ಈ ಭಾಗದಲ್ಲಿ ಕೆಲವು ದಿನಗಳಿಂದಲೂ ಆನೆಗಳ ದಾಳಿ ನಡೆಯುತ್ತಿದೆ. ಆಗಾಗ್ಗೆ ದಾಳಿ ಮಾಡುವ ಆನೆಗಳು ರೈತರ ತೆಂಗು, ಮಾವು, ಬಾಳೆ ಸೇರಿದಂತೆ ಇತರ ಬೆಳೆಗಳನ್ನು ನಾಶ ಮಾಡುತ್ತಿವೆ. ತೆಂಗಿನ ಕಲ್ಲು ಅರಣ್ಯ ಪ್ರದೇಶದಿಂದ ಬಂದಿರುವ ಈ ಆನೆಗಳು ರಾತ್ರಿ ವೇಳೆಯಲ್ಲಿ ದಾಳಿ ನಡೆಸುತ್ತಿದ್ದು, ರೈತರಿಗೆ ನುಂಗಲಾರದ ತುತ್ತಾಗಿದೆ.