<p><strong>ಬಿಡದಿ</strong>: ವಿದ್ಯಾರ್ಥಿಗಳು ಹೊಗಳಿಕೆಯನ್ನು ದೇವರಿಗೆ ಅರ್ಪಿಸಿ, ಲಕ್ಷ್ಯವನ್ನು ಗುರಿಯ ಕಡೆ ಇಡಬೇಕು ಎಂದು ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಬಿಡದಿ ಹೋಬಳಿ ಛತ್ರ ಗ್ರಾಮದಲ್ಲಿ ಹೊಸದಾಗಿ ಆರಂಭಿಸಲಾದ ಬಿಜಿಎಸ್ ಪಿಯು ಕಾಲೇಜನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಕ್ಕಳಿಗೆ ಉತ್ತಮ ವಿದ್ಯೆ, ಬುದ್ಧಿ ಕೊಡುವುದು ಪೋಷಕರ ಜವಾಬ್ದಾರಿ. ಚೆನ್ನಾಗಿ ಓದಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದು ಮಕ್ಕಳ ಕರ್ತವ್ಯ ಎಂದರು.</p>.<p>ಮನುಷ್ಯನಿಗೆ ವಿದ್ಯೆಗಿಂತ ದೊಡ್ಡದು ಏನೂ ಇಲ್ಲ. ವಿದ್ಯೆಯೊಂದಿದ್ದರೆ ಪ್ರಪಂಚದಲ್ಲಿ ಎಲ್ಲಿಗೆ ಹೋದರೂ ಉತ್ತಮ ಸ್ಥಾನಮಾನ ದೊರೆಯುತ್ತದೆ. ಮಕ್ಕಳಿಗೆ ಉತ್ತಮ ವಿದ್ಯೆ, ಸಂಸ್ಕೃತಿ ಮತ್ತು ಸಂಸ್ಕಾರ ಕಲಿಸಬೇಕು. ಮಕ್ಕಳಿಗೆ ವಿದ್ಯೆ ಕಡಿಮೆಯಾದರೂ ಸಂಸ್ಕಾರ ಕಡಿಮೆಯಾಗಬಾರದು ಎಂದು ಸೌಮ್ಯನಾಥ ಸ್ವಾಮೀಜಿ ಸಲಹೆ ನೀಡಿದರು.</p>.<p>ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಠಾಧೀಶರು ಸನ್ಮಾನ ಮಾಡಿದರು.</p>.<p>ಅನ್ನದಾನೇಶ್ವರನಾಥ ಸ್ವಾಮೀಜಿ, ಕರವೇ ಅಧ್ಯಕ್ಷ ನಾರಾಯಣಗೌಡ, ಡಾ.ಶಿವರಾಮ ರೆಡ್ಡಿ, ಮಧುಸೂದನ್, ಪ್ರಾಚಾರ್ಯರಾದ ಮುತ್ತುರಾಜು, ದೊಡ್ಡವೀರೆಗೌಡ, ಚೇತನ್, ಪ್ರದೀಪ್, ಮರಿಸ್ವಾಮಿ, ಉಮೇಶ್, ಬಿಂದಿಯಾ, ಚರಣ್ ಕುಮಾರ್, ಗೋಪಾಲ್ ವೇದಿಕೆಯಲ್ಲಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ</strong>: ವಿದ್ಯಾರ್ಥಿಗಳು ಹೊಗಳಿಕೆಯನ್ನು ದೇವರಿಗೆ ಅರ್ಪಿಸಿ, ಲಕ್ಷ್ಯವನ್ನು ಗುರಿಯ ಕಡೆ ಇಡಬೇಕು ಎಂದು ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಬಿಡದಿ ಹೋಬಳಿ ಛತ್ರ ಗ್ರಾಮದಲ್ಲಿ ಹೊಸದಾಗಿ ಆರಂಭಿಸಲಾದ ಬಿಜಿಎಸ್ ಪಿಯು ಕಾಲೇಜನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮಕ್ಕಳಿಗೆ ಉತ್ತಮ ವಿದ್ಯೆ, ಬುದ್ಧಿ ಕೊಡುವುದು ಪೋಷಕರ ಜವಾಬ್ದಾರಿ. ಚೆನ್ನಾಗಿ ಓದಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದು ಮಕ್ಕಳ ಕರ್ತವ್ಯ ಎಂದರು.</p>.<p>ಮನುಷ್ಯನಿಗೆ ವಿದ್ಯೆಗಿಂತ ದೊಡ್ಡದು ಏನೂ ಇಲ್ಲ. ವಿದ್ಯೆಯೊಂದಿದ್ದರೆ ಪ್ರಪಂಚದಲ್ಲಿ ಎಲ್ಲಿಗೆ ಹೋದರೂ ಉತ್ತಮ ಸ್ಥಾನಮಾನ ದೊರೆಯುತ್ತದೆ. ಮಕ್ಕಳಿಗೆ ಉತ್ತಮ ವಿದ್ಯೆ, ಸಂಸ್ಕೃತಿ ಮತ್ತು ಸಂಸ್ಕಾರ ಕಲಿಸಬೇಕು. ಮಕ್ಕಳಿಗೆ ವಿದ್ಯೆ ಕಡಿಮೆಯಾದರೂ ಸಂಸ್ಕಾರ ಕಡಿಮೆಯಾಗಬಾರದು ಎಂದು ಸೌಮ್ಯನಾಥ ಸ್ವಾಮೀಜಿ ಸಲಹೆ ನೀಡಿದರು.</p>.<p>ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಠಾಧೀಶರು ಸನ್ಮಾನ ಮಾಡಿದರು.</p>.<p>ಅನ್ನದಾನೇಶ್ವರನಾಥ ಸ್ವಾಮೀಜಿ, ಕರವೇ ಅಧ್ಯಕ್ಷ ನಾರಾಯಣಗೌಡ, ಡಾ.ಶಿವರಾಮ ರೆಡ್ಡಿ, ಮಧುಸೂದನ್, ಪ್ರಾಚಾರ್ಯರಾದ ಮುತ್ತುರಾಜು, ದೊಡ್ಡವೀರೆಗೌಡ, ಚೇತನ್, ಪ್ರದೀಪ್, ಮರಿಸ್ವಾಮಿ, ಉಮೇಶ್, ಬಿಂದಿಯಾ, ಚರಣ್ ಕುಮಾರ್, ಗೋಪಾಲ್ ವೇದಿಕೆಯಲ್ಲಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>