<p>ರಾಮನಗರ: ಚಾಮರಾಜ ನಗರದಿಂದ ಬೆಂಗಳೂರಿಗೆ ಧನಸಂಗರ್ ಸಮಿತಿ (ಅಂಬೇಡ್ಕರ್ ವಾದ) ಕೈಗೊಂಡಿರುವ ಜೈ ಭೀಮ್ ಸಂವಿಧಾನ ಜಾಗೃತಿ ಅಭಿಯಾನ ಭೀಮರಥ ಸೈಕಲ್ ಜಾಥಾ ಭಾನುವಾರ ರಾಮನಗರಕ್ಕೆ ಆಗಮಿಸಿತು.</p>.<p>ನಗರದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ ಸ್ವಾಮಿ ಹಾಗೂ ಮುಖಂಡರುಗಳ ಸೈಕಲ್ ಜಾಥಾ ಸದಸ್ಯರಿಗೆ ಎಳನೀರು ನೀಡಿ ಬರಮಾಡಿಕೊಂಡರು. ನೆತ್ತಿ ಸುಡುವ ಬಿಸಿಲನ್ನು ಲೆಕ್ಕಿಸದೆ ಸಂವಿಧಾನ ಕುರಿತು ಜಾಗೃತಿ ಮೂಡಿಸುವ ಕೆಲಸ ಶ್ಲಾಘನೀಯ ಎಂದು ಶಿವಕುಮಾರಸ್ವಾಮಿ ಶುಭ ಹಾರೈಸಿದರು.</p>.<p>ಸೋಮವಾರ ರಾಮನಗರದಿಂದ ಹೊರಡುವ ಜಾಥಾ ಬೆಂಗಳೂರಿನ ಫ್ರೀಡಂ ಪಾರ್ಕ್ ತಲುಪಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಲಿಂಗರಾಜು, ನಾರಾಯಣಪ್ಪ, ಬೈರಪ್ಪ, ಆಟೋ ಶಿವರಾಜು, ವೆಂಕಟೇಶ, ರಾಘವೇಂದ್ರ, ರಘು, ಹಾಗೂ ಕರ್ನಾಟಕ ರಾಜ್ಯ ಪೌರ ನೌಕರ ಸಂಘದ ರಾಜ್ಯ ಉಪಾಧ್ಯಕ್ಷ ಆರ್. ನಾಗರಾಜು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-14-981346197</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ಚಾಮರಾಜ ನಗರದಿಂದ ಬೆಂಗಳೂರಿಗೆ ಧನಸಂಗರ್ ಸಮಿತಿ (ಅಂಬೇಡ್ಕರ್ ವಾದ) ಕೈಗೊಂಡಿರುವ ಜೈ ಭೀಮ್ ಸಂವಿಧಾನ ಜಾಗೃತಿ ಅಭಿಯಾನ ಭೀಮರಥ ಸೈಕಲ್ ಜಾಥಾ ಭಾನುವಾರ ರಾಮನಗರಕ್ಕೆ ಆಗಮಿಸಿತು.</p>.<p>ನಗರದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ ಸ್ವಾಮಿ ಹಾಗೂ ಮುಖಂಡರುಗಳ ಸೈಕಲ್ ಜಾಥಾ ಸದಸ್ಯರಿಗೆ ಎಳನೀರು ನೀಡಿ ಬರಮಾಡಿಕೊಂಡರು. ನೆತ್ತಿ ಸುಡುವ ಬಿಸಿಲನ್ನು ಲೆಕ್ಕಿಸದೆ ಸಂವಿಧಾನ ಕುರಿತು ಜಾಗೃತಿ ಮೂಡಿಸುವ ಕೆಲಸ ಶ್ಲಾಘನೀಯ ಎಂದು ಶಿವಕುಮಾರಸ್ವಾಮಿ ಶುಭ ಹಾರೈಸಿದರು.</p>.<p>ಸೋಮವಾರ ರಾಮನಗರದಿಂದ ಹೊರಡುವ ಜಾಥಾ ಬೆಂಗಳೂರಿನ ಫ್ರೀಡಂ ಪಾರ್ಕ್ ತಲುಪಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಲಿಂಗರಾಜು, ನಾರಾಯಣಪ್ಪ, ಬೈರಪ್ಪ, ಆಟೋ ಶಿವರಾಜು, ವೆಂಕಟೇಶ, ರಾಘವೇಂದ್ರ, ರಘು, ಹಾಗೂ ಕರ್ನಾಟಕ ರಾಜ್ಯ ಪೌರ ನೌಕರ ಸಂಘದ ರಾಜ್ಯ ಉಪಾಧ್ಯಕ್ಷ ಆರ್. ನಾಗರಾಜು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-14-981346197</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>