<p>ಚನ್ನಪಟ್ಟಣ: ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ವಿಪರೀತವಾಗಿದ್ದು, ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯುವ ಬಗ್ಗೆ ಭರವಸೆ ನೀಡಿದ್ದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ಶಾಸಕ ಸಿ.ಪಿ. ಯೋಗೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯದ ಅಂಚಿನಲ್ಲಿ ಟ್ರಂಚ್ ನಿರ್ಮಾಣ, ರೈಲ್ವೆ ಬ್ಯಾರಿಕೇಡ್ ಹಾಕುವುದಾಗಿ ಸಚಿವರು ಭರವಸೆ ನೀಡಿದ್ದರು. ಆದರೆ ಆ ಭರವಸೆ ಈಡೇರಿಸಲೇ ಇಲ್ಲ ಎಂದರು.</p>.<p>‘ಕಾಡಾನೆ ಹಾವಳಿ ಬಗ್ಗೆ ಮೂರರಿಂದ ನಾಲ್ಕು ಬಾರಿ ಖಂಡ್ರೆ ಅವರಿಗೆ ದೂರು ನೀಡಿದ್ದೇನೆ. ಇಲಾಖೆಯಿಂದ ಕ್ರಮ ವಹಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅರಣ್ಯದ ಅಂಚಿನಲ್ಲಿ ಟ್ರಂಚ್ ಹಾಗೂ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಆಗದಿದ್ದರೆ ಆನೆಗಳ ಹಾವಳಿ ತಪ್ಪುವುದಿಲ್ಲ. ಈ ಬಗ್ಗೆ ಮನವಿ ಮಾಡಿದ್ದರೂ ಕ್ರಮವಹಿಸದೆ ಇರುವುದು ನೋವಾಗಿದೆ. ನಮ್ಮ ಪ್ರಯತ್ನಕ್ಕೆ ಯಾವುದೇ ಫಲ ಸಿಗುತ್ತಿಲ್ಲ’ ಎಂದರು.</p>.<p>‘ಈ ವಿಷಯವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಮನಕ್ಕೆ ತರುತ್ತೇನೆ.ಸಚಿವ ಖಂಡ್ರೆ ಜೊತೆ ಶೀಘ್ರದಲ್ಲಿಯೇ ಕಾಡಾನೆ ಸಮಸ್ಯೆ ಬಗ್ಗೆ ವಿವರವಾಗಿ ಚರ್ಚಿಸುತ್ತೇನೆ. ಈ ಬಗ್ಗೆ ಕ್ಯಾಬಿನೆಟ್ನಲ್ಲಿ ತೀರ್ಮಾನ ಕೈಗೊಳ್ಳಲು ಮನವಿ ಮಾಡುತ್ತೇನೆ. ಕೇವಲ ಒಂದೆರಡು ಕಾಡಾನೆ ಸೆರೆಯಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯಬೇಕು’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-14-2058519844</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಪಟ್ಟಣ: ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ವಿಪರೀತವಾಗಿದ್ದು, ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯುವ ಬಗ್ಗೆ ಭರವಸೆ ನೀಡಿದ್ದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ಶಾಸಕ ಸಿ.ಪಿ. ಯೋಗೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯದ ಅಂಚಿನಲ್ಲಿ ಟ್ರಂಚ್ ನಿರ್ಮಾಣ, ರೈಲ್ವೆ ಬ್ಯಾರಿಕೇಡ್ ಹಾಕುವುದಾಗಿ ಸಚಿವರು ಭರವಸೆ ನೀಡಿದ್ದರು. ಆದರೆ ಆ ಭರವಸೆ ಈಡೇರಿಸಲೇ ಇಲ್ಲ ಎಂದರು.</p>.<p>‘ಕಾಡಾನೆ ಹಾವಳಿ ಬಗ್ಗೆ ಮೂರರಿಂದ ನಾಲ್ಕು ಬಾರಿ ಖಂಡ್ರೆ ಅವರಿಗೆ ದೂರು ನೀಡಿದ್ದೇನೆ. ಇಲಾಖೆಯಿಂದ ಕ್ರಮ ವಹಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅರಣ್ಯದ ಅಂಚಿನಲ್ಲಿ ಟ್ರಂಚ್ ಹಾಗೂ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಆಗದಿದ್ದರೆ ಆನೆಗಳ ಹಾವಳಿ ತಪ್ಪುವುದಿಲ್ಲ. ಈ ಬಗ್ಗೆ ಮನವಿ ಮಾಡಿದ್ದರೂ ಕ್ರಮವಹಿಸದೆ ಇರುವುದು ನೋವಾಗಿದೆ. ನಮ್ಮ ಪ್ರಯತ್ನಕ್ಕೆ ಯಾವುದೇ ಫಲ ಸಿಗುತ್ತಿಲ್ಲ’ ಎಂದರು.</p>.<p>‘ಈ ವಿಷಯವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗಮನಕ್ಕೆ ತರುತ್ತೇನೆ.ಸಚಿವ ಖಂಡ್ರೆ ಜೊತೆ ಶೀಘ್ರದಲ್ಲಿಯೇ ಕಾಡಾನೆ ಸಮಸ್ಯೆ ಬಗ್ಗೆ ವಿವರವಾಗಿ ಚರ್ಚಿಸುತ್ತೇನೆ. ಈ ಬಗ್ಗೆ ಕ್ಯಾಬಿನೆಟ್ನಲ್ಲಿ ತೀರ್ಮಾನ ಕೈಗೊಳ್ಳಲು ಮನವಿ ಮಾಡುತ್ತೇನೆ. ಕೇವಲ ಒಂದೆರಡು ಕಾಡಾನೆ ಸೆರೆಯಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯಬೇಕು’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-14-2058519844</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>