'ಲಾಕ್ ಡೌನ್ ಸಂದರ್ಭದಲ್ಲಿ ಜನರಿಗೆ ಔಷಧಗಳ ಕೊರತೆ ಉಂಟಾಗಬಹುದು. ಇದನ್ನು ಅರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಜನರಿಗೆ ಉಚಿತವಾಗಿ ಔಷಧ ವಿತರಣೆ ಕಾರ್ಯಕ್ರಮ ರೂಪಿಸಿದ್ದಾರೆ. ಈಗಾಗಲೇ ಇದರಿಂದ ಸಾವಿರಾರು ಜನರಿಗೆ ಅನುಕೂಲ ಆಗಿದೆ' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಆದರೆ ಇದು ಪಕ್ಷದ ಕಾರ್ಯಕ್ರಮ ಅಲ್ಲ ಎಂದೂ ಅವರು ಸ್ಪಷ್ಟನೆ ನೀಡಿದರು.