<p><strong>ಚನ್ನಪಟ್ಟಣ: </strong>ತಾಲ್ಲೂಕಿನ ವಿರುಪಾಕ್ಷಿಪುರ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಗುರುವಾರ ರಾತ್ರಿ ತೆಂಗಿನ ತೋಟವೊಂದರ ಮೇಲೆ ದಾಳಿ ನಡೆಸಿ ಹತ್ತಕ್ಕೂ ಹೆಚ್ಚು ತೆಂಗಿನ ಸಸಿಗಳನ್ನು ಧ್ವಂಸ ಮಾಡಿವೆ.</p>.<p>ಗ್ರಾಮದ ವೆಂಕಟಶೆಟ್ಟಿ ಎಂಬುವರಿಗೆ ಈ ತೆಂಗಿನ ತೋಟ ಸೇರಿದೆ. ಇದರಿಂದ ಸಾವಿರಾರು ರೂಪಾಯಿ ನಷ್ಟವಾಗಿದೆ. ಮುಂದಿನ ವರ್ಷ ಫಸಲು ಬಿಡುವ ಹಂತದಲ್ಲಿದ್ದ ತೆಂಗಿನ ಸಸಿಗಳನ್ನು ಬುಡ ಸಮೇತ ಉರುಳಿಸಿವೆ. ಪಕ್ಕದಲ್ಲೇ ಇದ್ದ ಪಂಪ್ ಸೆಟ್ ಪೈಪ್ಗಳನ್ನು ಕಿತ್ತುಹಾಕಿದೆ.</p>.<p>ಈ ಭಾಗದಲ್ಲಿ ಕೆಲವು ದಿನಗಳಿಂದಲೂ ಆನೆಗಳ ದಾಳಿ ನಡೆಯುತ್ತಿದೆ. ಆಗಾಗ್ಗೆ ದಾಳಿ ಮಾಡುವ ಆನೆಗಳು ರೈತರ ತೆಂಗು, ಮಾವು, ಬಾಳೆ ಸೇರಿದಂತೆ ಇತರ ಬೆಳೆಗಳನ್ನು ನಾಶ ಮಾಡುತ್ತಿವೆ. ತೆಂಗಿನ ಕಲ್ಲು ಅರಣ್ಯ ಪ್ರದೇಶದಿಂದ ಬಂದಿರುವ ಈ ಆನೆಗಳು ರಾತ್ರಿ ವೇಳೆಯಲ್ಲಿ ದಾಳಿ ನಡೆಸುತ್ತಿದ್ದು, ರೈತರಿಗೆ ನುಂಗಲಾರದ ತುತ್ತಾಗಿದೆ.</p>.<p>ಅರಣ್ಯ ಇಲಾಖೆ ಆನೆಗಳನ್ನು ಕಾಡಿಗೆ ಓಡಿಸಬೇಕು ಹಾಗೂ ಬೆಳೆ ಕಳೆದುಕೊಂಡ ರೈತನಿಗೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ: </strong>ತಾಲ್ಲೂಕಿನ ವಿರುಪಾಕ್ಷಿಪುರ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಗುರುವಾರ ರಾತ್ರಿ ತೆಂಗಿನ ತೋಟವೊಂದರ ಮೇಲೆ ದಾಳಿ ನಡೆಸಿ ಹತ್ತಕ್ಕೂ ಹೆಚ್ಚು ತೆಂಗಿನ ಸಸಿಗಳನ್ನು ಧ್ವಂಸ ಮಾಡಿವೆ.</p>.<p>ಗ್ರಾಮದ ವೆಂಕಟಶೆಟ್ಟಿ ಎಂಬುವರಿಗೆ ಈ ತೆಂಗಿನ ತೋಟ ಸೇರಿದೆ. ಇದರಿಂದ ಸಾವಿರಾರು ರೂಪಾಯಿ ನಷ್ಟವಾಗಿದೆ. ಮುಂದಿನ ವರ್ಷ ಫಸಲು ಬಿಡುವ ಹಂತದಲ್ಲಿದ್ದ ತೆಂಗಿನ ಸಸಿಗಳನ್ನು ಬುಡ ಸಮೇತ ಉರುಳಿಸಿವೆ. ಪಕ್ಕದಲ್ಲೇ ಇದ್ದ ಪಂಪ್ ಸೆಟ್ ಪೈಪ್ಗಳನ್ನು ಕಿತ್ತುಹಾಕಿದೆ.</p>.<p>ಈ ಭಾಗದಲ್ಲಿ ಕೆಲವು ದಿನಗಳಿಂದಲೂ ಆನೆಗಳ ದಾಳಿ ನಡೆಯುತ್ತಿದೆ. ಆಗಾಗ್ಗೆ ದಾಳಿ ಮಾಡುವ ಆನೆಗಳು ರೈತರ ತೆಂಗು, ಮಾವು, ಬಾಳೆ ಸೇರಿದಂತೆ ಇತರ ಬೆಳೆಗಳನ್ನು ನಾಶ ಮಾಡುತ್ತಿವೆ. ತೆಂಗಿನ ಕಲ್ಲು ಅರಣ್ಯ ಪ್ರದೇಶದಿಂದ ಬಂದಿರುವ ಈ ಆನೆಗಳು ರಾತ್ರಿ ವೇಳೆಯಲ್ಲಿ ದಾಳಿ ನಡೆಸುತ್ತಿದ್ದು, ರೈತರಿಗೆ ನುಂಗಲಾರದ ತುತ್ತಾಗಿದೆ.</p>.<p>ಅರಣ್ಯ ಇಲಾಖೆ ಆನೆಗಳನ್ನು ಕಾಡಿಗೆ ಓಡಿಸಬೇಕು ಹಾಗೂ ಬೆಳೆ ಕಳೆದುಕೊಂಡ ರೈತನಿಗೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>