<p><strong>ರಾಮನಗರ</strong>: ಕರ್ನಾಟಕ ಪ್ರವಾಸ ಕೈಗೊಂಡಿರುವ ನೆರೆಯ ತೆಲಂಗಾಣ ರಾಜ್ಯದ 44 ಪ್ರೊಬೆಷನರಿ ಜಿಲ್ಲಾಧಿಕಾರಿಗಳು ಶುಕ್ರವಾರ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರನ್ನು ಭೇಟಿ ಮಾಡಿ, ವೃತ್ತಿಗೆ ಸಂಬಂಧಿಸಿದಂತೆ ಮಾರ್ಗದರ್ಶನ ಪಡೆದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಈ ವೇಳೆ, ಜಿಲ್ಲೆಯಲ್ಲಿ ಕೈಗೊಂಡಿರುವ ಭೂ ದಾಖಲೆಗಳ ನಿರ್ವಹಣೆ, ನಗರ ಮತ್ತು ಗ್ರಾಮೀಣ ಪ್ರದೇಶಗಳ ಸಮೀಕ್ಷೆ, ಕಂದಾಯ ಮತ್ತು ನೋಂದಣಿ ಇಲಾಖೆಗಳ ಕಾರ್ಯನಿರ್ವಹಣೆ ಕುರಿತು ತರಬೇತಿ ನೀಡಲಾಯಿತು.</p>.<p>ಜಿಲ್ಲೆಯ ಭೂ ದಾಖಲೆಗಳ ನಿರ್ವಹಣೆಯಲ್ಲಿ ಅನುಸರಿಸಲಾಗುತ್ತಿರುವ ನೂತನ ವಿಧಾನಗಳು ಸೇರಿದಂತೆ ಜಿಲ್ಲೆಯ ಕಂದಾಯ ಇಲಾಖೆಗಳ ನಿರ್ವಹಣೆ, ಕಾರ್ಯವೈಖರಿ ಸಾರ್ವಜನಿಕರಿಗೆ ಅಧಿಕಾರಿಗಳು ಸ್ಪಂದಿಸಿ ಕಾಲ ಮಿತಿಯೊಳಗೆ ಅವರ ಕೆಲಸ ಕಾರ್ಯಗಳನ್ನು ನಿರ್ವಹಿಸುವ ಬಗ್ಗೆ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರು ಮಾರ್ಗದರ್ಶನ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ರಾಮನಗರ ತಹಶೀಲ್ದಾರ್ ತೇಜಸ್ವಿನಿ, ಉಪ ನೋಂದಣಾಧಿಕಾರಿ ಶ್ರೀದೇವಿ, ಡಿಡಿಎಲ್ಆರ್ ಹನುಮೇಗೌಡ, ಭೂಮಿ ಮೇಲ್ವಿಚಾರಣಾ ಕೋಶದ ಉಪ ತಹಶೀಲ್ದಾರ್ ಅರುಣ್ ಸಾಗರ್ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-14-1436584487</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಕರ್ನಾಟಕ ಪ್ರವಾಸ ಕೈಗೊಂಡಿರುವ ನೆರೆಯ ತೆಲಂಗಾಣ ರಾಜ್ಯದ 44 ಪ್ರೊಬೆಷನರಿ ಜಿಲ್ಲಾಧಿಕಾರಿಗಳು ಶುಕ್ರವಾರ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರನ್ನು ಭೇಟಿ ಮಾಡಿ, ವೃತ್ತಿಗೆ ಸಂಬಂಧಿಸಿದಂತೆ ಮಾರ್ಗದರ್ಶನ ಪಡೆದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಈ ವೇಳೆ, ಜಿಲ್ಲೆಯಲ್ಲಿ ಕೈಗೊಂಡಿರುವ ಭೂ ದಾಖಲೆಗಳ ನಿರ್ವಹಣೆ, ನಗರ ಮತ್ತು ಗ್ರಾಮೀಣ ಪ್ರದೇಶಗಳ ಸಮೀಕ್ಷೆ, ಕಂದಾಯ ಮತ್ತು ನೋಂದಣಿ ಇಲಾಖೆಗಳ ಕಾರ್ಯನಿರ್ವಹಣೆ ಕುರಿತು ತರಬೇತಿ ನೀಡಲಾಯಿತು.</p>.<p>ಜಿಲ್ಲೆಯ ಭೂ ದಾಖಲೆಗಳ ನಿರ್ವಹಣೆಯಲ್ಲಿ ಅನುಸರಿಸಲಾಗುತ್ತಿರುವ ನೂತನ ವಿಧಾನಗಳು ಸೇರಿದಂತೆ ಜಿಲ್ಲೆಯ ಕಂದಾಯ ಇಲಾಖೆಗಳ ನಿರ್ವಹಣೆ, ಕಾರ್ಯವೈಖರಿ ಸಾರ್ವಜನಿಕರಿಗೆ ಅಧಿಕಾರಿಗಳು ಸ್ಪಂದಿಸಿ ಕಾಲ ಮಿತಿಯೊಳಗೆ ಅವರ ಕೆಲಸ ಕಾರ್ಯಗಳನ್ನು ನಿರ್ವಹಿಸುವ ಬಗ್ಗೆ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರು ಮಾರ್ಗದರ್ಶನ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ರಾಮನಗರ ತಹಶೀಲ್ದಾರ್ ತೇಜಸ್ವಿನಿ, ಉಪ ನೋಂದಣಾಧಿಕಾರಿ ಶ್ರೀದೇವಿ, ಡಿಡಿಎಲ್ಆರ್ ಹನುಮೇಗೌಡ, ಭೂಮಿ ಮೇಲ್ವಿಚಾರಣಾ ಕೋಶದ ಉಪ ತಹಶೀಲ್ದಾರ್ ಅರುಣ್ ಸಾಗರ್ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-14-1436584487</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>