<p>ಹಲಗೂರು: ಸಮೀಪದ ಗುಂಡಾಪುರ ಗೇಟ್ ಬಳಿ ಇರುವ ಅರಣ್ಯ ಇಲಾಖೆ ಕಚೇರಿ ಹಿಂಭಾಗದಲ್ಲಿ ಗುರುವಾರ ಬೆಳಿಗ್ಗೆ ಎರಡು ಕಾಡಾನೆಗಳು ಕಾಣಿಸಿಕೊಂಡು ಜನರಲ್ಲಿ ಅತಂಕ ಉಂಟು ಮಾಡಿದವು.</p>.<p>ಕಾವೇರಿ ವನ್ಯಜೀವಿ ವಲಯದ ಡಿಸಿಎಫ್ ಸುರೇಂದ್ರ ಮಾರ್ಗದರ್ಶನದಲ್ಲಿ ಗುರುವಾರ ಸಂಜೆ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಒಂದು ಗಂಡು ಮತ್ತು ಹೆಣ್ಣು ಆನೆಯನ್ನು ಹಲಗೂರು ಪಿಎಸ್ಐ ಸಹಕಾರದೊಂದಿಗೆ ಸುರಕ್ಷಿತವಾಗಿ ರಾಷ್ಟ್ರೀಯ ಹೆದ್ದಾರಿ ದಾಟಿಸಿ ರಾತ್ರಿ 8 ಗಂಟೆಗೆ ಬಸವನಬೆಟ್ಡ ಅರಣ್ಯ ವಲಯಕ್ಕೆ ತಲುಪಿಸುವಲ್ಲಿ ಯಶಸ್ವಿಯಾದರು.</p>.<p>ಕಾರ್ಯಾಚರಣೆಯಲ್ಲಿ ಕಾವೇರಿ ವನ್ಯಜೀವಿ ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗೇಂದ್ರ ಪ್ರಸಾದ್, ವಲಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಮೋದ್ ಕುಮಾರ್ ದೇವ್, ಅನಿಲ್ ಕುಮಾರ್, ಉಪವಲಯ ಅರಣ್ಯ ಅಧಿಕಾರಿ ನಿಹಾಲ್ ಗಸ್ತು ಅರಣ್ಯ ಪಾಲಕರು, ಆನೆ ಕಾರ್ಯಪಡೆಯ ಸದಸ್ಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-15-505800585</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಲಗೂರು: ಸಮೀಪದ ಗುಂಡಾಪುರ ಗೇಟ್ ಬಳಿ ಇರುವ ಅರಣ್ಯ ಇಲಾಖೆ ಕಚೇರಿ ಹಿಂಭಾಗದಲ್ಲಿ ಗುರುವಾರ ಬೆಳಿಗ್ಗೆ ಎರಡು ಕಾಡಾನೆಗಳು ಕಾಣಿಸಿಕೊಂಡು ಜನರಲ್ಲಿ ಅತಂಕ ಉಂಟು ಮಾಡಿದವು.</p>.<p>ಕಾವೇರಿ ವನ್ಯಜೀವಿ ವಲಯದ ಡಿಸಿಎಫ್ ಸುರೇಂದ್ರ ಮಾರ್ಗದರ್ಶನದಲ್ಲಿ ಗುರುವಾರ ಸಂಜೆ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಒಂದು ಗಂಡು ಮತ್ತು ಹೆಣ್ಣು ಆನೆಯನ್ನು ಹಲಗೂರು ಪಿಎಸ್ಐ ಸಹಕಾರದೊಂದಿಗೆ ಸುರಕ್ಷಿತವಾಗಿ ರಾಷ್ಟ್ರೀಯ ಹೆದ್ದಾರಿ ದಾಟಿಸಿ ರಾತ್ರಿ 8 ಗಂಟೆಗೆ ಬಸವನಬೆಟ್ಡ ಅರಣ್ಯ ವಲಯಕ್ಕೆ ತಲುಪಿಸುವಲ್ಲಿ ಯಶಸ್ವಿಯಾದರು.</p>.<p>ಕಾರ್ಯಾಚರಣೆಯಲ್ಲಿ ಕಾವೇರಿ ವನ್ಯಜೀವಿ ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗೇಂದ್ರ ಪ್ರಸಾದ್, ವಲಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಮೋದ್ ಕುಮಾರ್ ದೇವ್, ಅನಿಲ್ ಕುಮಾರ್, ಉಪವಲಯ ಅರಣ್ಯ ಅಧಿಕಾರಿ ನಿಹಾಲ್ ಗಸ್ತು ಅರಣ್ಯ ಪಾಲಕರು, ಆನೆ ಕಾರ್ಯಪಡೆಯ ಸದಸ್ಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-15-505800585</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>