<p><strong>ರಾಮನಗರ:</strong> ‘ಜಿಲ್ಲಾ ಕೇಂದ್ರವಾದ ರಾಮನಗರದಲ್ಲಿ ಸುಸಜ್ಜಿತವಾದ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಿಸಬೇಕು ಎಂಬ ಒಂದೂವರೆ ದಶಕಗಳ ಕನಸು ನನಸಾಗುವ ದಿನಗಳು ದೂರವಿಲ್ಲ. ಅದಕ್ಕೆ ಇದ್ದ ಅಡೆತಡೆಗಳು ದೂರವಾಗಿವೆ. ನೂತನ ಸಂಕೀರ್ಣಕ್ಕೆ ಮುಂದಿನ ತಿಂಗಳಲ್ಲೇ ಶಂಕುಸ್ಥಾಪನೆ ನೆರವೇರಿಸೋಣ’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದರು.</p>.<p>ನಗರದ ವಕೀಲರ ಸಂಘದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕೋರ್ಟ್ ಸಂಕೀರ್ಣ ನಿರ್ಮಾಣಕ್ಕಾಗಿ ತಾಲ್ಲೂಕು ಪಂಚಾಯಿತಿ ಕಚೇರಿ ಸುಪರ್ದಿಯಲ್ಲಿದ್ದ 1 ಎಕರೆ 6 ಗುಂಟೆ ಜಮೀನಿನ ದಾಖಲೆಗಳನ್ನು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ಎಚ್. ಅಣ್ಣಯ್ಯನವರ ಅವರಿಗೆ ಹಸ್ತಾಂತರಿಸಿ ಅವರು ಮಾತನಾಡಿದರು.</p>.<p>‘ಶಂಕುಸ್ಥಾಪನೆ ಮಾಡಿದ ಒಂದೂವರೆ ವರ್ಷದಲ್ಲಿ ಭವ್ಯವಾದ ನ್ಯಾಯಾಲಯ ತಲೆ ಎತ್ತುವಂತೆ ಮಾಡಿ ಲೋಕಾರ್ಪಣೆ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡೋಣ. ಇದಕ್ಕೆ ಪೂರಕವಾಗಿ ನ್ಯಾಯಾಧೀಶರು ಹಾಗೂ ವಕೀಲರ ಸಂಘದವರು ಹೈಕೋರ್ಟ್ನಿಂದ ಅಗತ್ಯ ಅನುಮತಿ ಸೇರಿದಂತೆ ಇತರ ಪ್ರಕ್ರಿಯೆಗಳನ್ನು ಬೇಗನೆ ಮುಗಿಸಲು ತಯಾರಿ ಮಾಡಿಕೊಳ್ಳಬೇಕು’ ಎಂದರು.</p>.<p>‘ರಾಮನಗರ ಜಿಲ್ಲಾ ಕೇಂದ್ರವಾದರೂ ಇಲ್ಲಿರುವ ಕೋರ್ಟ್ ಸಂಕೀರ್ಣದಲ್ಲಿ ಜಿಲ್ಲಾ ನ್ಯಾಯಾಲಯಕ್ಕೆ ಇರಬೇಕಾದ ಅಗತ್ಯ ಮೂಲಸೌಕರ್ಯಗಳು ಇರಲಿಲ್ಲ. ಇದಕ್ಕೆ ಪರಿಹಾರವಾಗಿ ನೂತನ ಸಂಕೀರ್ಣ ನಿರ್ಮಾಣಕ್ಕೆ ನೆರವಾಗುವಂತೆ ವಕೀಲರ ಸಂಘದವರು ನನ್ನನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು’ ಎಂದು ತಿಳಿಸಿದರು.</p>.<p>‘ಸಂಘದ ಬೇಡಿಕೆಗೆ ಅನುಗುಣವಾಗಿ ಸಂಕೀರ್ಣ ನಿರ್ಮಾಣಕ್ಕಾಗಿ ಪಕ್ಕದ ತಾ.ಪಂ. ಜಾಗವನ್ನು ಹಸ್ತಾಂತರ ಮಾಡುವುದಕ್ಕೆ ಇದ್ದ ಎಲ್ಲಾ ರೀತಿಯ ಅಡೆತಡೆಗಳನ್ನು ನಿವಾರಿಸಿ, ಅಂತಿಮವಾಗಿ ಜಾಗದ ದಾಖಲೆಗಳನ್ನು ಪ್ರಧಾನ ನ್ಯಾಯಾಧೀಶರಿಗೆ ಹಸ್ತಾಂತರಿಸಲಾಗಿದೆ. ಜಾಗವನ್ನು ಕೋರ್ಟ್ಗೆ ನೀಡುವವರೆಗೆ ನಾನು ವಕೀಲರ ಸಂಘಕ್ಕೆ ಕಾಲಿಡುವುದಿಲ್ಲ ಎಂದು ಹೇಳಿದ್ದೆ. ಅದರಂತೆ ಮಾತು ಉಳಿಸಿಕೊಂಡಿದ್ದೇನೆ’ ಎಂದರು.</p>.<p>ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ಎಚ್. ಅಣ್ಣಯ್ಯನವರ ಮಾತನಾಡಿ, ‘ಜಿಲ್ಲಾ ಕೋರ್ಟ್ನಲ್ಲಿರುವ ಮೂಲಸೌಕರ್ಯಗಳ ಕೊರತೆಯನ್ನು ಶಾಸಕರು ಮನಗುಂಡು, ನೂತನ ಸಂಕೀರ್ಣಕ್ಕೆ ಈ ಜಾಗವನ್ನು ಒದಗಿಸುವ ಮೂಲಕ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿದ್ದಾರೆ’ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯಿತಿ ಸಿಇಒ ಅನ್ಮೋಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಸವಿತಾ ಪಿ.ಆರ್, ರಾಮನಗರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ. ಚೇತನ್ ಕುಮಾರ್, ನಗರಸಭೆ ಪೌರಾಯುಕ್ತ ಡಾ. ಜಯಣ್ಣ, ನಗರಸಭೆ ಸದಸ್ಯ ಬೈರೇಗೌಡ, ವಕೀಲರ ಸಂಘದ ಕಾರ್ಯದರ್ಶಿ ಜಯರಾಮು, ಖಜಾಂಚಿ ಜ್ಯೋತಿ, ಪ್ರಮುಖರಾದ ಶಿವಣ್ಣ, ಶ್ರೀವತ್ಸ, ತಿಮ್ಮೇಗೌಡ ಹಾಗೂ ಇತರರು ಇದ್ದರು.</p>.<p> <strong>ಕಡೆ ಗಳಿಗೆಯಲ್ಲಿ ಬಜೆಟ್ಗೆ ಸೇರಿಸಿದೆವು!</strong></p><p> ‘ಜಿಲ್ಲಾ ಕೇಂದ್ರವಾದ ರಾಮನಗರದಲ್ಲಿ ಸುಸಜ್ಜಿತ ನ್ಯಾಯಾಲಯ ನಿರ್ಮಾಣ ಮಾಡುವ ಕುರಿತು ಈ ಸಲದ ಬಜೆಟ್ನಲ್ಲಿ ಘೋಷಣೆ ಮಾಡಿಸಿದ್ದೇವೆ. ಬಜೆಟ್ ತಯಾರಿ ಬಹುತೇಕ ಮುಕ್ತಾಯದ ಹಂತದಲ್ಲಿತು. ಆಗ ವಕೀಲ ಸಂಘದವರು ಸಲ್ಲಿಸಿದ ಮನವಿ ಮೇರೆಗೆ ಕಡೆ ಗಳಿಗೆಯಲ್ಲಿ ಸಂಘದ ಬೇಡಿಕೆಯನ್ನು ಬಜೆಟ್ನಲ್ಲೇ ಸೇರಿಸಿ ಘೋಷಣೆಯಾಗುವಂತೆ ಮಾಡಿದ್ದೇವೆ’ ಎಂದು ಶಾಸಕ ಹುಸೇನ್ ಹೇಳಿದರು.</p>.<p><strong>ಕೋರ್ಟ್ಗಿದೆ 99 ವರ್ಷಗಳ ಇತಿಹಾಸ</strong></p><p> ‘ರಾಮನಗರ ನ್ಯಾಯಾಲಯಕ್ಕೆ 99 ವರ್ಷಗಳ ಇತಿಹಾಸವಿದೆ. ಮುಂದಿನ ವರ್ಷ ಇಲ್ಲಿನ ಕೋರ್ಟ್ಗೆ 100 ವರ್ಷಗಳನ್ನು ಪೂರೈಸಲಿದೆ. ಇಷ್ಟು ವರ್ಷಗಳ ಇತಿಹಾಸವಿರುವ ರಾಮನಗರ ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತ ಜಿಲ್ಲಾ ಕೋರ್ಟ್ ಸಂಕೀರ್ಣ ಇಲ್ಲವೆಂಬ ಕೂಗಿತ್ತು. ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಯತ್ನದಿಂದಾಗಿ ಅದು ನೀಗುವ ಕಾಲ ಕೂಡಿ ಬಂದಿದೆ. ಸಂಕೀರ್ಣಕ್ಕೆ ಅಗತ್ಯವಿರುವ ಭೂಮಿಯನ್ನು ಶಾಸಕರು ಇಂದು ನ್ಯಾಯಾಧೀಶರಿಗೆ ಹಸ್ತಾಂತರ ಮಾಡಿದ್ದಾರೆ. ಶೀಘ್ರದಲ್ಲೇ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆಗೆ ಅಗತ್ಯ ತಯಾರಿ ಮಾಡಿಕೊಳ್ಳಲಾಗುವುದು’ ಎಂದು ವಕೀಲರ ಸಂಘದ ಜಿಲ್ಲಾಧ್ಯಕ್ಷ ಕೆ. ಕೆಂಪಯ್ಯ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ‘ಜಿಲ್ಲಾ ಕೇಂದ್ರವಾದ ರಾಮನಗರದಲ್ಲಿ ಸುಸಜ್ಜಿತವಾದ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಿಸಬೇಕು ಎಂಬ ಒಂದೂವರೆ ದಶಕಗಳ ಕನಸು ನನಸಾಗುವ ದಿನಗಳು ದೂರವಿಲ್ಲ. ಅದಕ್ಕೆ ಇದ್ದ ಅಡೆತಡೆಗಳು ದೂರವಾಗಿವೆ. ನೂತನ ಸಂಕೀರ್ಣಕ್ಕೆ ಮುಂದಿನ ತಿಂಗಳಲ್ಲೇ ಶಂಕುಸ್ಥಾಪನೆ ನೆರವೇರಿಸೋಣ’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದರು.</p>.<p>ನಗರದ ವಕೀಲರ ಸಂಘದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕೋರ್ಟ್ ಸಂಕೀರ್ಣ ನಿರ್ಮಾಣಕ್ಕಾಗಿ ತಾಲ್ಲೂಕು ಪಂಚಾಯಿತಿ ಕಚೇರಿ ಸುಪರ್ದಿಯಲ್ಲಿದ್ದ 1 ಎಕರೆ 6 ಗುಂಟೆ ಜಮೀನಿನ ದಾಖಲೆಗಳನ್ನು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ಎಚ್. ಅಣ್ಣಯ್ಯನವರ ಅವರಿಗೆ ಹಸ್ತಾಂತರಿಸಿ ಅವರು ಮಾತನಾಡಿದರು.</p>.<p>‘ಶಂಕುಸ್ಥಾಪನೆ ಮಾಡಿದ ಒಂದೂವರೆ ವರ್ಷದಲ್ಲಿ ಭವ್ಯವಾದ ನ್ಯಾಯಾಲಯ ತಲೆ ಎತ್ತುವಂತೆ ಮಾಡಿ ಲೋಕಾರ್ಪಣೆ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡೋಣ. ಇದಕ್ಕೆ ಪೂರಕವಾಗಿ ನ್ಯಾಯಾಧೀಶರು ಹಾಗೂ ವಕೀಲರ ಸಂಘದವರು ಹೈಕೋರ್ಟ್ನಿಂದ ಅಗತ್ಯ ಅನುಮತಿ ಸೇರಿದಂತೆ ಇತರ ಪ್ರಕ್ರಿಯೆಗಳನ್ನು ಬೇಗನೆ ಮುಗಿಸಲು ತಯಾರಿ ಮಾಡಿಕೊಳ್ಳಬೇಕು’ ಎಂದರು.</p>.<p>‘ರಾಮನಗರ ಜಿಲ್ಲಾ ಕೇಂದ್ರವಾದರೂ ಇಲ್ಲಿರುವ ಕೋರ್ಟ್ ಸಂಕೀರ್ಣದಲ್ಲಿ ಜಿಲ್ಲಾ ನ್ಯಾಯಾಲಯಕ್ಕೆ ಇರಬೇಕಾದ ಅಗತ್ಯ ಮೂಲಸೌಕರ್ಯಗಳು ಇರಲಿಲ್ಲ. ಇದಕ್ಕೆ ಪರಿಹಾರವಾಗಿ ನೂತನ ಸಂಕೀರ್ಣ ನಿರ್ಮಾಣಕ್ಕೆ ನೆರವಾಗುವಂತೆ ವಕೀಲರ ಸಂಘದವರು ನನ್ನನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು’ ಎಂದು ತಿಳಿಸಿದರು.</p>.<p>‘ಸಂಘದ ಬೇಡಿಕೆಗೆ ಅನುಗುಣವಾಗಿ ಸಂಕೀರ್ಣ ನಿರ್ಮಾಣಕ್ಕಾಗಿ ಪಕ್ಕದ ತಾ.ಪಂ. ಜಾಗವನ್ನು ಹಸ್ತಾಂತರ ಮಾಡುವುದಕ್ಕೆ ಇದ್ದ ಎಲ್ಲಾ ರೀತಿಯ ಅಡೆತಡೆಗಳನ್ನು ನಿವಾರಿಸಿ, ಅಂತಿಮವಾಗಿ ಜಾಗದ ದಾಖಲೆಗಳನ್ನು ಪ್ರಧಾನ ನ್ಯಾಯಾಧೀಶರಿಗೆ ಹಸ್ತಾಂತರಿಸಲಾಗಿದೆ. ಜಾಗವನ್ನು ಕೋರ್ಟ್ಗೆ ನೀಡುವವರೆಗೆ ನಾನು ವಕೀಲರ ಸಂಘಕ್ಕೆ ಕಾಲಿಡುವುದಿಲ್ಲ ಎಂದು ಹೇಳಿದ್ದೆ. ಅದರಂತೆ ಮಾತು ಉಳಿಸಿಕೊಂಡಿದ್ದೇನೆ’ ಎಂದರು.</p>.<p>ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ಎಚ್. ಅಣ್ಣಯ್ಯನವರ ಮಾತನಾಡಿ, ‘ಜಿಲ್ಲಾ ಕೋರ್ಟ್ನಲ್ಲಿರುವ ಮೂಲಸೌಕರ್ಯಗಳ ಕೊರತೆಯನ್ನು ಶಾಸಕರು ಮನಗುಂಡು, ನೂತನ ಸಂಕೀರ್ಣಕ್ಕೆ ಈ ಜಾಗವನ್ನು ಒದಗಿಸುವ ಮೂಲಕ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿದ್ದಾರೆ’ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯಿತಿ ಸಿಇಒ ಅನ್ಮೋಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಸವಿತಾ ಪಿ.ಆರ್, ರಾಮನಗರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ. ಚೇತನ್ ಕುಮಾರ್, ನಗರಸಭೆ ಪೌರಾಯುಕ್ತ ಡಾ. ಜಯಣ್ಣ, ನಗರಸಭೆ ಸದಸ್ಯ ಬೈರೇಗೌಡ, ವಕೀಲರ ಸಂಘದ ಕಾರ್ಯದರ್ಶಿ ಜಯರಾಮು, ಖಜಾಂಚಿ ಜ್ಯೋತಿ, ಪ್ರಮುಖರಾದ ಶಿವಣ್ಣ, ಶ್ರೀವತ್ಸ, ತಿಮ್ಮೇಗೌಡ ಹಾಗೂ ಇತರರು ಇದ್ದರು.</p>.<p> <strong>ಕಡೆ ಗಳಿಗೆಯಲ್ಲಿ ಬಜೆಟ್ಗೆ ಸೇರಿಸಿದೆವು!</strong></p><p> ‘ಜಿಲ್ಲಾ ಕೇಂದ್ರವಾದ ರಾಮನಗರದಲ್ಲಿ ಸುಸಜ್ಜಿತ ನ್ಯಾಯಾಲಯ ನಿರ್ಮಾಣ ಮಾಡುವ ಕುರಿತು ಈ ಸಲದ ಬಜೆಟ್ನಲ್ಲಿ ಘೋಷಣೆ ಮಾಡಿಸಿದ್ದೇವೆ. ಬಜೆಟ್ ತಯಾರಿ ಬಹುತೇಕ ಮುಕ್ತಾಯದ ಹಂತದಲ್ಲಿತು. ಆಗ ವಕೀಲ ಸಂಘದವರು ಸಲ್ಲಿಸಿದ ಮನವಿ ಮೇರೆಗೆ ಕಡೆ ಗಳಿಗೆಯಲ್ಲಿ ಸಂಘದ ಬೇಡಿಕೆಯನ್ನು ಬಜೆಟ್ನಲ್ಲೇ ಸೇರಿಸಿ ಘೋಷಣೆಯಾಗುವಂತೆ ಮಾಡಿದ್ದೇವೆ’ ಎಂದು ಶಾಸಕ ಹುಸೇನ್ ಹೇಳಿದರು.</p>.<p><strong>ಕೋರ್ಟ್ಗಿದೆ 99 ವರ್ಷಗಳ ಇತಿಹಾಸ</strong></p><p> ‘ರಾಮನಗರ ನ್ಯಾಯಾಲಯಕ್ಕೆ 99 ವರ್ಷಗಳ ಇತಿಹಾಸವಿದೆ. ಮುಂದಿನ ವರ್ಷ ಇಲ್ಲಿನ ಕೋರ್ಟ್ಗೆ 100 ವರ್ಷಗಳನ್ನು ಪೂರೈಸಲಿದೆ. ಇಷ್ಟು ವರ್ಷಗಳ ಇತಿಹಾಸವಿರುವ ರಾಮನಗರ ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತ ಜಿಲ್ಲಾ ಕೋರ್ಟ್ ಸಂಕೀರ್ಣ ಇಲ್ಲವೆಂಬ ಕೂಗಿತ್ತು. ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಯತ್ನದಿಂದಾಗಿ ಅದು ನೀಗುವ ಕಾಲ ಕೂಡಿ ಬಂದಿದೆ. ಸಂಕೀರ್ಣಕ್ಕೆ ಅಗತ್ಯವಿರುವ ಭೂಮಿಯನ್ನು ಶಾಸಕರು ಇಂದು ನ್ಯಾಯಾಧೀಶರಿಗೆ ಹಸ್ತಾಂತರ ಮಾಡಿದ್ದಾರೆ. ಶೀಘ್ರದಲ್ಲೇ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆಗೆ ಅಗತ್ಯ ತಯಾರಿ ಮಾಡಿಕೊಳ್ಳಲಾಗುವುದು’ ಎಂದು ವಕೀಲರ ಸಂಘದ ಜಿಲ್ಲಾಧ್ಯಕ್ಷ ಕೆ. ಕೆಂಪಯ್ಯ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>