<p><strong>ರಾಮನಗರ:</strong> ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನಲ್ಲಿ ಮೇ 11ರಿಂದ ಹತ್ತು ದಿನ ಸಾಮಾಜಿಕ, ಶೈಕ್ಷಣಿಕ ಹಾಗೂ ಆಧ್ಯಾತ್ಮಿಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.</p>.<p>ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ನಿತ್ಯ ಬೆಳಗ್ಗೆ 8ರಿಂದ ರಾತ್ರಿ 9ರವರೆಗೆ 8 ಮಾರ್ಗಗಳಲ್ಲಿ ಸ್ವಾಮೀಜಿ ಪ್ರವಾಸ ಮಾಡಲಿದ್ದಾರೆ ಎಂದು ಆದಿಚಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಅನ್ನದಾನೇಶ್ವರನಾಥ ಸ್ವಾಮೀಜಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಜಾನಪದ ಲೋಕದ ಬಳಿ ಇರುವ ಬಾಲಗಂಗಾಧರನಾಥ ಅಂಧರ ಶಾಲಾ ಸಭಾಂಗಣದಲ್ಲಿ ಮಾತನಾಡಿದ ಅವರು, ಸ್ವಾಮೀಜಿ ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಜಾಗೃತಿ ಅಭಿಯಾನ ಕೈಗೊಂಡಿದ್ದಾರೆ ಎಂದರು.</p>.<p>ಶ್ರೀಗಳು ಜ್ಞಾನ, ವಿಜ್ಞಾನ, ತಂತ್ರಜ್ಞಾನ, ಆಧ್ಯಾತ್ಮಿಕ ಮಾರ್ಗದಲ್ಲಿ ಸಮಾಜ ಮುನ್ನಡೆಸುವ ದೂರದೃಷ್ಟಿ ಹೊಂದಿದ್ದಾರೆ. ಮಠ ಸಮಾಜದ ಪ್ರಗತಿಗೆ ಶ್ರಮಿಸುತ್ತಿದೆ. ಅನ್ನ, ಅಕ್ಷರ, ಆರೋಗ್ಯ, ಆಶ್ರಯ, ಅರಣ್ಯ, ಆಕಳು, ಅನುಕಂಪ, ಅನುಬಂಧ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಕೊಡುಗೆ ನೀಡುತ್ತಾ ಬಂದಿದೆ ಎಂದರು.</p>.<p>ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿರುವ ಅಭಿಯಾನ ಸಮಾಜವನ್ನು ಜಾಗೃತಿಗೊಳಿಸುವ ಮೂಲಕ ಸರಿಯಾದ ಮಾರ್ಗದಲ್ಲಿ ನಡೆಯುವಂತೆ ಮಾರ್ಗದರ್ಶನ ನೀಡಲಿದೆ ಎಂದು ಅಭಿಯಾನದ ಉಸ್ತುವಾರಿ ಸಮಿತಿಯ ರಮೇಶ್ ಗೌಡ ತಿಳಿಸಿದರು.</p>.<p>ನಿಂಗೇಗೌಡ, ತಿಟ್ಟಮಾರನಹಳ್ಳಿ ಅಭಿಲಾಷ್, ಎಚ್.ಸಿ. ಜಯಮುತ್ತು, ಶಿವಮಾದು, ಎಲೇಕೇರಿ ರವೀಶ್, ರಮೇಶ್ ಗೌಡ, ಧರಣೇಶ್ ರಾಂಪುರ, ರಮ್ಯಾ ಸ್ವಾಮಿ ಗೌಡ, ಪಿ. ರವಿಕುಮಾರ್, ಶ್ಯಾನುಭೋಗನಹಳ್ಳಿ ರವಿ, ಮಠದ ಶಿವರಾಮು ಹಾಗೂ ಚನ್ನಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-14-896489340</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನಲ್ಲಿ ಮೇ 11ರಿಂದ ಹತ್ತು ದಿನ ಸಾಮಾಜಿಕ, ಶೈಕ್ಷಣಿಕ ಹಾಗೂ ಆಧ್ಯಾತ್ಮಿಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.</p>.<p>ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ನಿತ್ಯ ಬೆಳಗ್ಗೆ 8ರಿಂದ ರಾತ್ರಿ 9ರವರೆಗೆ 8 ಮಾರ್ಗಗಳಲ್ಲಿ ಸ್ವಾಮೀಜಿ ಪ್ರವಾಸ ಮಾಡಲಿದ್ದಾರೆ ಎಂದು ಆದಿಚಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಅನ್ನದಾನೇಶ್ವರನಾಥ ಸ್ವಾಮೀಜಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಜಾನಪದ ಲೋಕದ ಬಳಿ ಇರುವ ಬಾಲಗಂಗಾಧರನಾಥ ಅಂಧರ ಶಾಲಾ ಸಭಾಂಗಣದಲ್ಲಿ ಮಾತನಾಡಿದ ಅವರು, ಸ್ವಾಮೀಜಿ ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಜಾಗೃತಿ ಅಭಿಯಾನ ಕೈಗೊಂಡಿದ್ದಾರೆ ಎಂದರು.</p>.<p>ಶ್ರೀಗಳು ಜ್ಞಾನ, ವಿಜ್ಞಾನ, ತಂತ್ರಜ್ಞಾನ, ಆಧ್ಯಾತ್ಮಿಕ ಮಾರ್ಗದಲ್ಲಿ ಸಮಾಜ ಮುನ್ನಡೆಸುವ ದೂರದೃಷ್ಟಿ ಹೊಂದಿದ್ದಾರೆ. ಮಠ ಸಮಾಜದ ಪ್ರಗತಿಗೆ ಶ್ರಮಿಸುತ್ತಿದೆ. ಅನ್ನ, ಅಕ್ಷರ, ಆರೋಗ್ಯ, ಆಶ್ರಯ, ಅರಣ್ಯ, ಆಕಳು, ಅನುಕಂಪ, ಅನುಬಂಧ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಕೊಡುಗೆ ನೀಡುತ್ತಾ ಬಂದಿದೆ ಎಂದರು.</p>.<p>ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿರುವ ಅಭಿಯಾನ ಸಮಾಜವನ್ನು ಜಾಗೃತಿಗೊಳಿಸುವ ಮೂಲಕ ಸರಿಯಾದ ಮಾರ್ಗದಲ್ಲಿ ನಡೆಯುವಂತೆ ಮಾರ್ಗದರ್ಶನ ನೀಡಲಿದೆ ಎಂದು ಅಭಿಯಾನದ ಉಸ್ತುವಾರಿ ಸಮಿತಿಯ ರಮೇಶ್ ಗೌಡ ತಿಳಿಸಿದರು.</p>.<p>ನಿಂಗೇಗೌಡ, ತಿಟ್ಟಮಾರನಹಳ್ಳಿ ಅಭಿಲಾಷ್, ಎಚ್.ಸಿ. ಜಯಮುತ್ತು, ಶಿವಮಾದು, ಎಲೇಕೇರಿ ರವೀಶ್, ರಮೇಶ್ ಗೌಡ, ಧರಣೇಶ್ ರಾಂಪುರ, ರಮ್ಯಾ ಸ್ವಾಮಿ ಗೌಡ, ಪಿ. ರವಿಕುಮಾರ್, ಶ್ಯಾನುಭೋಗನಹಳ್ಳಿ ರವಿ, ಮಠದ ಶಿವರಾಮು ಹಾಗೂ ಚನ್ನಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-14-896489340</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>