<p><strong>ರಾಮನಗರ</strong>: ‘ಹಿಂದಿನ ಬಿಜೆಪಿ ಸರ್ಕಾರವು ಮೀಸಲಾತಿ ಪ್ರಮಾಣವನ್ನು ಶೇ 56ಕ್ಕೆ ಹೆಚ್ಚಿಸಿರುವುದನ್ನು ಊರ್ಜಿತಗೊಳಿಸಬೇಕು. ಅದಕ್ಕಾಗಿ ಕೇಂದ್ರ ಸರ್ಕಾರ ಸಂವಿಧಾನದ 9ನೇ ಪರಿಚ್ಛೇದಕ್ಕೆ ತಿದ್ದುಪಡಿ ತರಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರವನ್ನು ಪ್ರತಿನಿಧಿಸುವ ರಾಜ್ಯದ ಎನ್ಡಿಎ ನಾಯಕರು ಒತ್ತಡ ಹೇರಬೇಕು’ ಎಂದು ಕಾಂಗ್ರೆಸ್ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಒತ್ತಾಯಿಸಿದರು.</p>.<p>‘ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗದ ಶಿಫಾರಸಿನಂತೆ ಎಸ್ಸಿ ಮೀಸಲಾತಿಯನ್ನು ಶೇ 15ರಿಂದ 17ಕ್ಕೆ, ಎಸ್ಟಿ ಮೀಸಲಾತಿಯನ್ನು ಶೇ 3ರಿಂದ 7ಕ್ಕೆ ಹಾಗೂ ಒಬಿಸಿ ಮೀಸಲಾತಿಯನ್ನು ಶೇ 32ಕ್ಕೆ ಏರಿಸಿದೆ. ಇದರಿಂದಾಗಿ ಮೀಸಲಾತಿ ಪ್ರಮಾಣ ಶೇ 50ರ ಗಡಿ ದಾಟಿ ಶೇ 56ಕ್ಕೆ ಏರಿಕೆಯಾಗಿದೆ’ ಎಂದು ನಗರದ ಚೈತನ್ಯ ಭವನದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾದ ಯುವ ಘಟಕ ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಮೀಸಲಾತಿ ಹೆಚ್ಚಳಕ್ಕೆ ವಿಧಾನಸಭೆ ಹಾಗೂ ವಿಧಾನ ಪರಿಷತ್ನಲ್ಲೂ ಸರ್ವಾನುಮತದಿಂದ ಅಂಗೀಕಾರ ಸಿಕ್ಕಿ ಕಾಯ್ದೆಯಾಗಿದೆ. ಆದರೆ, ಕೆಲವರು ಕೋರ್ಟ್ ಮೊರೆ ಹೋಗಿದ್ದರ ಪರಿಣಾಮವಾಗಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೀಗಾಗಿ, ಮೀಸಲಾತಿ ಹೆಚ್ಚಳದ ಸೌಲಭ್ಯ ಪರಿಶಿಷ್ಟರಿಗೆ ಸಿಕ್ಕಿಲ್ಲ. ಇದೀಗ ರಾಜ್ಯ ಸರ್ಕಾರ ಹಳೆ ಮೀಸಲಾತಿ ಪ್ರಮಾಣದಲ್ಲೇ ನೇಮಕಾತಿಗೆ ಮುಂದಾಗಿದೆ’ ಎಂದರು.</p>.<p>‘ಸಂವಿಧಾನದ ಪರಿಚ್ಛೇದ 9ಕ್ಕೆ ತಿದ್ದುಪಡಿ ತಂದು ಮೀಸಲಾತಿ ಹೆಚ್ಚಳಕ್ಕೆ ಸಿಂಧುತ್ವ ನೀಡುವಂತೆ ಹಿಂದೆಯೇ ನಾವು ಬಿಜೆಪಿ ಸರ್ಕಾರಕ್ಕೆ ಆಗ್ರಹಿಸಿದ್ದೆವು. ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಸರ್ಕಾರಕ್ಕೆ ಪತ್ರ ಕೂಡ ಬರೆದಿದ್ದರು. ಆದರೆ, ಕೇಂದ್ರ ಸರ್ಕಾರ ಅಸಹಕಾರ ತೋರಿತು’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಪಕ್ಕದ ತಮಿಳುನಾಡು ಸರ್ಕಾರ ಮೀಸಲಾತಿ ಪ್ರಮಾಣವನ್ನು ಶೇ 69ಕ್ಕೆ ಹೆಚ್ಚಿಸಿದೆ. ಸಂವಿಧಾನದ ಪರಿಚ್ಛೇದ 9ರ ವ್ಯಾಪ್ತಿಗೆ ಆ ವಿಷಯವನ್ನು ಸೇರಿಸಿರುವುದರಿಂದ ಮೀಸಲಾತಿಗೆ ರಕ್ಷಣೆ ಸಿಕ್ಕಿದೆ. ಕರ್ನಾಟಕದಲ್ಲಿ ಮೀಸಲಾತಿ ಹೆಚ್ಚಳ ಬಿಜೆಪಿ ಸರ್ಕಾರದ್ದೇ ಕೂಸಾಗಿದ್ದರೂ, ಕೇಂದ್ರ ಸರ್ಕಾರ ಅದನ್ನು ಊರ್ಜಿತಗೊಳಿಸಲು ನಿರ್ಲಕ್ಷ್ಯ ತೋರುತ್ತಿದೆ’ ಎಂದು ಕಿಡಿಕಾರಿದರು.</p>.<p>ಮಹಾಸಭಾ ಯುವ ಘಟಕದ ರಾಜ್ಯಾಧ್ಯಕ್ಷ ಟಿ.ಆರ್. ತುಳಸಿರಾಮ್, ಜಿಲ್ಲಾಧ್ಯಕ್ಷ ಅಂಜನಾಪುರ ವಾಸು, ಮುಖಂಡರಾದ ರಾಜಪ್ಪ, ಹನುಮಂತ, ಶ್ರೀರಾಮುಲು, ವೆಂಕಟಪ್ಪ, ಕೃಷ್ಣಮೂರ್ತಿ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-15-215523363</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ‘ಹಿಂದಿನ ಬಿಜೆಪಿ ಸರ್ಕಾರವು ಮೀಸಲಾತಿ ಪ್ರಮಾಣವನ್ನು ಶೇ 56ಕ್ಕೆ ಹೆಚ್ಚಿಸಿರುವುದನ್ನು ಊರ್ಜಿತಗೊಳಿಸಬೇಕು. ಅದಕ್ಕಾಗಿ ಕೇಂದ್ರ ಸರ್ಕಾರ ಸಂವಿಧಾನದ 9ನೇ ಪರಿಚ್ಛೇದಕ್ಕೆ ತಿದ್ದುಪಡಿ ತರಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರವನ್ನು ಪ್ರತಿನಿಧಿಸುವ ರಾಜ್ಯದ ಎನ್ಡಿಎ ನಾಯಕರು ಒತ್ತಡ ಹೇರಬೇಕು’ ಎಂದು ಕಾಂಗ್ರೆಸ್ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಒತ್ತಾಯಿಸಿದರು.</p>.<p>‘ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗದ ಶಿಫಾರಸಿನಂತೆ ಎಸ್ಸಿ ಮೀಸಲಾತಿಯನ್ನು ಶೇ 15ರಿಂದ 17ಕ್ಕೆ, ಎಸ್ಟಿ ಮೀಸಲಾತಿಯನ್ನು ಶೇ 3ರಿಂದ 7ಕ್ಕೆ ಹಾಗೂ ಒಬಿಸಿ ಮೀಸಲಾತಿಯನ್ನು ಶೇ 32ಕ್ಕೆ ಏರಿಸಿದೆ. ಇದರಿಂದಾಗಿ ಮೀಸಲಾತಿ ಪ್ರಮಾಣ ಶೇ 50ರ ಗಡಿ ದಾಟಿ ಶೇ 56ಕ್ಕೆ ಏರಿಕೆಯಾಗಿದೆ’ ಎಂದು ನಗರದ ಚೈತನ್ಯ ಭವನದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾದ ಯುವ ಘಟಕ ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಮೀಸಲಾತಿ ಹೆಚ್ಚಳಕ್ಕೆ ವಿಧಾನಸಭೆ ಹಾಗೂ ವಿಧಾನ ಪರಿಷತ್ನಲ್ಲೂ ಸರ್ವಾನುಮತದಿಂದ ಅಂಗೀಕಾರ ಸಿಕ್ಕಿ ಕಾಯ್ದೆಯಾಗಿದೆ. ಆದರೆ, ಕೆಲವರು ಕೋರ್ಟ್ ಮೊರೆ ಹೋಗಿದ್ದರ ಪರಿಣಾಮವಾಗಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೀಗಾಗಿ, ಮೀಸಲಾತಿ ಹೆಚ್ಚಳದ ಸೌಲಭ್ಯ ಪರಿಶಿಷ್ಟರಿಗೆ ಸಿಕ್ಕಿಲ್ಲ. ಇದೀಗ ರಾಜ್ಯ ಸರ್ಕಾರ ಹಳೆ ಮೀಸಲಾತಿ ಪ್ರಮಾಣದಲ್ಲೇ ನೇಮಕಾತಿಗೆ ಮುಂದಾಗಿದೆ’ ಎಂದರು.</p>.<p>‘ಸಂವಿಧಾನದ ಪರಿಚ್ಛೇದ 9ಕ್ಕೆ ತಿದ್ದುಪಡಿ ತಂದು ಮೀಸಲಾತಿ ಹೆಚ್ಚಳಕ್ಕೆ ಸಿಂಧುತ್ವ ನೀಡುವಂತೆ ಹಿಂದೆಯೇ ನಾವು ಬಿಜೆಪಿ ಸರ್ಕಾರಕ್ಕೆ ಆಗ್ರಹಿಸಿದ್ದೆವು. ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಸರ್ಕಾರಕ್ಕೆ ಪತ್ರ ಕೂಡ ಬರೆದಿದ್ದರು. ಆದರೆ, ಕೇಂದ್ರ ಸರ್ಕಾರ ಅಸಹಕಾರ ತೋರಿತು’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಪಕ್ಕದ ತಮಿಳುನಾಡು ಸರ್ಕಾರ ಮೀಸಲಾತಿ ಪ್ರಮಾಣವನ್ನು ಶೇ 69ಕ್ಕೆ ಹೆಚ್ಚಿಸಿದೆ. ಸಂವಿಧಾನದ ಪರಿಚ್ಛೇದ 9ರ ವ್ಯಾಪ್ತಿಗೆ ಆ ವಿಷಯವನ್ನು ಸೇರಿಸಿರುವುದರಿಂದ ಮೀಸಲಾತಿಗೆ ರಕ್ಷಣೆ ಸಿಕ್ಕಿದೆ. ಕರ್ನಾಟಕದಲ್ಲಿ ಮೀಸಲಾತಿ ಹೆಚ್ಚಳ ಬಿಜೆಪಿ ಸರ್ಕಾರದ್ದೇ ಕೂಸಾಗಿದ್ದರೂ, ಕೇಂದ್ರ ಸರ್ಕಾರ ಅದನ್ನು ಊರ್ಜಿತಗೊಳಿಸಲು ನಿರ್ಲಕ್ಷ್ಯ ತೋರುತ್ತಿದೆ’ ಎಂದು ಕಿಡಿಕಾರಿದರು.</p>.<p>ಮಹಾಸಭಾ ಯುವ ಘಟಕದ ರಾಜ್ಯಾಧ್ಯಕ್ಷ ಟಿ.ಆರ್. ತುಳಸಿರಾಮ್, ಜಿಲ್ಲಾಧ್ಯಕ್ಷ ಅಂಜನಾಪುರ ವಾಸು, ಮುಖಂಡರಾದ ರಾಜಪ್ಪ, ಹನುಮಂತ, ಶ್ರೀರಾಮುಲು, ವೆಂಕಟಪ್ಪ, ಕೃಷ್ಣಮೂರ್ತಿ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-15-215523363</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>