ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕನಕಪುರಕ್ಕೆ ಭೇಟಿ

Published 2 ಜೂನ್ 2023, 14:39 IST
Last Updated 2 ಜೂನ್ 2023, 14:39 IST
ಅಕ್ಷರ ಗಾತ್ರ

ಕನಕಪುರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕನಕಪುರಕ್ಕೆ ಜೂನ್‌ 3ರಂದು ಭೇಟಿ ನೀಡಿ ಪ್ರವಾಸ ಕೈಗೊಳ್ಳಲಿದ್ದಾರೆ. ಮೊದಲಿಗೆ ತಾಲ್ಲೂಕಿನ ಧಾರ್ಮಿಕ ಪ್ರಸಿದ್ಧ ಕಲ್ಲಹಳ್ಳಿ ಶ್ರೀನಿವಾಸ ದೇವಾಯಲಕ್ಕೆಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ.

ನಂತರ ಅಲ್ಲಿಂದ ಪ್ರವಾಸ ಪ್ರಾರಂಭಿಸಿ ಶಿವನಹಳ್ಳಿ, ಸಾತನೂರು, ದೊಡ್ಡಾಲಹಳ್ಳಿ, ಕೋಡಿಹಳ್ಳಿ, ಕನಕಪುರ ಟೌನ್‌ನಲ್ಲಿ ಪ್ರವಾಸ ಮುಗಿಸಿ ರಾತ್ರಿ ಬೆಂಗಳೂರಿಗೆ ತೆರಳಲಿದ್ದಾರೆ.

ಶಿವಕುಮಾರ್‌ ಕನಕಪುರಕ್ಕೆ ಉಪಮುಖ್ಯಮಂತ್ರಿ ಆಗಿ ಬರುತ್ತಿರುವುದರಿಂದ ತಾಲ್ಲೂಕಿನ ಜನರು ಸ್ವಾಗತಕ್ಕೆ ಸಕಲ ಸಿದ್ಧತೆ ನಡೆಸಿದ್ದಾರೆ.

ಕಲ್ಲಹಳ್ಳಿ ಗ್ರಾಮದಲ್ಲಿ ಸ್ವಾಗತಕ್ಕೆ ದೊಡ್ಡಮಟ್ಟದಲ್ಲಿ ತಯಾರಿ ನಡೆದಿದೆ. 1500 ಲಾಡು, ಭೋಜನದ ವ್ಯವಸ್ಥೆ, ಸಾರ್ವಜನಿಕವಾಗಿ ಮಾತನಾಡಲು ಬಹಿರಂಗ ವೇದಿಕೆ ‌ಸಿದ್ಧಗೊಳಿಸಲಾಗಿದೆ.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಪುರುಷೋತ್ತಮ್‌ ನೇತೃತ್ವದಲ್ಲಿ ಸ್ವಾಗತಕ್ಕೆ ಸಿದ್ಧತೆ ನಡೆದಿದೆ.  ಕಟೌಟ್‌, ಬ್ಯಾನರ್‌ ಅಳವಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT