<p><strong>ರಾಮನಗರ:</strong> ಚನ್ನಪಟ್ಟಣ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ (ಪಿಎಲ್ಐ) ಮತ್ತು ಗ್ರಾಮೀಣ ಅಂಚೆ ಜೀವ ವಿಮೆ (ಆರ್ಪಿಎಲ್ಐ) ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ (ಡೈರೆಕ್ಟ್ ಏಜೆಂಟ್) ನಿಯುಕ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.</p>.<p>ಅಭ್ಯರ್ಥಿಗಳು 10ನೇ ತರಗತಿ (ಎಸ್ಎಸ್ಎಲ್ಸಿ) ಉತ್ತೀರ್ಣರಾಗಿರಬೇಕು. 18 ವರ್ಷದೊಳಗಿರುಬೇಕು. ಅಭ್ಯರ್ಥಿಗಳು ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯವರಾಗಿರಬೇಕು. ಬೇರೆ ಯಾವುದೇ ವಿಮಾ ಸಂಸ್ಥೆ, ಕಂಪನಿ ಅಥವಾ ಸಂಘಗಳ ಪ್ರತಿನಿಧಿಯಾಗಿರಬಾರದು.</p>.<p>ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಪ್ರಮಾಣ ಪತ್ರ (ಎಸ್ಎಸ್ಎಲ್ಸಿ ಅಂಕಪಟ್ಟಿ), ಆಧಾರ್ ಕಾರ್ಡ್, ಪಾನ್ ಕಾರ್ಡ್ ಹಾಗೂ ಇತ್ತೀಚಿನ 5 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಮೇ 13ರಂದು ಬುಧವಾರ ಬೆಳಿಗ್ಗೆ 10 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಚನ್ನಪಟ್ಟಣ ಅಂಚೆ ವಿಭಾಗ, ಚನ್ನಪಟ್ಟಣ ಈ ಕಚೇರಿಗೆ ನೇರ ಸಂದರ್ಶನಕ್ಕಾಗಿ ಹಾಜರಾಗಬೇಕು.</p>.<p>ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಚೆ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ: 080-27251283/15 ಅಥವಾ 9986091640 ಸಂಪರ್ಕಿಸಬೇಕು ಎಂದು ಚನ್ನಪಟ್ಟಣ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-14-1935187751</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಚನ್ನಪಟ್ಟಣ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ (ಪಿಎಲ್ಐ) ಮತ್ತು ಗ್ರಾಮೀಣ ಅಂಚೆ ಜೀವ ವಿಮೆ (ಆರ್ಪಿಎಲ್ಐ) ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ (ಡೈರೆಕ್ಟ್ ಏಜೆಂಟ್) ನಿಯುಕ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.</p>.<p>ಅಭ್ಯರ್ಥಿಗಳು 10ನೇ ತರಗತಿ (ಎಸ್ಎಸ್ಎಲ್ಸಿ) ಉತ್ತೀರ್ಣರಾಗಿರಬೇಕು. 18 ವರ್ಷದೊಳಗಿರುಬೇಕು. ಅಭ್ಯರ್ಥಿಗಳು ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯವರಾಗಿರಬೇಕು. ಬೇರೆ ಯಾವುದೇ ವಿಮಾ ಸಂಸ್ಥೆ, ಕಂಪನಿ ಅಥವಾ ಸಂಘಗಳ ಪ್ರತಿನಿಧಿಯಾಗಿರಬಾರದು.</p>.<p>ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಪ್ರಮಾಣ ಪತ್ರ (ಎಸ್ಎಸ್ಎಲ್ಸಿ ಅಂಕಪಟ್ಟಿ), ಆಧಾರ್ ಕಾರ್ಡ್, ಪಾನ್ ಕಾರ್ಡ್ ಹಾಗೂ ಇತ್ತೀಚಿನ 5 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಮೇ 13ರಂದು ಬುಧವಾರ ಬೆಳಿಗ್ಗೆ 10 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಚನ್ನಪಟ್ಟಣ ಅಂಚೆ ವಿಭಾಗ, ಚನ್ನಪಟ್ಟಣ ಈ ಕಚೇರಿಗೆ ನೇರ ಸಂದರ್ಶನಕ್ಕಾಗಿ ಹಾಜರಾಗಬೇಕು.</p>.<p>ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಚೆ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ: 080-27251283/15 ಅಥವಾ 9986091640 ಸಂಪರ್ಕಿಸಬೇಕು ಎಂದು ಚನ್ನಪಟ್ಟಣ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-14-1935187751</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>