<p>ರಾಮನಗರ: ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ವಿರೋಧಿಸಿ ರೈತರು 443ನೇ ದಿನಗಳಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಬೆಂಬಲಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ವತಿಯಿಂದ ಜೂನ್ 6ರಂದು ಬಿಡದಿ-ಬೈರಮಂಗಲ ಚಲೋ ಬೃಹತ್ ಬೈಕ್ ಹಾಗೂ ಕಾರ್ ರ್ಯಾಲಿ ಆಯೋಜಿಸಲಾಗಿದೆ ಎಂದು ಪಕ್ಷ ರಾಜ್ಯ ಜಂಟಿ ಕಾರ್ಯದರ್ಶಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಎಲ್. ಜೀವನ್ ಹೇಳಿದರು.</p>.<p>ಪಕ್ಷದ ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಈ ರ್ಯಾಲಿ ನಡೆಯಲಿದೆ. ಬಿಡದಿಯಿಂದ ಪ್ರಾರಂಭವಾಗುವ ರ್ಯಾಲಿ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮಗಳಲ್ಲಿ ಸಂಚರಿಸಿ ರೈತರಿಗೆ ನೈತಿಕ ಬೆಂಬಲ ನೀಡಲಿದೆ ಎಂದು ನಗರದ ಚೈತ್ಯನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಪ್ರತಿಭಟನಾ ರ್ಯಾಲಿಯಲ್ಲಿ ನೂರಾರು ರೈತರು ಭಾಗವಹಿಸಲಿದ್ದಾರೆ. ನಾಡಿನ ಅನ್ನದಾತರ ಭೂಮಿಯನ್ನು ಉಳಿಸುವ ಈ ಬೃಹತ್ ಹೋರಾಟ ಕೇವಲ ಆ ಭಾಗದ ರೈತರದ್ದಲ್ಲ, ಇಡೀ ನಾಡಿನ ಜನರದ್ದಾಗಿದೆ. ಆದ್ದರಿಂದ, ಅನ್ನದಾತರ ಬೆನ್ನಿಗೆ ನಿಲ್ಲಲು ರಾಜ್ಯದ ಎಲ್ಲಾ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ದಲಿತ ಸಂಘಟನೆಗಳು ಹಾಗೂ ಪ್ರಜ್ಞಾವಂತ ನಾಗರಿಕರು ಪಕ್ಷಾತೀತವಾಗಿ ಬೆಂಬಲ ಸೂಚಿಸಬೇಕು’ ಎಂದು ಮನವಿ ಮಾಡಿದರು.</p>.<p>‘ರೈತ ವಿರೋಧಿಯಾಗಿರುವ ಹಾಗೂ ಸಾವಿರಾರು ಎಕರೆ ಕೃಷಿ ಮತ್ತು ತೋಟಗಾರಿಕೆ ಪ್ರದೇಶಕ್ಕೆ ಕಂಟಕಆಗಲಿರುವ ಟೌನ್ಶಿಪ್ ಯೋಜನೆಯನ್ನು ರಾಜ್ಯ ಸರ್ಕಾರ ಕೈ ಬಿಡಬೇಕು. ಸ್ವಾವಲಂಬಿಯಾಗಿ ಬದುಕುತ್ತಿರುವ ರೈತರನ್ನು ಹಾಗೂ ಕೃಷಿ ಭೂಮಿಯನ್ನು ರಕ್ಷಿಸಬೇಕು’ ಎಂದು ಒತ್ತಾಯಿಸಿದರು.</p>.<p>ಯೋಜನಾ ಪ್ರದೇಶದ ರೈತ ಕೃಷ್ಣಮೂರ್ತಿ, ಪಕ್ಷದ ಜಿಲ್ಲಾಧ್ಯಕ್ಷ ಗಂಗಾಧರ್ ಹಾಗೂ ತಾಲ್ಲೂಕು ಅಧ್ಯಕ್ಷ ಮುಸಾದಿಕ್ ಪಾಷ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-14-530656065</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ವಿರೋಧಿಸಿ ರೈತರು 443ನೇ ದಿನಗಳಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಬೆಂಬಲಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ವತಿಯಿಂದ ಜೂನ್ 6ರಂದು ಬಿಡದಿ-ಬೈರಮಂಗಲ ಚಲೋ ಬೃಹತ್ ಬೈಕ್ ಹಾಗೂ ಕಾರ್ ರ್ಯಾಲಿ ಆಯೋಜಿಸಲಾಗಿದೆ ಎಂದು ಪಕ್ಷ ರಾಜ್ಯ ಜಂಟಿ ಕಾರ್ಯದರ್ಶಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಎಲ್. ಜೀವನ್ ಹೇಳಿದರು.</p>.<p>ಪಕ್ಷದ ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಈ ರ್ಯಾಲಿ ನಡೆಯಲಿದೆ. ಬಿಡದಿಯಿಂದ ಪ್ರಾರಂಭವಾಗುವ ರ್ಯಾಲಿ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮಗಳಲ್ಲಿ ಸಂಚರಿಸಿ ರೈತರಿಗೆ ನೈತಿಕ ಬೆಂಬಲ ನೀಡಲಿದೆ ಎಂದು ನಗರದ ಚೈತ್ಯನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಪ್ರತಿಭಟನಾ ರ್ಯಾಲಿಯಲ್ಲಿ ನೂರಾರು ರೈತರು ಭಾಗವಹಿಸಲಿದ್ದಾರೆ. ನಾಡಿನ ಅನ್ನದಾತರ ಭೂಮಿಯನ್ನು ಉಳಿಸುವ ಈ ಬೃಹತ್ ಹೋರಾಟ ಕೇವಲ ಆ ಭಾಗದ ರೈತರದ್ದಲ್ಲ, ಇಡೀ ನಾಡಿನ ಜನರದ್ದಾಗಿದೆ. ಆದ್ದರಿಂದ, ಅನ್ನದಾತರ ಬೆನ್ನಿಗೆ ನಿಲ್ಲಲು ರಾಜ್ಯದ ಎಲ್ಲಾ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ದಲಿತ ಸಂಘಟನೆಗಳು ಹಾಗೂ ಪ್ರಜ್ಞಾವಂತ ನಾಗರಿಕರು ಪಕ್ಷಾತೀತವಾಗಿ ಬೆಂಬಲ ಸೂಚಿಸಬೇಕು’ ಎಂದು ಮನವಿ ಮಾಡಿದರು.</p>.<p>‘ರೈತ ವಿರೋಧಿಯಾಗಿರುವ ಹಾಗೂ ಸಾವಿರಾರು ಎಕರೆ ಕೃಷಿ ಮತ್ತು ತೋಟಗಾರಿಕೆ ಪ್ರದೇಶಕ್ಕೆ ಕಂಟಕಆಗಲಿರುವ ಟೌನ್ಶಿಪ್ ಯೋಜನೆಯನ್ನು ರಾಜ್ಯ ಸರ್ಕಾರ ಕೈ ಬಿಡಬೇಕು. ಸ್ವಾವಲಂಬಿಯಾಗಿ ಬದುಕುತ್ತಿರುವ ರೈತರನ್ನು ಹಾಗೂ ಕೃಷಿ ಭೂಮಿಯನ್ನು ರಕ್ಷಿಸಬೇಕು’ ಎಂದು ಒತ್ತಾಯಿಸಿದರು.</p>.<p>ಯೋಜನಾ ಪ್ರದೇಶದ ರೈತ ಕೃಷ್ಣಮೂರ್ತಿ, ಪಕ್ಷದ ಜಿಲ್ಲಾಧ್ಯಕ್ಷ ಗಂಗಾಧರ್ ಹಾಗೂ ತಾಲ್ಲೂಕು ಅಧ್ಯಕ್ಷ ಮುಸಾದಿಕ್ ಪಾಷ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-14-530656065</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>