<p><strong>ರಾಮನಗರ</strong>: ಎರಡು ದಿನದ ಹಿಂದೆ ಕಾಣೆಯಾಗಿದ್ದ ಇಲ್ಲಿನ ವಿನಾಯಕ ನಗರದ ಬಾಲಕ ಕಿಶೋರ್ (14) ಶವ, ನಗರ ಹೊರವಲಯದ ದ್ಯಾವರಸೇಗೌಡನ ದೊಡ್ಡಿ ಬಳಿ ಅರ್ಕಾವತಿ ನದಿಯಲ್ಲಿ ಸೋಮವಾರ ಪತ್ತೆಯಾಗಿದೆ.</p>.<p>ಎಂಟನೇ ತರಗತಿಯಲ್ಲಿ ಓದುತ್ತಿದ್ದ ಕಿಶೋರ್ ಭಾನುವಾರ ರಜೆ ಇದ್ದಿದ್ದರಿಂದಾಗಿ ಸ್ನೇಹಿತರೊಂದಿಗೆ ಹೊರಗಡೆ ಆಟವಾಡಲು ಹೋಗಿದ್ದ. ಮಗ ಸಂಜೆಯಾದರೂ ಮನೆಗೆ ಬಾರದಿದ್ದರಿಂದ ಗಾಬರಿಗೊಂಡಿದ್ದ ಕುಟುಂಬದವರು, ಸ್ನೇಹಿತರು ಮತ್ತು ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದ್ದರು. ಆದರೆ, ಎಲ್ಲೂ ಆತನ ಸುಳಿವು ಸಿಕ್ಕಿರಲಿಲ್ಲ.</p>.<p>ಆಟವಾಡಲು ತೆರಳಿದ್ದ ಕಿಶೋರ್ ಎಲ್ಲೂ ಸಿಗದಿದ್ದರಿಂದ ಆತಂಕಗೊಂಡಿದ್ದ ಪೋಷಕರು, ಪೊಲೀಸ್ ಠಾಣೆಗೆ ಬಂದು ದೂರು ಕೊಟ್ಟಿದ್ದರು. ಆತನ ಸ್ನೇಹಿತರನ್ನು ವಿಚಾರಿಸಿದಾಗ ಅರ್ಕಾವತಿ ನದಿಯಲ್ಲಿ ಭಾನುವಾರ ಮಧ್ಯಾಹ್ನ ಈಜಲು ತೆರಳಿದ್ದಾಗ ಮುಳುಗಿ ಮೃತಪಟ್ಟಿರುವುದಾಗಿ ಬಾಯ್ಬಿಟ್ಟರು ಎಂದು ರಾಮನಗರ ಪುರ ಠಾಣೆ ಪೊಲೀಸರು ತಿಳಿಸಿದರು.</p>.<p>ಸ್ನೇಹಿತರೆಲ್ಲರೂ ಒಟ್ಟಿಗೆ ನೀರಿನಲ್ಲಿ ಈಜುತ್ತಿದ್ದಾಗ, ಕಿಶೋರ್ ನೀರಿನ ಸೆಳೆತಕ್ಕೆ ಸಿಲುಕು ಮುಳುಗತೊಡಗಿದ. ಅದನ್ನು ಕಂಡು ಗಾಬರಿಗೊಂಡ ಸ್ನೇಹಿತರು ಸ್ಥಳದಿಂದ ಕಾಲ್ಕಿತ್ತಿದ್ದರು. ಆತನ ಸಾವಿನ ವಿಷಯ ಗೊತ್ತಾದ ಬಳಿಕ, ನದಿಯಲ್ಲಿ ಹುಡುಕಾಟ ನಡೆಸಿ ಕಿಶೋರ್ ಶವವನ್ನು ಹೊರ ತೆಗೆಯಲಾಯಿತು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಎರಡು ದಿನದ ಹಿಂದೆ ಕಾಣೆಯಾಗಿದ್ದ ಇಲ್ಲಿನ ವಿನಾಯಕ ನಗರದ ಬಾಲಕ ಕಿಶೋರ್ (14) ಶವ, ನಗರ ಹೊರವಲಯದ ದ್ಯಾವರಸೇಗೌಡನ ದೊಡ್ಡಿ ಬಳಿ ಅರ್ಕಾವತಿ ನದಿಯಲ್ಲಿ ಸೋಮವಾರ ಪತ್ತೆಯಾಗಿದೆ.</p>.<p>ಎಂಟನೇ ತರಗತಿಯಲ್ಲಿ ಓದುತ್ತಿದ್ದ ಕಿಶೋರ್ ಭಾನುವಾರ ರಜೆ ಇದ್ದಿದ್ದರಿಂದಾಗಿ ಸ್ನೇಹಿತರೊಂದಿಗೆ ಹೊರಗಡೆ ಆಟವಾಡಲು ಹೋಗಿದ್ದ. ಮಗ ಸಂಜೆಯಾದರೂ ಮನೆಗೆ ಬಾರದಿದ್ದರಿಂದ ಗಾಬರಿಗೊಂಡಿದ್ದ ಕುಟುಂಬದವರು, ಸ್ನೇಹಿತರು ಮತ್ತು ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದ್ದರು. ಆದರೆ, ಎಲ್ಲೂ ಆತನ ಸುಳಿವು ಸಿಕ್ಕಿರಲಿಲ್ಲ.</p>.<p>ಆಟವಾಡಲು ತೆರಳಿದ್ದ ಕಿಶೋರ್ ಎಲ್ಲೂ ಸಿಗದಿದ್ದರಿಂದ ಆತಂಕಗೊಂಡಿದ್ದ ಪೋಷಕರು, ಪೊಲೀಸ್ ಠಾಣೆಗೆ ಬಂದು ದೂರು ಕೊಟ್ಟಿದ್ದರು. ಆತನ ಸ್ನೇಹಿತರನ್ನು ವಿಚಾರಿಸಿದಾಗ ಅರ್ಕಾವತಿ ನದಿಯಲ್ಲಿ ಭಾನುವಾರ ಮಧ್ಯಾಹ್ನ ಈಜಲು ತೆರಳಿದ್ದಾಗ ಮುಳುಗಿ ಮೃತಪಟ್ಟಿರುವುದಾಗಿ ಬಾಯ್ಬಿಟ್ಟರು ಎಂದು ರಾಮನಗರ ಪುರ ಠಾಣೆ ಪೊಲೀಸರು ತಿಳಿಸಿದರು.</p>.<p>ಸ್ನೇಹಿತರೆಲ್ಲರೂ ಒಟ್ಟಿಗೆ ನೀರಿನಲ್ಲಿ ಈಜುತ್ತಿದ್ದಾಗ, ಕಿಶೋರ್ ನೀರಿನ ಸೆಳೆತಕ್ಕೆ ಸಿಲುಕು ಮುಳುಗತೊಡಗಿದ. ಅದನ್ನು ಕಂಡು ಗಾಬರಿಗೊಂಡ ಸ್ನೇಹಿತರು ಸ್ಥಳದಿಂದ ಕಾಲ್ಕಿತ್ತಿದ್ದರು. ಆತನ ಸಾವಿನ ವಿಷಯ ಗೊತ್ತಾದ ಬಳಿಕ, ನದಿಯಲ್ಲಿ ಹುಡುಕಾಟ ನಡೆಸಿ ಕಿಶೋರ್ ಶವವನ್ನು ಹೊರ ತೆಗೆಯಲಾಯಿತು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>