<p><strong>ರಾಮನಗರ:</strong> ‘ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿಯಡಿ (ಯುಐಡಿಎಫ್) ನಗರದ ವಿವಿಧೆಡೆ ಕೈಗೊಂಡಿರುವ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕಾಲಮಿತಿಯೊಳಗೆ ತ್ವರಿತವಾಗಿ ಮುಗಿಸಬೇಕು’ ಎಂದು ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಅವರು ಎಂಜಿನಿಯರ್ಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.</p>.<p>ನಗರದ ಮಾರುತಿ ನಗರ, ವಿವೇಕಾನಂದ ನಗರ, ಐಜೂರು, ಮಲ್ಲೇಶ್ವರ ಬಡಾವಣೆ ಸೇರಿದಂತೆ ವಿವಿಧ ವಾರ್ಡ್ಗಳ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ವಾರ್ಡ್ ಸದಸ್ಯರು, ಪೌರಾಯುಕ್ತರು, ಎಂಜಿನಿಯರ್ಗಳು ಹಾಗೂ ಸಂಬಂಧಿಸಿದ ಗುತ್ತಿಗೆದಾರರೊಂದಿಗೆ ಸೋಮವಾರ ಪರಿಶೀಲನೆ ನಡೆಸಿ ಅವರು ಮಾತನಾಡಿದರು.</p>.<p>‘ಸುಮಾರು ₹82 ಕೋಟಿ ಯುಐಡಿಎಫ್ ಅನುದಾನದಲ್ಲಿ ನಗರದಾದ್ಯಂತ ಕಾಂಕ್ರೀಟ್ ರಸ್ತೆ, ಚರಂಡಿ ಹಾಗೂ ತಡೆಗೋಡೆ ಕಾಮಗಾರಿಗಳನ್ನು ಎರಡು ಹಂತದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಎರಡೂ ಹಂತದಲ್ಲಿ ಇದುವರೆಗೆ ಶೇ 60ರಷ್ಟು ಕಾಮಗಾರಿಗಳು ಮುಗಿದಿವೆ. ಉಳಿದ ಶೇ 40ರಷ್ಟು ಕಾಮಗಾರಿಗಳನ್ನು ಬೇಗನೆ ಮುಗಿಸಬೇಕು’ ಎಂದರು.</p>.<p>‘ನಗರದಲ್ಲಿ ಒಮ್ಮೆಲೆ ಕಾಮಗಾರಿಗಳನ್ನು ಕೈಗೊಂಡರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಹಾಗಾಗಿ, ಒಂದು ಕಡೆ ಕಾಮಗಾರಿ ಮುಗಿದ ಬಳಿಕ ಮತ್ತೊಂದೆಡೆ ಕೆಲಸ ಕೈಗೆತ್ತಿಕೊಳ್ಳಲಾಗುತ್ತಿದೆ. ಕಾಮಗಾರಿ ಸಂದರ್ಭದಲ್ಲಿ ಜನರಿಗೆ ತೊಂದರೆಯಾಗಿದೆ. ಆದರೆ, ಅನಿವಾರ್ಯವಾಗಿ ಕೆಲ ದಿನಗಳು ಸಹಿಸಿಕೊಳ್ಳಬೇಕಿದೆ’ ಎಂದು ಹೇಳಿದರು.</p>.<p>‘ಎಲ್ಲೆಲ್ಲೆ ಒಳ ಚರಂಡಿ ಸಂಪರ್ಕ ವ್ಯವಸ್ಥೆ ಇದೆಯೊ, ಅಲ್ಲಿ ಮಾತ್ರ ರಸ್ತೆ ನಿರ್ಮಿಸಲಾಗುತ್ತಿದೆ. ಇಲ್ಲಿ ಕೇಬಲ್, ಪೈಪ್ ಸೇರಿದಂತೆ ಏನನ್ನಾದರೂ ಅಳವಡಿಸಬೇಕಾದರೆ, ಅದಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಒಟ್ಟಿನಲ್ಲಿ ಇನ್ಮುಂದೆ ಈ ರಸ್ತೆಗಳನ್ನು ಯಾವುದೇ ಕಾರಣಕ್ಕೂ ಅಗೆಯುವಂತಿರುವುದಿಲ್ಲ. ಒಳ ಚರಂಡಿ ಇಲ್ಲದಿರುವ ಕಡೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p><strong>ದೂರು:</strong> ರಸ್ತೆ ಮತ್ತು ಚರಂಡಿ ಕಾಮಗಾರಿಯಿಂದಾಗಿ ಆಗಿರುವ ವಿವಿಧ ಸಮಸ್ಯೆಗಳನ್ನು ಸಾರ್ವಜನಿಕರು ಅಧ್ಯಕ್ಷ ಶಶಿ ಮತ್ತು ಪೌರಾಯುಕ್ತರ ಗಮನಕ್ಕೆ ತಂದರು. ನೀರಿನ ಪೈಪ್ಲೈನ್ ಒಡೆದಿರುವುದು, ಚರಂಡಿಯಲ್ಲಿ ನೀರು ನಿಲ್ಲುತ್ತಿರುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ತೋಡಿಕೊಂಡರು. ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದರೂ, ಸ್ಪಂದಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸಾವಧಾನದಿಂದ ಎಲ್ಲರ ಸಮಸ್ಯೆಗಳನ್ನು ಆಲಿಸಿದ ಅಧ್ಯಕ್ಷರು ಮತ್ತು ಪೌರಾಯುಕ್ತರು, ಕಾಲಮಿತಿಯಲ್ಲಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು. ಸಮಸ್ಯೆಗಳನ್ನು ನೋಟ್ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಪಾಷ, ಸದಸ್ಯೆ ಪಾರ್ವತಮ್ಮ, ಎಂಜಿನಿಯರ್ಗಳಾದ ನಿರ್ಮಲಾ, ಪವಿತ್ರ, ಆರೋಗ್ಯ ನಿರೀಕ್ಷಕರ ವಿಜಯಕುಮಾರ್, ಕಂದಾಯ ನಿರೀಕ್ಷಕ ಆರ್. ನಾಗರಾಜು, ಮುಖಂಡರಾದ ಪ್ರವೀಣ್, ಲಕ್ಷ್ಮಿಕಾಂತ್, ದೇವರಾಜು, ರವಿ, ವಾಸು ಹಾಗೂ ಇತರರು ಇದ್ದರು.</p>.<div><blockquote>ಎಂಜಿನಿಯರ್ಗಳು ಹಾಗೂ ಗುತ್ತಿಗೆದಾರರು ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಳಪೆ ಕಾಮಗಾರಿ ಮಾಡಿರುವ ಕುರಿತು ದೂರು ಬಂದರೆ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು</blockquote><span class="attribution"> – ಕೆ. ಶೇಷಾದ್ರಿ ಶಶಿ ಅಧ್ಯಕ್ಷ ರಾಮನಗರ ನಗರಸಭೆ</span></div>.<p><strong>35 ಕಿ.ಮೀ. ಉದ್ದ ರಸ್ತೆ ನಿರ್ಮಾಣ ನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆ ಕಾಮಗಾರಿ ಹಿನ್ನೆಲೆಯಲ್ಲಿ ಎಲ್ಲಾ ರಸ್ತೆಗಳು ಹದಗೆಟ್ಟಿದ್ದವು. ಯೋಜನೆ ಪೂರ್ಣಗೊಂಡು ನೀರು ಪೂರೈಕೆ ಶುರುವಾಗುತ್ತಿದ್ದಂತೆ ನಗರಸಭೆಯು ₹82 ಕೋಟಿ ಯುಐಡಿಎಫ್ ಅನುದಾನದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣವನ್ನು ಕೈಗೆತ್ತಿಕೊಂಡಿತ್ತು. ಮೊದಲ ಹಂತದಲ್ಲಿ ಸುಮಾರು 35 ಕಿ.ಮೀ. ಉದ್ದದ ಕಾಂಕ್ರೀಟ್ ರಸ್ತೆ ಹಾಗೂ 8 ಕಿ.ಮೀ. ಉದ್ದದ ಚರಂಡಿ ನಿರ್ಮಾಣ ನಡೆದಿದೆ. ಇದೀಗ ಎರಡನೇ ಹಂತದ ಕಾಮಗಾರಿಗಳು ಶುರುವಾಗಿವೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ‘ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿಯಡಿ (ಯುಐಡಿಎಫ್) ನಗರದ ವಿವಿಧೆಡೆ ಕೈಗೊಂಡಿರುವ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕಾಲಮಿತಿಯೊಳಗೆ ತ್ವರಿತವಾಗಿ ಮುಗಿಸಬೇಕು’ ಎಂದು ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಅವರು ಎಂಜಿನಿಯರ್ಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.</p>.<p>ನಗರದ ಮಾರುತಿ ನಗರ, ವಿವೇಕಾನಂದ ನಗರ, ಐಜೂರು, ಮಲ್ಲೇಶ್ವರ ಬಡಾವಣೆ ಸೇರಿದಂತೆ ವಿವಿಧ ವಾರ್ಡ್ಗಳ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ವಾರ್ಡ್ ಸದಸ್ಯರು, ಪೌರಾಯುಕ್ತರು, ಎಂಜಿನಿಯರ್ಗಳು ಹಾಗೂ ಸಂಬಂಧಿಸಿದ ಗುತ್ತಿಗೆದಾರರೊಂದಿಗೆ ಸೋಮವಾರ ಪರಿಶೀಲನೆ ನಡೆಸಿ ಅವರು ಮಾತನಾಡಿದರು.</p>.<p>‘ಸುಮಾರು ₹82 ಕೋಟಿ ಯುಐಡಿಎಫ್ ಅನುದಾನದಲ್ಲಿ ನಗರದಾದ್ಯಂತ ಕಾಂಕ್ರೀಟ್ ರಸ್ತೆ, ಚರಂಡಿ ಹಾಗೂ ತಡೆಗೋಡೆ ಕಾಮಗಾರಿಗಳನ್ನು ಎರಡು ಹಂತದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಎರಡೂ ಹಂತದಲ್ಲಿ ಇದುವರೆಗೆ ಶೇ 60ರಷ್ಟು ಕಾಮಗಾರಿಗಳು ಮುಗಿದಿವೆ. ಉಳಿದ ಶೇ 40ರಷ್ಟು ಕಾಮಗಾರಿಗಳನ್ನು ಬೇಗನೆ ಮುಗಿಸಬೇಕು’ ಎಂದರು.</p>.<p>‘ನಗರದಲ್ಲಿ ಒಮ್ಮೆಲೆ ಕಾಮಗಾರಿಗಳನ್ನು ಕೈಗೊಂಡರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಹಾಗಾಗಿ, ಒಂದು ಕಡೆ ಕಾಮಗಾರಿ ಮುಗಿದ ಬಳಿಕ ಮತ್ತೊಂದೆಡೆ ಕೆಲಸ ಕೈಗೆತ್ತಿಕೊಳ್ಳಲಾಗುತ್ತಿದೆ. ಕಾಮಗಾರಿ ಸಂದರ್ಭದಲ್ಲಿ ಜನರಿಗೆ ತೊಂದರೆಯಾಗಿದೆ. ಆದರೆ, ಅನಿವಾರ್ಯವಾಗಿ ಕೆಲ ದಿನಗಳು ಸಹಿಸಿಕೊಳ್ಳಬೇಕಿದೆ’ ಎಂದು ಹೇಳಿದರು.</p>.<p>‘ಎಲ್ಲೆಲ್ಲೆ ಒಳ ಚರಂಡಿ ಸಂಪರ್ಕ ವ್ಯವಸ್ಥೆ ಇದೆಯೊ, ಅಲ್ಲಿ ಮಾತ್ರ ರಸ್ತೆ ನಿರ್ಮಿಸಲಾಗುತ್ತಿದೆ. ಇಲ್ಲಿ ಕೇಬಲ್, ಪೈಪ್ ಸೇರಿದಂತೆ ಏನನ್ನಾದರೂ ಅಳವಡಿಸಬೇಕಾದರೆ, ಅದಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಒಟ್ಟಿನಲ್ಲಿ ಇನ್ಮುಂದೆ ಈ ರಸ್ತೆಗಳನ್ನು ಯಾವುದೇ ಕಾರಣಕ್ಕೂ ಅಗೆಯುವಂತಿರುವುದಿಲ್ಲ. ಒಳ ಚರಂಡಿ ಇಲ್ಲದಿರುವ ಕಡೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p><strong>ದೂರು:</strong> ರಸ್ತೆ ಮತ್ತು ಚರಂಡಿ ಕಾಮಗಾರಿಯಿಂದಾಗಿ ಆಗಿರುವ ವಿವಿಧ ಸಮಸ್ಯೆಗಳನ್ನು ಸಾರ್ವಜನಿಕರು ಅಧ್ಯಕ್ಷ ಶಶಿ ಮತ್ತು ಪೌರಾಯುಕ್ತರ ಗಮನಕ್ಕೆ ತಂದರು. ನೀರಿನ ಪೈಪ್ಲೈನ್ ಒಡೆದಿರುವುದು, ಚರಂಡಿಯಲ್ಲಿ ನೀರು ನಿಲ್ಲುತ್ತಿರುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ತೋಡಿಕೊಂಡರು. ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದರೂ, ಸ್ಪಂದಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸಾವಧಾನದಿಂದ ಎಲ್ಲರ ಸಮಸ್ಯೆಗಳನ್ನು ಆಲಿಸಿದ ಅಧ್ಯಕ್ಷರು ಮತ್ತು ಪೌರಾಯುಕ್ತರು, ಕಾಲಮಿತಿಯಲ್ಲಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು. ಸಮಸ್ಯೆಗಳನ್ನು ನೋಟ್ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಪಾಷ, ಸದಸ್ಯೆ ಪಾರ್ವತಮ್ಮ, ಎಂಜಿನಿಯರ್ಗಳಾದ ನಿರ್ಮಲಾ, ಪವಿತ್ರ, ಆರೋಗ್ಯ ನಿರೀಕ್ಷಕರ ವಿಜಯಕುಮಾರ್, ಕಂದಾಯ ನಿರೀಕ್ಷಕ ಆರ್. ನಾಗರಾಜು, ಮುಖಂಡರಾದ ಪ್ರವೀಣ್, ಲಕ್ಷ್ಮಿಕಾಂತ್, ದೇವರಾಜು, ರವಿ, ವಾಸು ಹಾಗೂ ಇತರರು ಇದ್ದರು.</p>.<div><blockquote>ಎಂಜಿನಿಯರ್ಗಳು ಹಾಗೂ ಗುತ್ತಿಗೆದಾರರು ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಳಪೆ ಕಾಮಗಾರಿ ಮಾಡಿರುವ ಕುರಿತು ದೂರು ಬಂದರೆ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು</blockquote><span class="attribution"> – ಕೆ. ಶೇಷಾದ್ರಿ ಶಶಿ ಅಧ್ಯಕ್ಷ ರಾಮನಗರ ನಗರಸಭೆ</span></div>.<p><strong>35 ಕಿ.ಮೀ. ಉದ್ದ ರಸ್ತೆ ನಿರ್ಮಾಣ ನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆ ಕಾಮಗಾರಿ ಹಿನ್ನೆಲೆಯಲ್ಲಿ ಎಲ್ಲಾ ರಸ್ತೆಗಳು ಹದಗೆಟ್ಟಿದ್ದವು. ಯೋಜನೆ ಪೂರ್ಣಗೊಂಡು ನೀರು ಪೂರೈಕೆ ಶುರುವಾಗುತ್ತಿದ್ದಂತೆ ನಗರಸಭೆಯು ₹82 ಕೋಟಿ ಯುಐಡಿಎಫ್ ಅನುದಾನದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣವನ್ನು ಕೈಗೆತ್ತಿಕೊಂಡಿತ್ತು. ಮೊದಲ ಹಂತದಲ್ಲಿ ಸುಮಾರು 35 ಕಿ.ಮೀ. ಉದ್ದದ ಕಾಂಕ್ರೀಟ್ ರಸ್ತೆ ಹಾಗೂ 8 ಕಿ.ಮೀ. ಉದ್ದದ ಚರಂಡಿ ನಿರ್ಮಾಣ ನಡೆದಿದೆ. ಇದೀಗ ಎರಡನೇ ಹಂತದ ಕಾಮಗಾರಿಗಳು ಶುರುವಾಗಿವೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>