ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ ಬಂದ್‌ಗೆ ನೀರಸ ಪ್ರತಿಕ್ರಿಯೆ

ಸ್ಟಾಲಿನ್ ಅಣಕು ತಿಥಿ: ರಸ್ತೆಗೆ ರಕ್ತ ಚೆಲ್ಲಿ ಆಕ್ರೋಶ * ಪ್ರತಿಭಟನೆಗಷ್ಟೇ ಸೀಮಿತವಾದ ಬಂದ್‌
Published 26 ಸೆಪ್ಟೆಂಬರ್ 2023, 14:40 IST
Last Updated 26 ಸೆಪ್ಟೆಂಬರ್ 2023, 14:40 IST
ಅಕ್ಷರ ಗಾತ್ರ

ರಾಮನಗರ: ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಮಂಗಳವಾರ ಕರೆ ಕೊಟ್ಟಿದ್ದ ರಾಮನಗರ ಜಿಲ್ಲೆ ಬಂದ್‌ ಪ್ರತಿಭಟನೆಗಷ್ಟೇ ಸೀಮಿತವಾಯಿತು.

ರಾಜಕೀಯ ಪಕ್ಷಗಳು ಸೇರಿದಂತೆ 33ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದ್ದರೂ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ದೈನಂದಿನ ಜನಜೀವನ ಎಂದಿನಂತೆ ಇತ್ತು. ಶಾಲಾ–ಕಾಲೇಜು, ಬ್ಯಾಂಕ್‌, ಸರ್ಕಾರಿ ಕಚೇರಿ ತೆರೆದಿದ್ದವು. ವಾಹನ ಸಂಚಾರ, ವ್ಯಾಪಾರ–ವಹಿವಾಟು ಸುಗಮವಾಗಿ ನಡೆಯಿತು. 

‌‌ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪದಾಧಿಕಾರಿಗಳು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅಣಕು ತಿಥಿ ಮಾಡಿದರು. ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಸಿರಿಂಜ್‌ಗಳಿಂದ ರಕ್ತ ತೆಗೆದು ರಸ್ತೆಗೆ ಚೆಲ್ಲಿ, ‘ರಕ್ತ ಕೊಟ್ಟೇವು, ಕಾವೇರಿ ಬಿಡೆವು’ ಎಂದು ಘೋಷಣೆ ಕೂಗಿದರು. 

ಕೈಯಿಂದ ಸಿರಿಂಜ್‌ನಲ್ಲಿ ರಕ್ತ ತೆಗೆದು ರಸ್ತೆಗೆ ಚೆಲ್ಲಿದ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ‘ರಕ್ತ ಕೊಟ್ಟೆವು ಕಾವೇರಿ ಬಿಡೆವು’ ಎಂದು ಘೋಷಣೆ ಕೂಗಿದರು
ಕೈಯಿಂದ ಸಿರಿಂಜ್‌ನಲ್ಲಿ ರಕ್ತ ತೆಗೆದು ರಸ್ತೆಗೆ ಚೆಲ್ಲಿದ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ‘ರಕ್ತ ಕೊಟ್ಟೆವು ಕಾವೇರಿ ಬಿಡೆವು’ ಎಂದು ಘೋಷಣೆ ಕೂಗಿದರು

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT