಕರ್ತೆಯರಿಗೆ ಕೊಡುವಷ್ಟು ಗೌರವಧನ ಹೆಚ್ಚಿಸಬೇಕು. ಅಂಗನವಾಡಿ ಕೇಂದ್ರದ ಚಟುವಟಿಕೆಗಳನ್ನು ಮೊಬೈಲ್ನಲ್ಲಿ ದಾಖಲೆ ನಿರ್ವಹಣೆ ಮಾಡಿದರೆ, ಪುಸ್ತಕದಲ್ಲಿ<br />ಬರೆಯುವುದನ್ನು ನಿಲ್ಲಿಸಬೇಕು.ಇಲಾಖೆ ನಡೆಸುವ ಮಾಸಿಕ ಮತ್ತು ಗೌರವಧನದ ಸಭೆಗಳಲ್ಲಿ ನೌಕರರಿಗೆ ಕುರ್ಚಿ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಸಂಜೆ ಧರಣಿನಿರತರ ಸ್ಥಳಕ್ಕೆ ಭೇಟಿ ನೀಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಚಂದ್ರಯ್ಯ, ಬೇಡಿಕೆಗಳನ್ನ ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.</p>.<p>ಸಂಘದ ಜಿಲ್ಲಾಧ್ಯಕ್ಷೆ ಪುಷ್ಪಲತಾ, ಗೌರವ ಅಧ್ಯಕ್ಷೆ ಸಿ. ಜಯಲಕ್ಷ್ಮಮ್ಮ, ಖಜಾಂಚಿ ಶಾರದಾ, ಪ್ರಧಾನ ಕಾರ್ಯದರ್ಶಿ ಭಾಗ್ಯಮ್ಮ, ಸಿಐಟಿಯು ರಾಘವೇಂದ್ರ, ಚಂದ್ರಶೇಖರ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>