<p><strong>ಬಿಡದಿ</strong>: ‘ನೂರಾರು ವರ್ಷಗಳಿಂದ ಕೃಷಿ ಮಾಡಿಕೊಂಡಿರುವ ಸಮೃದ್ಧ ಭೂಮಿಯನ್ನು ಬಂಜರು ಭೂಮಿ ಎಂದು ಸುಳ್ಳು ಹೇಳಿ ರೈತರಿಗೆ ದ್ರೋಹ ಮಾಡಲು ಸರ್ಕಾರ ಮುಂದಾಗಿದೆ’ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಬಿಡದಿ ಹೋಬಳಿಯ ಬೈರಮಂಗಳದಲ್ಲಿ ಬಿಡದಿ ಸ್ಮಾರ್ಟ್ ಸಿಟಿ ಯೋಜನೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದರು.</p>.<p>‘ಫಲವತ್ತಾದ ಭೂಮಿ ಬೆಂಗಳೂರು ಪಕ್ಕದಲ್ಲೇ ಬೆಟ್ಟಗುಡ್ಡಗಳಿಂದ ಕೂಡಿದ ಫಲವತ್ತಾದ ಜಮೀನು ಇರುವುದು ಅಚ್ಚರಿಯ ಸಂಗತಿ. ಇದಕ್ಕೂ ಮೊದಲು ಈ ಭಾಗದ ವಿವಿಧ ಗ್ರಾಮದ ಜಮೀನುಗಳಿಗೆ ಖುದ್ದು ಭೇಟಿ ನೀಡಿ ಮಾಹಿತಿ ಕಲೆಹಾಕಿ ಹಾಗೂ ವಿವಿಧ ಬೆಳೆಗಳನ್ನು ವೀಕ್ಷಣೆ ಮಾಡಿ ವರ್ಷಪೂರ್ತಿ ಬೆಳೆ ಬೆಳೆಯಲು ಪೂರಕವಾದ ವಾತಾವರಣ ಇಲ್ಲಿದೆ’ ಎಂದರು.</p>.<p>‘ಕಣ್ಣು, ಕಿವಿ, ಮೂಗು ಇಲ್ಲದ ನೀಚರು ಮಾತ್ರ ಈ ಪ್ರದೇಶವನ್ನು ಬಂಜರು ಭೂಮಿ ಎಂದು ಕರೆಯಲು ಸಾಧ್ಯ. ಅಭಿವೃದ್ಧಿಯ ಹೆಸರಿನಲ್ಲಿ ರೈತರ ಬದುಕಿನೊಂದಿಗೆ ಚೆಲ್ಲಾಟವಾಡಲಾಗುತ್ತಿದೆ’ ಎಂದು ಅವರು ಕಿಡಿಕಾರಿದರು.</p>.<p>ಬೈರಮಂಗಲ ಮತ್ತು ಕಂಚುಗಾರನಹಳ್ಳಿ ರೈತರ ಭೂ ಹಿತರಕ್ಷಣಾ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಕೆಆರ್ಎಸ್ ಪಕ್ಷ ಸಂಪೂರ್ಣ ಬೆಂಬಲ ಎಂದು ಘೋಷಿಸಿತು. ರೈತರ ಸಮ್ಮತಿಯಿಲ್ಲದೆ ಭೂಸ್ವಾಧೀನ ಪ್ರಕ್ರಿಯೆ ನಡೆಸಬಾರದು ಎಂದು ಒತ್ತಾಯಿಸಲಾಯಿತು.</p>.<p>ಜೀವನ್, ರಾಮಕೃಷ್ಣಯ್ಯ, ರೈತ ಸಂಘದ ಅಧ್ಯಕ್ಷ ರಾಮಣ್ಣ, ನಾಗರಾಜು, ಮುಖಂಡ ಹೊಸೂರು ಪ್ರಕಾಶ್, ರಾಧಾಕೃಷ್ಣ, ಅರಳಾಳುಸಂದ್ರ ಅಶ್ವಥ್ ಹಾಗೂ ಹೇಮಂತ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-14-1181672547</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ</strong>: ‘ನೂರಾರು ವರ್ಷಗಳಿಂದ ಕೃಷಿ ಮಾಡಿಕೊಂಡಿರುವ ಸಮೃದ್ಧ ಭೂಮಿಯನ್ನು ಬಂಜರು ಭೂಮಿ ಎಂದು ಸುಳ್ಳು ಹೇಳಿ ರೈತರಿಗೆ ದ್ರೋಹ ಮಾಡಲು ಸರ್ಕಾರ ಮುಂದಾಗಿದೆ’ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಬಿಡದಿ ಹೋಬಳಿಯ ಬೈರಮಂಗಳದಲ್ಲಿ ಬಿಡದಿ ಸ್ಮಾರ್ಟ್ ಸಿಟಿ ಯೋಜನೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದರು.</p>.<p>‘ಫಲವತ್ತಾದ ಭೂಮಿ ಬೆಂಗಳೂರು ಪಕ್ಕದಲ್ಲೇ ಬೆಟ್ಟಗುಡ್ಡಗಳಿಂದ ಕೂಡಿದ ಫಲವತ್ತಾದ ಜಮೀನು ಇರುವುದು ಅಚ್ಚರಿಯ ಸಂಗತಿ. ಇದಕ್ಕೂ ಮೊದಲು ಈ ಭಾಗದ ವಿವಿಧ ಗ್ರಾಮದ ಜಮೀನುಗಳಿಗೆ ಖುದ್ದು ಭೇಟಿ ನೀಡಿ ಮಾಹಿತಿ ಕಲೆಹಾಕಿ ಹಾಗೂ ವಿವಿಧ ಬೆಳೆಗಳನ್ನು ವೀಕ್ಷಣೆ ಮಾಡಿ ವರ್ಷಪೂರ್ತಿ ಬೆಳೆ ಬೆಳೆಯಲು ಪೂರಕವಾದ ವಾತಾವರಣ ಇಲ್ಲಿದೆ’ ಎಂದರು.</p>.<p>‘ಕಣ್ಣು, ಕಿವಿ, ಮೂಗು ಇಲ್ಲದ ನೀಚರು ಮಾತ್ರ ಈ ಪ್ರದೇಶವನ್ನು ಬಂಜರು ಭೂಮಿ ಎಂದು ಕರೆಯಲು ಸಾಧ್ಯ. ಅಭಿವೃದ್ಧಿಯ ಹೆಸರಿನಲ್ಲಿ ರೈತರ ಬದುಕಿನೊಂದಿಗೆ ಚೆಲ್ಲಾಟವಾಡಲಾಗುತ್ತಿದೆ’ ಎಂದು ಅವರು ಕಿಡಿಕಾರಿದರು.</p>.<p>ಬೈರಮಂಗಲ ಮತ್ತು ಕಂಚುಗಾರನಹಳ್ಳಿ ರೈತರ ಭೂ ಹಿತರಕ್ಷಣಾ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಕೆಆರ್ಎಸ್ ಪಕ್ಷ ಸಂಪೂರ್ಣ ಬೆಂಬಲ ಎಂದು ಘೋಷಿಸಿತು. ರೈತರ ಸಮ್ಮತಿಯಿಲ್ಲದೆ ಭೂಸ್ವಾಧೀನ ಪ್ರಕ್ರಿಯೆ ನಡೆಸಬಾರದು ಎಂದು ಒತ್ತಾಯಿಸಲಾಯಿತು.</p>.<p>ಜೀವನ್, ರಾಮಕೃಷ್ಣಯ್ಯ, ರೈತ ಸಂಘದ ಅಧ್ಯಕ್ಷ ರಾಮಣ್ಣ, ನಾಗರಾಜು, ಮುಖಂಡ ಹೊಸೂರು ಪ್ರಕಾಶ್, ರಾಧಾಕೃಷ್ಣ, ಅರಳಾಳುಸಂದ್ರ ಅಶ್ವಥ್ ಹಾಗೂ ಹೇಮಂತ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-14-1181672547</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>