<p>ಕನಕಪುರ: ಬೆಂಗಳೂರು ಹೊರವಲಯದಲ್ಲಿ ನಿರ್ಮಾಣ ಆಗಲಿರುವ ಸೆಟಲೈಟ್ ರಿಂಗ್ ರೋಡ್ (ಎಸ್ಟಿಆರ್ಆರ್) ಯೋಜನೆಗೆ ಭೂಮಿ ಕೊಡುವುದಿಲ್ಲ. ಕೇಂದ್ರ ಸರ್ಕಾರವು ಈ ಯೋಜನೆಯನ್ನು ರದ್ದುಗೊಡಿಸಬೇಕೆಂದು ರೈತರು ಒತ್ತಾಯಿಸಿದ್ದಾರೆ.</p>.<p>ಶುಕ್ರವಾರ ಸಭೆ ನಡೆಸಿದ ಮುಖಂಡರು, ಬೆಂಗಳೂರು ಒತ್ತಡವನ್ನು ಕಡಿಮೆ ಮಾಡಿ ಸುಲಭ ಸಾರಿಗೆ ಸಂಪರ್ಕ ಕಲ್ಪಿಸಲು ಬೆಂಗಳೂರು ಹೊರವಲಯದಲ್ಲಿ ಎಸ್ಟಿಆರ್ಆರ್ ಯೋಜನೆಯು 2018ರಲ್ಲಿ ಜಾರಿಗೊಂಡು ಭೂಸ್ವಾಧೀನ ಮಾಡಿತು. ಇದುವರೆಗೂ ಯೋಜನೆ ಅನುಷ್ಠಾನಗೊಂಡಿಲ್ಲ ಎಂದು ರೈತರು ಆರೋಪಿಸಿದರು.</p>.<p>ಕೇಂದ್ರ ಸರ್ಕಾರ ಭಾರತ್ ಮಾಲಾ ಪರಿ ಯೋಜನೆಯಡಿ ಎಸ್ಟಿಆರ್ಆರ್ ಯೋಜನೆಗೆ ರೈತರ ಭೂಮಿ ಅತ್ಯಂತ ಕಡಿಮೆ ಮಾರುಕಟ್ಟೆ ಬೆಲೆಗೆ ಭೂಸ್ವಾಧೀನಪಡಿಸಿಕೊಂಡಿತು. ಆದರೆ, ಇದುವರೆಗೂ ಭೂ ಪರಿಹಾರ ನೀಡಿಲ್ಲ ಎಂದು ದೂರಿದರು.</p>.<p>ಸರ್ಕಾರ ಯೋಜನೆಯಡಿ ಸ್ವಾಧೀನಪಡಿಸಿಕೊಳ್ಳುತ್ತಿರುವ ಭೂಮಿ ಬೆಲೆಯು ಪ್ರಸ್ತುತ 1ಗುಂಟೆಗೆ ₹20ಲಕ್ಷ ಆಗಿದೆ. ಸರ್ಕಾರ ಎಕರೆಗೆ ₹20ಲಕ್ಷ ಪರಿಹಾರ ಘೋಷಣೆ ಮಾಡಿದ್ದು ಈಗ ಅದರಿಂದ ಒಂದು ಗುಂಟೆ ಜಮೀನು ಖರೀದಿ ಮಾಡಲು ಆಗುವುದಿಲ್ಲ. ಪರಿಹಾರ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಾ ಬಂದಿದ್ದೇವೆ. ಆದರೆ, ಏನು ಪ್ರಯೋಜನವಾಗಿಲ್ಲ ಎಂದರು.</p>.<p>ಈ ಯೋಜನೆಯ 288 ಕಿಲೋಮೀಟರ್ ಉದ್ದದ ರಸ್ತೆಯಲ್ಲಿ ಬೆಂಗಳೂರು ಉತ್ತರ ಭಾಗದಲ್ಲಿ ಯೋಜನೆ ಅನುಷ್ಠಾನಗೊಂಡಿದೆ. 120 ಕಿ.ಲೋ ಮೀಟರ್ ಕಾಮಗಾರಿ ಆಗಿದೆ. ದಕ್ಷಿಣ ಭಾಗದ ದಾಬಸ್ಪೇಟೆಯಿಂದ ಮಾಗಡಿ, ಕನಕಪುರ, ಹೊಸೂರು, ಆನೇಕಲ್ ಈ ಭಾಗದಲ್ಲಿ 168 ಕಿ.ಲೋ ಮೀಟರ್ ಕಾಮಗಾರಿ ಪ್ರಾರಂಭವಾಗಿಲ್ಲ ಎಂದು ದೂರಿದರು.</p>.<p>ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ, ಸಂಸದರಾದ ಸೋಮಣ್ಣ, ಡಾ. ಮಂಜುನಾಥ್ ಅವರಲ್ಲಿ ರೈತರ ಸಮಸ್ಯೆ ತಿಳಿಸಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಯೋಜನೆ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿದ್ದೇವೆ. ಆದರೂ, ಏನು ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಭೂಸ್ವಾಧೀನಕ್ಕೆ ಒಳಪಡುತ್ತಿರುವ ರೈತ ಮುಖಂಡರಾದ ಭರತ್ ಗೌಡ, ನಾರಾಯಣಗೌಡ, ಪುಟ್ಟಸ್ವಾಮಿ, ಶ್ರೀಧರ್, ಮನಮೋಹನ್, ಜಿ.ಎಸ್.ವೆಂಕಟೇಶ್, ಗೋಪಾಲ್ ಗೌಡ, ಶಿವಲಿಂಗಯ್ಯ ಸೇರಿದಂತೆ ನೂರಾರು ರೈತರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-14-1561509757</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ಬೆಂಗಳೂರು ಹೊರವಲಯದಲ್ಲಿ ನಿರ್ಮಾಣ ಆಗಲಿರುವ ಸೆಟಲೈಟ್ ರಿಂಗ್ ರೋಡ್ (ಎಸ್ಟಿಆರ್ಆರ್) ಯೋಜನೆಗೆ ಭೂಮಿ ಕೊಡುವುದಿಲ್ಲ. ಕೇಂದ್ರ ಸರ್ಕಾರವು ಈ ಯೋಜನೆಯನ್ನು ರದ್ದುಗೊಡಿಸಬೇಕೆಂದು ರೈತರು ಒತ್ತಾಯಿಸಿದ್ದಾರೆ.</p>.<p>ಶುಕ್ರವಾರ ಸಭೆ ನಡೆಸಿದ ಮುಖಂಡರು, ಬೆಂಗಳೂರು ಒತ್ತಡವನ್ನು ಕಡಿಮೆ ಮಾಡಿ ಸುಲಭ ಸಾರಿಗೆ ಸಂಪರ್ಕ ಕಲ್ಪಿಸಲು ಬೆಂಗಳೂರು ಹೊರವಲಯದಲ್ಲಿ ಎಸ್ಟಿಆರ್ಆರ್ ಯೋಜನೆಯು 2018ರಲ್ಲಿ ಜಾರಿಗೊಂಡು ಭೂಸ್ವಾಧೀನ ಮಾಡಿತು. ಇದುವರೆಗೂ ಯೋಜನೆ ಅನುಷ್ಠಾನಗೊಂಡಿಲ್ಲ ಎಂದು ರೈತರು ಆರೋಪಿಸಿದರು.</p>.<p>ಕೇಂದ್ರ ಸರ್ಕಾರ ಭಾರತ್ ಮಾಲಾ ಪರಿ ಯೋಜನೆಯಡಿ ಎಸ್ಟಿಆರ್ಆರ್ ಯೋಜನೆಗೆ ರೈತರ ಭೂಮಿ ಅತ್ಯಂತ ಕಡಿಮೆ ಮಾರುಕಟ್ಟೆ ಬೆಲೆಗೆ ಭೂಸ್ವಾಧೀನಪಡಿಸಿಕೊಂಡಿತು. ಆದರೆ, ಇದುವರೆಗೂ ಭೂ ಪರಿಹಾರ ನೀಡಿಲ್ಲ ಎಂದು ದೂರಿದರು.</p>.<p>ಸರ್ಕಾರ ಯೋಜನೆಯಡಿ ಸ್ವಾಧೀನಪಡಿಸಿಕೊಳ್ಳುತ್ತಿರುವ ಭೂಮಿ ಬೆಲೆಯು ಪ್ರಸ್ತುತ 1ಗುಂಟೆಗೆ ₹20ಲಕ್ಷ ಆಗಿದೆ. ಸರ್ಕಾರ ಎಕರೆಗೆ ₹20ಲಕ್ಷ ಪರಿಹಾರ ಘೋಷಣೆ ಮಾಡಿದ್ದು ಈಗ ಅದರಿಂದ ಒಂದು ಗುಂಟೆ ಜಮೀನು ಖರೀದಿ ಮಾಡಲು ಆಗುವುದಿಲ್ಲ. ಪರಿಹಾರ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಾ ಬಂದಿದ್ದೇವೆ. ಆದರೆ, ಏನು ಪ್ರಯೋಜನವಾಗಿಲ್ಲ ಎಂದರು.</p>.<p>ಈ ಯೋಜನೆಯ 288 ಕಿಲೋಮೀಟರ್ ಉದ್ದದ ರಸ್ತೆಯಲ್ಲಿ ಬೆಂಗಳೂರು ಉತ್ತರ ಭಾಗದಲ್ಲಿ ಯೋಜನೆ ಅನುಷ್ಠಾನಗೊಂಡಿದೆ. 120 ಕಿ.ಲೋ ಮೀಟರ್ ಕಾಮಗಾರಿ ಆಗಿದೆ. ದಕ್ಷಿಣ ಭಾಗದ ದಾಬಸ್ಪೇಟೆಯಿಂದ ಮಾಗಡಿ, ಕನಕಪುರ, ಹೊಸೂರು, ಆನೇಕಲ್ ಈ ಭಾಗದಲ್ಲಿ 168 ಕಿ.ಲೋ ಮೀಟರ್ ಕಾಮಗಾರಿ ಪ್ರಾರಂಭವಾಗಿಲ್ಲ ಎಂದು ದೂರಿದರು.</p>.<p>ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ, ಸಂಸದರಾದ ಸೋಮಣ್ಣ, ಡಾ. ಮಂಜುನಾಥ್ ಅವರಲ್ಲಿ ರೈತರ ಸಮಸ್ಯೆ ತಿಳಿಸಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಯೋಜನೆ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿದ್ದೇವೆ. ಆದರೂ, ಏನು ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಭೂಸ್ವಾಧೀನಕ್ಕೆ ಒಳಪಡುತ್ತಿರುವ ರೈತ ಮುಖಂಡರಾದ ಭರತ್ ಗೌಡ, ನಾರಾಯಣಗೌಡ, ಪುಟ್ಟಸ್ವಾಮಿ, ಶ್ರೀಧರ್, ಮನಮೋಹನ್, ಜಿ.ಎಸ್.ವೆಂಕಟೇಶ್, ಗೋಪಾಲ್ ಗೌಡ, ಶಿವಲಿಂಗಯ್ಯ ಸೇರಿದಂತೆ ನೂರಾರು ರೈತರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-14-1561509757</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>