<p><strong>ರಾಮನಗರ:</strong> ನಗರದ ಶಾಂತಿಕೇತನ ಪಬ್ಲಿಕ್ ಶಾಲೆಯಲ್ಲಿ ರೋಟರಿ ರಾಮನಗರ ಸಹಯೋಗದಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.</p>.<p>ವಿದ್ಯಾರ್ಥಿಗಳು ಕೃಷ್ಣ ಮತ್ತು ರಾಧಾ ವೇಷದಲ್ಲಿ ಮಿಂಚಿದರು. ರಾಧಾಕೃಷ್ಣ ನೃತ್ಯ ಮತ್ತು ಕೃಷ್ಣನ ಬಾಲ್ಯಲೀಲೆಗಳ ಕುರಿತ ನಾಟಕ ಗಮನ ಸೆಳೆಯಿತು.</p>.<p>ಮಹಾಭಾರತ ಯುದ್ದದ ಸಂದರ್ಭದಲ್ಲಿ ಕೃಷ್ಣ ನೀಡಿದ ಉಪದೇಶ ಭಗವದ್ಗೀತೆಯಾಗಿದ್ದು, ಮನುಕುಲಕ್ಕೆ ದಾರಿ ತೋರುವ ಗ್ರಂಥವಾಗಿದೆ ಎಂದು ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಕಾರ್ಯದರ್ಶಿ ಆರ್. ಕುಮಾರಸ್ವಾಮಿ ಹೇಳಿದರು.</p>.<p>ಮಕ್ಕಳು ಚಿಕ್ಕಂದಿನಿಂದಲೇ ಪರರಂಪರೆ ಅರಿಯುವ ಮೂಲಕ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಮಾನವ ಸಂಪನ್ಮೂಲ ಮತ್ತು ಕಾರ್ಯತಂತ್ರ ಸಲಹೆಗಾರ್ತಿ ಅಶ್ವಿನಿ ಮಾಸ್ತಿ ಸಲಹೆ ನೀಡಿದರು.</p>.<p>ರಾಮನಗರ ರೋಟರಿ ಸಂಸ್ಥೆ ಅಧ್ಯಕ್ಷೆ ಸೌಮ್ಯ ಕುಮಾರ್, ಸದಸ್ಯರು, ಪ್ರಾಂಶುಪಾಲರು, ಸಿಬ್ಬಂದಿ ಹಾಗೂ ಪೋಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ನಗರದ ಶಾಂತಿಕೇತನ ಪಬ್ಲಿಕ್ ಶಾಲೆಯಲ್ಲಿ ರೋಟರಿ ರಾಮನಗರ ಸಹಯೋಗದಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.</p>.<p>ವಿದ್ಯಾರ್ಥಿಗಳು ಕೃಷ್ಣ ಮತ್ತು ರಾಧಾ ವೇಷದಲ್ಲಿ ಮಿಂಚಿದರು. ರಾಧಾಕೃಷ್ಣ ನೃತ್ಯ ಮತ್ತು ಕೃಷ್ಣನ ಬಾಲ್ಯಲೀಲೆಗಳ ಕುರಿತ ನಾಟಕ ಗಮನ ಸೆಳೆಯಿತು.</p>.<p>ಮಹಾಭಾರತ ಯುದ್ದದ ಸಂದರ್ಭದಲ್ಲಿ ಕೃಷ್ಣ ನೀಡಿದ ಉಪದೇಶ ಭಗವದ್ಗೀತೆಯಾಗಿದ್ದು, ಮನುಕುಲಕ್ಕೆ ದಾರಿ ತೋರುವ ಗ್ರಂಥವಾಗಿದೆ ಎಂದು ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಕಾರ್ಯದರ್ಶಿ ಆರ್. ಕುಮಾರಸ್ವಾಮಿ ಹೇಳಿದರು.</p>.<p>ಮಕ್ಕಳು ಚಿಕ್ಕಂದಿನಿಂದಲೇ ಪರರಂಪರೆ ಅರಿಯುವ ಮೂಲಕ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಮಾನವ ಸಂಪನ್ಮೂಲ ಮತ್ತು ಕಾರ್ಯತಂತ್ರ ಸಲಹೆಗಾರ್ತಿ ಅಶ್ವಿನಿ ಮಾಸ್ತಿ ಸಲಹೆ ನೀಡಿದರು.</p>.<p>ರಾಮನಗರ ರೋಟರಿ ಸಂಸ್ಥೆ ಅಧ್ಯಕ್ಷೆ ಸೌಮ್ಯ ಕುಮಾರ್, ಸದಸ್ಯರು, ಪ್ರಾಂಶುಪಾಲರು, ಸಿಬ್ಬಂದಿ ಹಾಗೂ ಪೋಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>