<p><strong>ರಾಮನಗರ</strong>: ಇಲ್ಲಿನ ನಗರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಇಲ್ಲಿಯವರೆಗೆ ಸುಮಾರು 5 ಸಾವಿರ ಇ-ಖಾತೆ ವಿತರಿಸಲಾಗಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.</p>.<p>ನಗರಸಭೆಯಲ್ಲಿ ಶುಕ್ರವಾರ ನಗರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಇ-ಖಾತಾ ಪ್ರಮಾಣಪತ್ರ ವಿತರಿಸಿ ಮಾತನಾಡಿದ ಅವರು, ಇ-ಖಾತೆ ಮಾಡಿಸಿಕೊಳ್ಳಲು ಈಗಾಗಲೇ ನಗರಸಭೆ ಸಾಕಷ್ಟು ಅರಿವು ಮೂಡಿಸಿದೆ. ವಾರ್ಡುವಾರು ಅಭಿಯಾನ ನಡೆಸುತ್ತಿದೆ. ಆದರೆ, ಕಳೆದ ಕೆಲವು ದಿನಗಳಿಂದ ತಾಂತ್ರಿಕ ಸಮಸ್ಯೆ, ರಜೆ ಕಾರಣ ಖಾತೆ ವಿತರಣೆ ವಿಳಂಬವಾಗುತ್ತಿದೆ. ಈ ಸಮಸ್ಯೆ ನಡುವೆಯೂ ಇಂದು 300ಕ್ಕೂ ಅಧಿಕ ಖಾತೆ ವಿತರಿಸಲಾಯಿತು. ಬಾಕಿ ಇರುವ ಅರ್ಜಿಗಳ ಇ–ಖಾತೆಯನ್ನು ಶೀಘ್ರ ವಿತರಿಸಲಾಗುವುದು ಎಂದರು.</p>.<p>ಇ-ಖಾತೆಗಳಿಗೆ ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಕೆಯಾಗಿವೆ. ಒತ್ತಡ ಹೆಚ್ಚಾಗಿದೆ. ರಜಾ ದಿನಗಳಲ್ಲಿಯೂ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಹಾಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸಂಪೂರ್ಣ ವಿಲೇವಾರಿ ಮಾಡಿ ನಂತರ ಮನೆ ಮನೆ ಇ –ಖಾತೆ ಅಭಿಯಾನ ಪುನಾರಂಭವಾಗಲಿದೆ. ಯಾರಬ್ ನಗರ, ಕೊತ್ತೀಪುರ, ಬಾಲಗೇರಿ ಬಡಾವಣೆಗಳಲ್ಲಿ ಶೀಘ್ರದಲ್ಲೇ ಅಭಿಯಾನ ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದರು.</p>.<p>ಬಿ ಖಾತೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿತ್ತು. ನಂತರ ಕೆಲ ದಿನ ಅರ್ಜಿ ಸ್ವೀಕಾರ ನಿಲ್ಲಿಸಲಾಗಿತ್ತು. ಇದೀಗ ಮತ್ತೆ ಬಿ ಖಾತೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ನಗರಸಭೆ ವ್ಯಾಪ್ತಿಯಲ್ಲಿ ಇನ್ನೂ 3 ರಿಂದ 4 ಸಾವಿರ ಬಿ ಖಾತೆ ಅರ್ಜಿ ಸಲ್ಲಿಕೆಯಾಗುವ ನಿರೀಕ್ಷೆ ಇದೆ. ಖಾತೆ ವಿಚಾರದಲ್ಲಿ ಅಥವಾ ನಗರಸಭೆಯ ಯಾವುದೇ ಕಾರ್ಯಕ್ಕೆ ನಾಗರಿಕರು ದಳ್ಳಾಳಿಗಳ ಮೊರೆ ಹೋಗದೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅರ್ಜಿ ಸಲ್ಲಿಸಿ. ಯಾವುದೇ ಸಮಸ್ಯೆಯಾದರೂ ಆಯುಕ್ತರನ್ನು ನೇರವಾಗಿ ಭೇಟಿಯಾಗಿ ಎಂದರು.</p>.<p>ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಆಯಿಷಾ ಬಾನು, ಆಯುಕ್ತ ಡಾ.ಜಯಣ್ಣ, ಮಾಜಿ ಅಧ್ಯಕ್ಷೆ ಪಾರ್ವತಮ್ಮ, ಸದಸ್ಯರಾದ ಸೋಮಶೇಖರ್ ಮಣಿ, ಅಜ್ಮತ್, ಆರೀಫ್, ನಿಜಾಮುದ್ದೀನ್ ಷರೀಷ್, ನರಸಿಂಹ, ಗೋವಿಂದರಾಜು, ಕಿರಣ್, ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಇಲ್ಲಿನ ನಗರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಇಲ್ಲಿಯವರೆಗೆ ಸುಮಾರು 5 ಸಾವಿರ ಇ-ಖಾತೆ ವಿತರಿಸಲಾಗಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.</p>.<p>ನಗರಸಭೆಯಲ್ಲಿ ಶುಕ್ರವಾರ ನಗರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಇ-ಖಾತಾ ಪ್ರಮಾಣಪತ್ರ ವಿತರಿಸಿ ಮಾತನಾಡಿದ ಅವರು, ಇ-ಖಾತೆ ಮಾಡಿಸಿಕೊಳ್ಳಲು ಈಗಾಗಲೇ ನಗರಸಭೆ ಸಾಕಷ್ಟು ಅರಿವು ಮೂಡಿಸಿದೆ. ವಾರ್ಡುವಾರು ಅಭಿಯಾನ ನಡೆಸುತ್ತಿದೆ. ಆದರೆ, ಕಳೆದ ಕೆಲವು ದಿನಗಳಿಂದ ತಾಂತ್ರಿಕ ಸಮಸ್ಯೆ, ರಜೆ ಕಾರಣ ಖಾತೆ ವಿತರಣೆ ವಿಳಂಬವಾಗುತ್ತಿದೆ. ಈ ಸಮಸ್ಯೆ ನಡುವೆಯೂ ಇಂದು 300ಕ್ಕೂ ಅಧಿಕ ಖಾತೆ ವಿತರಿಸಲಾಯಿತು. ಬಾಕಿ ಇರುವ ಅರ್ಜಿಗಳ ಇ–ಖಾತೆಯನ್ನು ಶೀಘ್ರ ವಿತರಿಸಲಾಗುವುದು ಎಂದರು.</p>.<p>ಇ-ಖಾತೆಗಳಿಗೆ ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಕೆಯಾಗಿವೆ. ಒತ್ತಡ ಹೆಚ್ಚಾಗಿದೆ. ರಜಾ ದಿನಗಳಲ್ಲಿಯೂ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಹಾಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸಂಪೂರ್ಣ ವಿಲೇವಾರಿ ಮಾಡಿ ನಂತರ ಮನೆ ಮನೆ ಇ –ಖಾತೆ ಅಭಿಯಾನ ಪುನಾರಂಭವಾಗಲಿದೆ. ಯಾರಬ್ ನಗರ, ಕೊತ್ತೀಪುರ, ಬಾಲಗೇರಿ ಬಡಾವಣೆಗಳಲ್ಲಿ ಶೀಘ್ರದಲ್ಲೇ ಅಭಿಯಾನ ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದರು.</p>.<p>ಬಿ ಖಾತೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿತ್ತು. ನಂತರ ಕೆಲ ದಿನ ಅರ್ಜಿ ಸ್ವೀಕಾರ ನಿಲ್ಲಿಸಲಾಗಿತ್ತು. ಇದೀಗ ಮತ್ತೆ ಬಿ ಖಾತೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ನಗರಸಭೆ ವ್ಯಾಪ್ತಿಯಲ್ಲಿ ಇನ್ನೂ 3 ರಿಂದ 4 ಸಾವಿರ ಬಿ ಖಾತೆ ಅರ್ಜಿ ಸಲ್ಲಿಕೆಯಾಗುವ ನಿರೀಕ್ಷೆ ಇದೆ. ಖಾತೆ ವಿಚಾರದಲ್ಲಿ ಅಥವಾ ನಗರಸಭೆಯ ಯಾವುದೇ ಕಾರ್ಯಕ್ಕೆ ನಾಗರಿಕರು ದಳ್ಳಾಳಿಗಳ ಮೊರೆ ಹೋಗದೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅರ್ಜಿ ಸಲ್ಲಿಸಿ. ಯಾವುದೇ ಸಮಸ್ಯೆಯಾದರೂ ಆಯುಕ್ತರನ್ನು ನೇರವಾಗಿ ಭೇಟಿಯಾಗಿ ಎಂದರು.</p>.<p>ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಆಯಿಷಾ ಬಾನು, ಆಯುಕ್ತ ಡಾ.ಜಯಣ್ಣ, ಮಾಜಿ ಅಧ್ಯಕ್ಷೆ ಪಾರ್ವತಮ್ಮ, ಸದಸ್ಯರಾದ ಸೋಮಶೇಖರ್ ಮಣಿ, ಅಜ್ಮತ್, ಆರೀಫ್, ನಿಜಾಮುದ್ದೀನ್ ಷರೀಷ್, ನರಸಿಂಹ, ಗೋವಿಂದರಾಜು, ಕಿರಣ್, ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>