<p><strong>ಕನಕಪುರ:</strong> ಬಿಡದಿ ಟೌನ್ಶಿಪ್ ವಿರುದ್ಧ ರೈತರು ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಟೌನ್ಶಿಪ್ ಯೋಜನೆಗೆ ರೈತರು ಒಪ್ಪಿಗೆ ನೀಡದೆ ವಿರೋಧ ಮಾಡುತ್ತಿರುವುದರಿಂದ ಯೋಜನೆ ಕೈಬಿಡುವುದು ಸೂಕ್ತ ಎಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಹೇಳಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸುತ್ತಮುತ್ತ ಮೂರು ಲಕ್ಷ ಅಪಾರ್ಟ್ಮೆಂಟ್ಗಳು ಖಾಲಿ ಇವೆ. ಕೆಂಪೇಗೌಡ, ವಿಶ್ವೇಶ್ವರಯ್ಯ ಬಡಾವಣೆಗಳಲ್ಲೂ ನಿವೇಶನಗಳು ಖಾಲಿ ಇವೆ. ಇಂತಹ ಪರಿಸ್ಥಿತಿಯಲ್ಲಿ ಟೌನ್ಶಿಪ್ ಅವಶ್ಯಕತೆ ಇಲ್ಲ ಎಂದರು.</p>.<p>7,600 ಎಕರೆ ಭೂಮಿ ರೇಷ್ಮೆ ಕೃಷಿ, ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಫಲವತ್ತಾದ ಭೂಮಿ. ಅದೇ ಅವರ ಜೀವನ. ಸರ್ಕಾರ ಕೊಡುವ ಪರಿಹಾರ ಶಾಶ್ವತವಲ್ಲ. ಅವರಿಗೆ ಅವರ ಭೂಮಿಯೆ ಶಾಶ್ವತ ಎಂದು ಹೇಳಿದರು.</p>.<p>ಸರ್ಕಾರಗಳು ರೈತರಿಗೆ ಬದುಕು ಕಟ್ಟಿಕೊಡಬೇಕೆ ಹೊರತು ಅವರ ಬದುಕನ್ನೇ ಕಿತ್ತುಕೊಳ್ಳಬಾರದು. ರೈತ ವಿರೋಧಿ ಯೋಜನೆಯನ್ನು ಕೂಡಲೇ ಕೈಬಿಡುವುದು ಸೂಕ್ತ ಎಂದು ತಿಳಿಸಿದರು.</p>.<p>ಜಾಗತಿಕ ಸಮಸ್ಯೆ: ತೈಲ ಮಿತ ಬಳಕೆ ಮತ್ತು ಚಿನ್ನ ಖರೀದಿ ಕಡಿಮೆ ಮಾಡಿ ಎಂಬ ಮೋದಿ ಮನವಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ಇದು ಜಾಗತಿಕಮಟ್ಟದ ಸಮಸ್ಯೆ ಎಂದು ಹೇಳಿದರು.</p>.<p>ಭಾರತಕ್ಕೆ ಶೇ 30ರಷ್ಟು ತೈಲ ಹಾರ್ಮೋಜ್ ಜಲಸಂಂಧಿ ಮೂಲಕವೇ ಪೂರೈಕೆಯಾಗುತ್ತದೆ. ಹಾರ್ಮೋಜ್ ಜಲಸಂಧಿ ಮುಚ್ಚಿರುವುದರಿಂದ ತೈಲ ಪೂರೈಕೆಗೆ ಸಮಸ್ಯೆಯಾಗಿದೆ. ಇದರಿಂದ ಮುಂಬರುವ ದಿನಗಳಲ್ಲಿ ಸಮಸ್ಯೆ ಇನ್ನೂ ಜಟಿಲವಾಗಲಿದೆ ಎಂದರು.</p>.<p>ಇಂತಹ ಬಿಕ್ಕಟ್ಟಿನ ಸಂದರ್ಭಗಳಲ್ಲಿ ತೈಲ ಮತ್ತು ಚಿನ್ನವನ್ನು ಹೆಚ್ಚು ಆಮದು ಮಾಡಿಕೊಳ್ಳುವುದರಿಂದ ಡಾಲರ್ ಎದುರು ರೂಪಾಯಿ ಅಪಮೌಲ್ಯವಾಗುತ್ತದೆ. ದೇಶದ ಹಿತ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವ ಪ್ರಧಾನಿ ಕ್ರಮವನ್ನು ಬೆಂಬಲಿಸಬೇಕು ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-14-1708343282</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಬಿಡದಿ ಟೌನ್ಶಿಪ್ ವಿರುದ್ಧ ರೈತರು ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಟೌನ್ಶಿಪ್ ಯೋಜನೆಗೆ ರೈತರು ಒಪ್ಪಿಗೆ ನೀಡದೆ ವಿರೋಧ ಮಾಡುತ್ತಿರುವುದರಿಂದ ಯೋಜನೆ ಕೈಬಿಡುವುದು ಸೂಕ್ತ ಎಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಹೇಳಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸುತ್ತಮುತ್ತ ಮೂರು ಲಕ್ಷ ಅಪಾರ್ಟ್ಮೆಂಟ್ಗಳು ಖಾಲಿ ಇವೆ. ಕೆಂಪೇಗೌಡ, ವಿಶ್ವೇಶ್ವರಯ್ಯ ಬಡಾವಣೆಗಳಲ್ಲೂ ನಿವೇಶನಗಳು ಖಾಲಿ ಇವೆ. ಇಂತಹ ಪರಿಸ್ಥಿತಿಯಲ್ಲಿ ಟೌನ್ಶಿಪ್ ಅವಶ್ಯಕತೆ ಇಲ್ಲ ಎಂದರು.</p>.<p>7,600 ಎಕರೆ ಭೂಮಿ ರೇಷ್ಮೆ ಕೃಷಿ, ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಫಲವತ್ತಾದ ಭೂಮಿ. ಅದೇ ಅವರ ಜೀವನ. ಸರ್ಕಾರ ಕೊಡುವ ಪರಿಹಾರ ಶಾಶ್ವತವಲ್ಲ. ಅವರಿಗೆ ಅವರ ಭೂಮಿಯೆ ಶಾಶ್ವತ ಎಂದು ಹೇಳಿದರು.</p>.<p>ಸರ್ಕಾರಗಳು ರೈತರಿಗೆ ಬದುಕು ಕಟ್ಟಿಕೊಡಬೇಕೆ ಹೊರತು ಅವರ ಬದುಕನ್ನೇ ಕಿತ್ತುಕೊಳ್ಳಬಾರದು. ರೈತ ವಿರೋಧಿ ಯೋಜನೆಯನ್ನು ಕೂಡಲೇ ಕೈಬಿಡುವುದು ಸೂಕ್ತ ಎಂದು ತಿಳಿಸಿದರು.</p>.<p>ಜಾಗತಿಕ ಸಮಸ್ಯೆ: ತೈಲ ಮಿತ ಬಳಕೆ ಮತ್ತು ಚಿನ್ನ ಖರೀದಿ ಕಡಿಮೆ ಮಾಡಿ ಎಂಬ ಮೋದಿ ಮನವಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ಇದು ಜಾಗತಿಕಮಟ್ಟದ ಸಮಸ್ಯೆ ಎಂದು ಹೇಳಿದರು.</p>.<p>ಭಾರತಕ್ಕೆ ಶೇ 30ರಷ್ಟು ತೈಲ ಹಾರ್ಮೋಜ್ ಜಲಸಂಂಧಿ ಮೂಲಕವೇ ಪೂರೈಕೆಯಾಗುತ್ತದೆ. ಹಾರ್ಮೋಜ್ ಜಲಸಂಧಿ ಮುಚ್ಚಿರುವುದರಿಂದ ತೈಲ ಪೂರೈಕೆಗೆ ಸಮಸ್ಯೆಯಾಗಿದೆ. ಇದರಿಂದ ಮುಂಬರುವ ದಿನಗಳಲ್ಲಿ ಸಮಸ್ಯೆ ಇನ್ನೂ ಜಟಿಲವಾಗಲಿದೆ ಎಂದರು.</p>.<p>ಇಂತಹ ಬಿಕ್ಕಟ್ಟಿನ ಸಂದರ್ಭಗಳಲ್ಲಿ ತೈಲ ಮತ್ತು ಚಿನ್ನವನ್ನು ಹೆಚ್ಚು ಆಮದು ಮಾಡಿಕೊಳ್ಳುವುದರಿಂದ ಡಾಲರ್ ಎದುರು ರೂಪಾಯಿ ಅಪಮೌಲ್ಯವಾಗುತ್ತದೆ. ದೇಶದ ಹಿತ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವ ಪ್ರಧಾನಿ ಕ್ರಮವನ್ನು ಬೆಂಬಲಿಸಬೇಕು ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-14-1708343282</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>