<p>ಬಿಡದಿ: ಭಾರಿ ರಾಜಕೀಯ ಜಿದ್ದಾಜಿದ್ದಿನಿಂದ ಕುತೂಹಲ ಕೆರಳಿಸಿರುವ ಬಿಡದಿ ವಿವಿಧೋದ್ದೇಶ ರೈತ ಸೇವಾ ಸಹಕಾರ ಸಂಘದ ನಿರ್ದೇಶಕರ ಚುನಾವಣೆಗೆ ಭಾನುವಾರ ಶಾಂತಿಯುತವಾಗಿ ಮತದಾನ ನಡೆಯಿತು.</p>.<p>ಪಟ್ಟಣದ ಬಿಜಿಎಸ್ ಕಾಲೇಜಿನಲ್ಲಿ ಬೆಳಗ್ಗೆ 10ರಿಂದ ಮತದಾನ ಆರಂಭವಾಗಿ ಸಂಜೆ 4ಕ್ಕೆಮುಕ್ತಾಯವಾಯಿತು. ಮತದಾರರುಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡಿದರು.</p>.<p>ಹೆಸರಿಗಷ್ಟೆ ರೈತ ಸೇವಾ ಸಹಕಾರ ಸಂಘದ ಚುನಾವಣೆಯಾದರು, ರಾಜಕೀಯ ಪಕ್ಷಗಳು ಪ್ರತಿಷ್ಠೆಯಾಗಿ ತೆಗೆದುಕೊಂಡ ಕಾರಣ ಭಾರಿ ತುರುಸಿನಿಂದ ಕೂಡಿತ್ತು.</p>.<p>ಈ ಸೊಸೈಟಿ ಚುನಾವಣೆ ಶಾಸಕ ಎಚ್.ಸಿ.ಬಾಲಕೃಷ್ಣ ಹಾಗೂ ಮಾಜಿ ಶಾಸಕ ಎ.ಮಂಜುನಾಥ್ ನಡುವಿನ ಪ್ರತಿಷ್ಠೆ ಕಣವಾಗಿ ಮಾರ್ಪಟ್ಟಿದೆ. ಹಾಗಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಕಂಡರು ಮತ್ತು ಕಾರ್ಯಕರ್ತರು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.</p>.<p>ರೈತ ಸೇವಾ ಸಹಕಾರ ಸಂಘ ಆರಂಭದಿಂದಲೂ ಜೆಡಿಎಸ್ ಅಧಿಕಾರದಲ್ಲಿ ನಡೆಸುತ್ತಿತ್ತು. ಹಾಗಾಗಿ ಈ ಬಾರಿ ಸಹಕಾರ ಸಂಘವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಪಣತೊಟ್ಟಿದೆ. ಜೆಡಿಎಸ್ ಹಿಡಿತ ಬಿಟ್ಟು ಕೊಡದಿರಲು ಮಂಜುನಾಥ್ ಶತಾಯಗತಾಯ ಪ್ರಯತ್ನ ನಡೆಸಿದ್ದಾರೆ. ಬೆಳಗ್ಗೆಯಿಂದಲೇ ಮತದಾನ ಕೇಂದ್ರದ ಬಳಿ ಬಿಡಾರ ಹೂಡಿದ್ದ ಇಬ್ಬರೂ ಮತ ಹಾಕಲು ಬರುತ್ತಿದ್ದ ಮತದಾರರನ್ನ ಮನವೊಲಿಸುತ್ತಿದ್ದರು.</p>.<p>ಮತದಾನದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಡದಿ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದರು. ಮತ ಚೀಟಿ ತಂದವರನ್ನಷ್ಟೆ ಪೊಲೀಸರು ಮತದಾನ ಕೇಂದ್ರದ ಒಳಗೆ ಬೀಡುತ್ತಿದ್ದರು. ಉಳಿದ ಯಾವುದೇ ಕಾರ್ಯಕರ್ತರು ಮತ್ತು ನಾಯಕರನ್ನು ಮತದಾನ ಕೇಂದ್ರದೊಳಗೆ ಪ್ರವೇಶಿಸಲು ಬಿಡಲಿಲ್ಲ.</p>.<p>ಮಾಜಿ ಶಾಸಕ ಸಿ.ಎಂ.ಲಿಂಗಪ್ಪ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜ್, ಪುರಸಭಾ ಸದಸ್ಯರಾದ ಲೋಹೀತ್ ಕುಮಾರ್, ಹರಿಪ್ರಸಾದ್ ಹಾಗೂ ಮಾಜಿ ಪುರಸಭೆ ಸದಸ್ಯರು ಮತದಾನ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-14-1248949172</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಿಡದಿ: ಭಾರಿ ರಾಜಕೀಯ ಜಿದ್ದಾಜಿದ್ದಿನಿಂದ ಕುತೂಹಲ ಕೆರಳಿಸಿರುವ ಬಿಡದಿ ವಿವಿಧೋದ್ದೇಶ ರೈತ ಸೇವಾ ಸಹಕಾರ ಸಂಘದ ನಿರ್ದೇಶಕರ ಚುನಾವಣೆಗೆ ಭಾನುವಾರ ಶಾಂತಿಯುತವಾಗಿ ಮತದಾನ ನಡೆಯಿತು.</p>.<p>ಪಟ್ಟಣದ ಬಿಜಿಎಸ್ ಕಾಲೇಜಿನಲ್ಲಿ ಬೆಳಗ್ಗೆ 10ರಿಂದ ಮತದಾನ ಆರಂಭವಾಗಿ ಸಂಜೆ 4ಕ್ಕೆಮುಕ್ತಾಯವಾಯಿತು. ಮತದಾರರುಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡಿದರು.</p>.<p>ಹೆಸರಿಗಷ್ಟೆ ರೈತ ಸೇವಾ ಸಹಕಾರ ಸಂಘದ ಚುನಾವಣೆಯಾದರು, ರಾಜಕೀಯ ಪಕ್ಷಗಳು ಪ್ರತಿಷ್ಠೆಯಾಗಿ ತೆಗೆದುಕೊಂಡ ಕಾರಣ ಭಾರಿ ತುರುಸಿನಿಂದ ಕೂಡಿತ್ತು.</p>.<p>ಈ ಸೊಸೈಟಿ ಚುನಾವಣೆ ಶಾಸಕ ಎಚ್.ಸಿ.ಬಾಲಕೃಷ್ಣ ಹಾಗೂ ಮಾಜಿ ಶಾಸಕ ಎ.ಮಂಜುನಾಥ್ ನಡುವಿನ ಪ್ರತಿಷ್ಠೆ ಕಣವಾಗಿ ಮಾರ್ಪಟ್ಟಿದೆ. ಹಾಗಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಕಂಡರು ಮತ್ತು ಕಾರ್ಯಕರ್ತರು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.</p>.<p>ರೈತ ಸೇವಾ ಸಹಕಾರ ಸಂಘ ಆರಂಭದಿಂದಲೂ ಜೆಡಿಎಸ್ ಅಧಿಕಾರದಲ್ಲಿ ನಡೆಸುತ್ತಿತ್ತು. ಹಾಗಾಗಿ ಈ ಬಾರಿ ಸಹಕಾರ ಸಂಘವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಪಣತೊಟ್ಟಿದೆ. ಜೆಡಿಎಸ್ ಹಿಡಿತ ಬಿಟ್ಟು ಕೊಡದಿರಲು ಮಂಜುನಾಥ್ ಶತಾಯಗತಾಯ ಪ್ರಯತ್ನ ನಡೆಸಿದ್ದಾರೆ. ಬೆಳಗ್ಗೆಯಿಂದಲೇ ಮತದಾನ ಕೇಂದ್ರದ ಬಳಿ ಬಿಡಾರ ಹೂಡಿದ್ದ ಇಬ್ಬರೂ ಮತ ಹಾಕಲು ಬರುತ್ತಿದ್ದ ಮತದಾರರನ್ನ ಮನವೊಲಿಸುತ್ತಿದ್ದರು.</p>.<p>ಮತದಾನದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಡದಿ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದರು. ಮತ ಚೀಟಿ ತಂದವರನ್ನಷ್ಟೆ ಪೊಲೀಸರು ಮತದಾನ ಕೇಂದ್ರದ ಒಳಗೆ ಬೀಡುತ್ತಿದ್ದರು. ಉಳಿದ ಯಾವುದೇ ಕಾರ್ಯಕರ್ತರು ಮತ್ತು ನಾಯಕರನ್ನು ಮತದಾನ ಕೇಂದ್ರದೊಳಗೆ ಪ್ರವೇಶಿಸಲು ಬಿಡಲಿಲ್ಲ.</p>.<p>ಮಾಜಿ ಶಾಸಕ ಸಿ.ಎಂ.ಲಿಂಗಪ್ಪ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜ್, ಪುರಸಭಾ ಸದಸ್ಯರಾದ ಲೋಹೀತ್ ಕುಮಾರ್, ಹರಿಪ್ರಸಾದ್ ಹಾಗೂ ಮಾಜಿ ಪುರಸಭೆ ಸದಸ್ಯರು ಮತದಾನ ಮಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-14-1248949172</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>